ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬೈಕ್, ಬೈಸಿಕಲ್ ಮತ್ತು ವಾಕರ್ಸ್ ಸೇರಿ ಸಾವಿರಾರು ಜನ ಭಾಗಿ

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ಕಾವೇರಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ವಾಕಾಥಾನ್

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ನಗರದ ಕಾವೇರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ವಿಶೇಷ ವಾಕಾಥಾನ್‍ನಲ್ಲಿ ಸಾವಿರಾರು ಹೆಣ್ಣುಮಕ್ಕಳು, ನಾಗರಿಕರು ಅತ್ಯುತ್ಸಾಹದಿಂದ ಭಾಗವಹಿಸಿದರು.

ಮಾರತಹಳ್ಳಿಯಲ್ಲಿರುವ ಕಾವೇರಿ ಆಸ್ಪತ್ರೆಯ ಆವರಣದಲ್ಲಿ ಭಾನುವಾರ ಬೆಳಗ್ಗೆ 6:30ಕ್ಕೆ ಖ್ಯಾತ ನಟಿ ಪ್ರಣಿತ ಸುಭಾμï ಅವರು ವಾಕಾಥಾನ್, ಬೈಕ್ ರ್ಯಾಲಿ ಮತ್ತು ಬೈಸಿಕಲ್ ರ್ಯಾಲಿಗೆ ಚಾಲನೆ ನೀಡಿದರು.

ಸುಮಾರು 500 ಬೈಕುಗಳು 1200 ಸೈಕಲ್‍ಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದರು. ಮಾರತಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ವಾಕಾಥಾನ್ ವೇಳೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ನಟಿ ಪ್ರಣಿತ ಸುಭಾμï, ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಪ್ರಜಾಪ್ರಭುತ್ವದ ಅತಿ ದೊಡ್ಡ ಉತ್ಸವವಾಗಿರುವ ಲೋಕಸಭಾ ಚುನಾವಣೆಯಲ್ಲಿ ನಾವು ಮತದಾನ ಮಾಡುವ ಮೂಲಕ ಭಾಗವಹಿಸಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮಹಿಳಾ ದಿನಾಚರಣೆ ಸಂದರ್ಭದಲ್ಲೇ ಈ ಮತದಾನ ಜಾಗೃತಿ ಕಾಯಕ್ರಮ ಆಯೋಜಿಸಿರುವುದು ಸ್ಪೂರ್ತಿದಾಯಕ. ನಾಗರಿಕರು ತಮಗೆ ಏನು ಬೇಕು? ಏನು ಬೇಡ? ಎನ್ನುವ ಕುರಿತಾದ ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯಕ ಎಂದು ಹೇಳಿದರು.

ದೇಶದ ಐಟಿ ರಾಜಧಾನಿ ಆಗಿರುವ ಬೆಂಗಳೂರಿನಲ್ಲಿ ನಾಗರಿಕರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಮ್ಮ ಪರಿಚಿತರಿಗೆ, ಸ್ನೇಹಿತರಿಗೆ ಮತದಾನ ಮಾಡುವಂತೆ ತಿಳಿಸಬೇಕು. ಪ್ರಜಾಪ್ರಭುತ್ವದ ಯಶಸ್ಸು ನಾಗರಿಕರು ಮತ ಚಲಾವಣೆಯಿಂದ ನಿರ್ಧಾರವಾಗುತ್ತದೆ ಎಂದು ಬಿಬಿಎಂಪಿ ಚುನಾವಣೆಗಳ ವಿಶೇಷ ಆಯುಕ್ತರಾದ ಡಾ. ಆರ್. ಸೇಲ್ವಮಣಿ ಹೇಳಿದರು.

ಚುನಾವಣಾ ಆಯೋಗದ ಮಾಧ್ಯಮ ಮುಖ್ಯಸ್ಥರಾದ ಜಡಿಯಪ್ಪ ಗೆದ್ಲಗಟ್ಟಿ, ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್. ವಿಜಯಭಾಸ್ಕರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420