ಕಸಾಪದಿಂದ ಒಂದು ದಿನದ ಕಥಾ ಕಮ್ಮಟಕ್ಕೆ ಚಾಲನೆ

ಕಲಬುರಗಿ: ಕಥಾ ಬರಹದಲ್ಲಿ ಇಂದಿನ ಹೊಸ ಪೀಳಿಗೆ ಆಸಕ್ತಿ ತೋರಬೇಕು ಎಂಬ ದೃಷ್ಠಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಒಂದು ದಿನದ ಕಥಾ ಕಮ್ಮಟ-2024 ನ್ನು ನಡೆಸುವ ಮೂಲಕ ವಿನೂತನ ಹೊಸ ಹೆಜ್ಜೆ ಇಟ್ಟಿದೆ.ಕಮ್ಮಟ ಉದ್ಘಾಟಿಸಿದ ಹಿರಿಯ ಕಥೆಗಾರರೂ ಆದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯ ಸಿದ್ಧರಾಮ ಹೊನ್ಕಲ್ ಮಾತನಾಡಿದರು.

ಈ ಭಾಗದಲ್ಲಿ ಕಥೆಗಾರರ ಕೊರತೆಯಿಲ್ಲ. ಅವರಿಗೆ ಬರವಣಿಗೆಯ ಕಲೆಯ ಕೊರಗು ಕಾಡುತ್ತಿದೆ. ಒಬ್ಬ ಕಥೆಗಾರ ಮತನ್ನ ಸುತ್ತಲಿನ ಹಂದರವನ್ನು ಅಕ್ಷರ ರೂಪದಿಂದ ಹೆಣೆದಾಗ ಆಸಕ್ತಿಯಿಂದ ಓದಲು ಸಾಧ್ಯ. ನಾವು ಬದುಕುವ ರೀತಿ ಕಥೆಯಾಗಿ ಕಾಡಬೇಕು ಮತ್ತು ನಮ್ಮ ಭಾವನೆಗಳು ಕಥೆಯಾದಾಗ ಮನಸ್ಸಿಗೆ ನಾಟುತ್ತವೆ. ನಾವೆಲ್ಲರೂ ಕಥೆಗಾರರು , ಸುಂದರ ಶೈಲಿಯ ಅಭಿವ್ಯಕ್ತಿ ಇಡೀ ಕಥಾ ವಸ್ತು ನಿರಂತರವಾಗಿ ಓದಿಸಿಕೊಂಡು ಹೋಗುತ್ತದೆ. ಜೀವನದ ಸ್ವಾನುಭವ ಮತ್ತು ಅನುಭವ ಮುಖ್ಯ. ಭಾವನೆಗಳು ಬಿಂಬವಾಗಿ ಕಾಡಬೇಕು. ಆಗ ಕಥೆ ನಮ್ಮೊಳಗೆ ಹುಟ್ಟುತ್ತದೆ ಎಂದರು.

ಪ್ರಾಚೀನ ಕಾಲದಿಂದಲೂ ಅನೇಕ ಕಥೆಗಳು ಹುಟ್ಟುತ್ತಲೇ ಬಂದಿವೆ. ಅವು ನಮ್ಮ ಜೀವನದ ಪ್ರತಿಬಿಂಬಗಳು ಎಂದ ಅವರು, ಕಲ್ಯಾಣ ನಾಡಿನ ಯುವ ಸಾಹಿತಿಗಳಿಗೆ ಪ್ರೋತ್ಸಾಹ ಅಗತ್ಯವಿದೆ.ಇಲ್ಲಿಯ ಬರಹಗಾರರ ಎಲ್ಲಾ ಕೃತಿಗಳನ್ನು ಸಾರ್ವಜನಿಕ ಗ್ರಂಥಾಲಯಕ್ಕೆ ಆಯ್ಕೆ ಮಾಡುವಲ್ಲಿ ಮುತುರ್ವಜಿ ವಹಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಯುವ ಪೀಳಿಗೆ ಇಂದಿನ ದಿನಮಾನಗಳಲ್ಲಿ ಓದುವ ಆಸಕ್ತಿ ಕಡಿಮೆಯಾಗುತ್ತಿದ್ದು, ಸಾಮಾಜಿಕ ಜಾಲತಾಣಗಳತ್ತ ಹೆಚ್ಚು ಸಮಯ ವಿನಿಯೋಗಿಸುವುದನ್ನು ಬಿಟ್ಟು ಸಾಹಿತ್ಯ, ಸಾಂಸ್ಕøತಿಕ ವಿಚಾರಗಳ ಕಡೆ ಒಲವು ಮೂಡಿಸಬೇಕಾಗಿದೆ. ಯುವ ಪೀಳಿಗೆ ಆಸಕ್ತಿ, ತಾಳ್ಮೆ, ಶ್ರದ್ಧೆಯಿಂದ ಸಾಹಿತ್ಯದ ಅಧ್ಯಯನ ಮಾಡಿದಲ್ಲಿ ಸಾಹಿತಿಗಳು ಕಥೆ, ಕಾವ್ಯ, ಕಾದಂಬರಿ ರಚಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಕಾರ್ಯ ಪರಿಷತ್ತು ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾಡುತ್ತಿದೆ.

