ಕಲಬುರಗಿ; ರಾಯಚೂರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಪ್ರಸ್ತುತ ಚಿಕ್ಕೋಡಿಯ ಉಪವಿಭಾಗದ ದಂಡಾಧಿಕಾರಿಯಾಗಿ ಸೇವೆಯಲ್ಲಿರುವ ಶ್ರೀಮತಿ ಮಹಿಬೂಬಿ ಎಂ.ಕಾರಟಗಿ ಅವರಿಗೆ ಪ್ರತಿಷ್ಠಿತ “ಶ್ರೀಮಂತ್ರಾಲಯ ಪರಿಮಳ” ಪ್ರಶಸ್ತಿಯನ್ನು ಮಂತ್ರಾಲಯದ ಪರಮಪೂಜ್ಯ ಶ್ರೀಪಾದಂಗಳವರು ಪ್ರದಾನ ಮಾಡಿ ಸನ್ಮಾನಿಸಿ ಆಶೀರ್ವದಿಸಿದರು.
ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಶ್ರೀಕ್ಷೇತ್ರದಲ್ಲಿ ಮಾರ್ಚ 17 ರ ಸಂಜೆ ಜರುಗಿದ ಭವ್ಯ ಕಾರ್ಯಕ್ರಮದಲ್ಲಿ ಶ್ರೀಮತಿ ಮಹಿಬೂಬಿ ಎಂ.ಕಾರಟಗಿ ದಂಪತಿಗೆ ಪೂಜ್ಯರು ಸನ್ಮಾನಿಸಿ ಗೌರವಿಸಿದರು. ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಎಂ.ಎಂ.ಕಾರಟಗಿ ಅವರಿಗೆ ಸಹೋದರ ಕಲಬುರಗಿಯ ಹಿರಿಯ ಪತ್ರಕರ್ತ ನಜೀರಮಿಯಾನ್ ಹಟ್ಟಿ ಸೇರಿದಂತೆ ಅರಕೇರ, ಹಟ್ಟಿಚಿನ್ನದ ಗಣಿ ಮತ್ತು ಕಾರಟಗಿಯ ಆಪ್ತರು, ಬಂಧು ಮಿತ್ರರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಶಸ್ತಿ ಪುರಸ್ಕøತರ ನುಡಿ: “ಮಂತ್ರಾಲಯಂ ಪರಿಮಳ” 2024 ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿ ಈ ಪುಣ್ಯ ಕ್ಷೇತ್ರದ ಪರಮ ಪೂಜ್ಯ ಶ್ರೀಪಾದಂಗಳವರ ಹಸ್ತದಿಂದ ಪ್ರಶಸ್ತಿ ಮತ್ತು ಆಶೀರ್ವಾದ ಪಡೆಯುವ ಮೂಲಕ ತಮ್ಮ ಕುಟುಂಬಕ್ಕೆ ಧನ್ಯತೆಯ ಭಾವ ಪ್ರಾಪ್ತವಾಗಿದೆ ಎಂದು ಅವರು ಹೇಳಿದರು.
ಕಷ್ಟದ ಕಾಲದಲ್ಲಿ ನನಗೆ ಉನ್ನತ ಶಿಕ್ಷಣ ಕೊಡಿಸಲು ಶ್ರಮಿಸಿರುವ ನನ್ನ ತಂದೆಯವರಾದ ದಿವಂಗತ ಅಬ್ದುಲ್ ಸಾಬ್ ಅರಕೆರರವರಿಗೆ ಹಾಗೂ ನನ್ನ ಸ್ಪರ್ಧಾತ್ಮಕ ಶೈಕ್ಷಣಿಕ ವ್ಯಾಸಂಗಕ್ಕೆ ಬೆನ್ನಲುಬು ಆಗಿ ನಿಂತ ಕುಟುಂಬ ಪರಿವಾರದವರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ತಾವು ಈ ಹಿಂದೆ ಸಹ ಕುಟುಂಬ ಪರಿವಾರ ಸಮೇತ ಶ್ರೀಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಾ ಬಂದಿದ್ದೇನೆ. ರಾಘವೇಂದ್ರ ಸ್ವಾಮೀಜಿಯವರು ಸ್ವಯಂ ಖುದ್ದಾಗಿ ಆಶೀರ್ವಾದ ಮಾಡಿದ್ದಾರೆ ಎಂದು ಭಾವಿಸುತ್ತೇನೆ ಅಲ್ಲದೇ ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದ್ದು, ಯಾವುದೇ ಭೇದ ಭಾವವಿಲ್ಲದೆ ಮನುಕುಲದ ಶ್ರೇಯಾಭಿವೃದ್ಧಿಗೆ ಕೆಲಸ ಮಾಡಲು ಹುಮ್ಮಸ್ಸು ಹೆಚ್ಚಿದಂತಾಗಿದೆ. ತಮ್ಮ ಹಾಗೂ ಕುಟುಂಬದವರ ಮೇಲೆ ಶ್ರೀರಾಯರ ಆಶೀರ್ವಾದವಾಗಿದೆ ಎಂದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…