ಪ್ರಾಧ್ಯಾಪಕ ಡಾ. ಶರಣಪ್ಪ ಸೈದಾಪೂರ, ಪಿಡಿಓ ರಾಜೇಶ್ವರಿ ಸಾಹು ವಾಡಿ, ಶಿಕ್ಷಣ ಇಲಾಖೆಯ ವಿ.ಎಂ.ಪತ್ತಾರ, ಕಮ್ಮಟದ ಸಂಚಾಲಕರಾದ ಶಿವರಾಜ ಅಂಡಗಿ, ಶರಣರಾಜ್ ಛಪ್ಪರಬಂದಿ, ಧರ್ಮಣ್ಣ ಎಚ್ ಧನ್ನಿ ಸಿದ್ಧಲಿಂಗ ಜಿ ಬಾಳಿ, ರವೀಂದ್ರಕುಮಾರ ಭಂಟನಳ್ಳಿ, ಬಾಬುರಾವ ಪಾಟೀಲ, ಎಂ ಎನ್ ಸುಗಂಧಿ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಶಕುಂತಲಾ ಪಾಟೀಲ ಜಾವಳಿ, ಶಿಲ್ಪಾ ಜೋಶಿ ಅನೇಕರು ವೇದಿಕೆ ಮೇಲಿದ್ದರು.

ನಂತರ ನಡೆದ ಗೋಷ್ಠಿಗಳಲ್ಲಿ ಕಥಾ ಸಾಹಿತ್ಯದ ತತ್ವ-ಸತ್ವ-ಮಹತ್ವ ಕುರಿತು ಡಾ. ಸ್ವಾಮಿರಾವ ಕುಲಕರ್ಣಿ, ಕಥಾ ಸಾಹಿತ್ಯದ ಶೈಲಿ-ತಂತ್ರ ಕುರಿತು ಹಿರಿಯ ಕಥೆಗಾರ ಡಾ. ಕೆ.ಎಸ್. ನಾಯಕ್, ಕಥಾ ಸಾಹಿತ್ಯದ ಸ್ವರೂಪ-ವಸ್ತು-ಭಾಷೆ ಕುರಿತು ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ, ಕಥಾ ಸೃಷ್ಠಿಗೆ ಬೇಕಾದುದೇನು? ವಿಷಯದ ಕುರಿತು ಲೇಖಕಿ ಕಾವ್ಯಶ್ರೀ ಮಹಾಗಾಂವಕರ್ ಮಾತನಾಡಿದರು.

ಪ್ರೊ. ನೀಲಕಂಠ ಕಣ್ಣಿ, ಧರ್ಮರಾಯ ಜವಳಿ, ಸಿದ್ಧರಾಮ ಸಿ ಸರಸಂಬಿ, ಈರಯ್ಯಾ ಹಿರೇಮಠ, ಬಿ.ಜಿ. ಪಾಟೀಲ, ಸಂಜೀವಕುಮಾರ ಡೊಂಗರಗಾಂವ, ಸಚೀನಕುಮಾರ ಮಣೂರೆ, ಸಂಜೀವ ಟಿ ಮಾಲೆ, ಡಾ. ರಾಜಶೇಖರ ಮಾಂಗ್, ಚನ್ನಮಲ್ಲಯ್ಯ ಹಿರೇಮಠ, ಭಾಗ್ಯಲತಾ ಶಾಸ್ತ್ರೀ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ನಾಡಿನ ಹಿರಿಯ ಕಥೆಗಾರ ಡಾ. ಬಾಳಾಸಾಹೇಬ ಲೋಕಾಪೂರ ಅವರು ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿ, ಜೀವನದಲ್ಲಿ ಹುದುಗಿರುವ ಅನೇಕ ಕಥೆಗಳು ನಮ್ಮೊಂದಿಗೆ ಹಾಸು ಹೊಕ್ಕಾಗಿವೆ.

ಅವುಗಳನ್ನು ಕಲಾತ್ಮಕವಾಗಿ ನಿರೂಪಿಸಿದಾಗ ಸಂವೇದನಾಶೀಲ ಕಥೆಯಾಗಿ ಸಮಾಜಮುಖಿಯಾಗಿ ಸಾಹಿತ್ಯವಾಗಿ ರೂಪುಗೊಳ್ಳಲು ಸಾಧ್ಯ. ಕಥೆಗಳನ್ನು ಹುಡುಕಿಕೊಂಡು ಹೋಗುವುದು ಬೇಡ. ಅನೇಕ ಜೀವಂತ ಕಥೆಗಳು ನಮ್ಮ ಜೊತೆಯಲ್ಲಿ ಸಾಗುತ್ತವೆ. ಅವುಗಳಿಗೆ ಅಕ್ಷರರೂಪ ಕೊಟ್ಟು ಓದುಗರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಆಗ ಅದು ಸಂವೇದನಾಶೀಲ ಕಥೆಯಾಗುತ್ತದೆ. ಕಥಾ ವಸ್ತು ಆಯ್ಕೆ, ಅಭಿವ್ಯಕ್ತಿಯ ಶೈಲಿ ಹಾಗೂ ಸಮಜಕ್ಕೆ ನಿಡುವ ಸಂದೇಶಗಳಿದ್ದರೆ ಅಂಥ ಕಥೆಗಳು ಜೀವಂತವಾಗಿರುತ್ತವೆ ಎಂದರು.

ಪ್ರಾಧ್ಯಾಪಕ ಡಾ. ಶಿವಶರಣಪ್ಪ ಮೋತಕಪಳ್ಳಿ ಮಾತನಾಡಿ, ಸಾಹಿತ್ಯ ಸಮಾಜದ ಕೈಗನ್ನಡಿಯಾಗಿರಬೇಕು. ಸಾಹಿತ್ಯದಿಂದ ಮಾತ್ರ ಸಾಮಾಜಿಕ ಸಾಮರಸ್ಯ ಮೂಡಲು ಸಾಧ್ಯ ಎಂದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

11 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

14 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

18 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

19 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

21 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420