ಕಟ್ಟಡ ಕಟ್ಟುವ ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಉದ್ಘಾಟನೆ

ಸುರಪುರ: ರಾಜ್ಯ ಸರಕಾರದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಬದುಕು ನಾಶ ಮಾಡಲು ಮುಂದಾಗಿದ್ದಾರೆ ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಪ್ರಭುದೇವ ವೇಳಸಿಂಗಿ ಮಾತನಾಡಿದರು.

ನಗರದ ರಂಗಂಪೇಟೆಯ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಎಐಟಿಯುಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಂಗಂಪೇಟೆ ನಗರ ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಸಂತೊಷ ಲಾಡ್ ಅವರು ಎಲ್ಲಾ ಹಣವನ್ನು ತಮ್ಮ ಸರಕಾರಕ್ಕೆ ಬಳಕೆ ಮಾಡಿಕೊಂಡು ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಕಾಮಗಾರಿಯ ಪರವಾನಿಗೆ ಪ್ರತಿ ನೀಡಬೇಕು ಎನ್ನುವ ಇಲ್ಲದ ನಿಯಮಗಳನ್ನು ಜಾರಿಗೆ ತಂದು ಕಾರ್ಮಿಕರಿಗೆ ತೊಂದರೆ ಮಾಡುತ್ತಿದ್ದಾರೆ.ಎಷ್ಟೋ ಮಾಲೀಕರು ಕಟ್ಟಡ ಕಟ್ಟಲು ಪರವಾನಿಗೆಯನ್ನೇ ತೆಗೆದುಕೊಳ್ಳುವುದಿಲ್ಲ,ಆದರೆ ಕಾರ್ಮಿಕರ ನೊಂದಣಿಗೆ ಹಾಗೂ ಕಾರ್ಡ್‍ಗಳ ನವೀಕರಣಕ್ಕೆ ಕಟ್ಟಡ ಪರವಾನಿಗೆ ಬೇಕು ಎಂದು ವಿಳಂಬ ಮಾಡಿ ತೊಂದರೆ ಮಾಡುತ್ತಾರೆ.

ಕಾರ್ಮಿಟಕರ ಮಕ್ಕಳಿಗೆ ಲ್ಯಾಪ್‍ಟಾಪ್ ಕೊಡುವಲ್ಲಿ ಲ್ಯಾಪಟಾಪ್ ಖರಿದಿಯಲ್ಲಿ ಸರಕಾರ ಭ್ರಷ್ಟಾಚಾರ ನಡೆಸಿದೆ,ಕಾರ್ಮಿಕರ ಮಕ್ಕಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನದ ಹಣದಲ್ಲಿ ಕಡಿತಗೊಳಿಸಿ ಕೇಳಿದರೆ ಶಾಲಾ ಕಾಲೇಜುಗಳ ಹೆಸರು ದಾಖಲೆಗೆ ಶುಲ್ಕ ಕಡಿಮೆಗೊಳಿಸಲಾಗಿದೆ ಎಂದು ಕಾರಣ ಹೇಳುತ್ತಾರೆ.ಇಂತಹ ಅನೇಕ ಕಾರಣಗಳನ್ನು ವಿರೋಧಿಸಿ ನಮ್ಮ ಎಐಟಿಯುಸಿ ವತಿಯಿಂದ ಮುಂದಿನ ತಿಂಗಳು ಬೃಹತ್ ಪ್ರತಿಭಟನೆ ನಡೆಸಲಿದ್ದು ಆಗ ತಾವೆಲ್ಲರು ಭಾಗವಹಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಪತ್ತಾರ,ಅಕ್ಷರ ದಾಸೋಹ ಜಿಲ್ಲಾಧ್ಯಕ್ಷ ಕಲ್ಪನಾ ಗುರಸುಣಗಿ,ಎಐಟಿಯುಸಿ ಜಿಲ್ಲಾ ಪ್ರ.ಕಾರ್ಯದರ್ಶಿ ತಿಮ್ಮಯ್ಯ ತಳವಾರ,ಮುಖಂಡರಾದ ಅಬ್ದುಲ್‍ಗಫೂರ ನಗನೂರಿ,ಅಬ್ದುಲ್ ಅಲೀಂ ಗೋಗಿ,ಎನ್‍ಎಫ್‍ಐಯುಸಿ ಪದ್ಮಾ ಪಾಟೀಲ್ ಕಲಬುರ್ಗಿ,ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ಶಿವಲಿಂಗಮ್ಮ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂಘದ ರಂಗಂಪೇಟ ನಗರ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಗುರುತಿನ ಚೀಟಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ರಮೇಶ ಡೊಳ್ಳೆ,ನಾಗಪ್ಪ ಕಟ್ಟಿಮನಿ,ವಾಸುದೇವ ಮಂಗಳೂರ,ನಾಸಿರ್ ಕುಂಡಾಲೆ, ಅಕ್ಷರ ದಾಸೋಹ ಜಿಲ್ಲಾ ಪ್ರ.ಕಾರ್ಯದರ್ಶಿ ಶ್ರೀದೇವಿ ಹುಣಸಗಿ,ಎಐಟಿಯುಸಿ ತಾ.ಅಧ್ಯಕ್ಷ ದೇವಿಂದ್ರಪ್ಪ ನಗರಗುಂಡ,ತಾ.ಗೌರವಾಧ್ಯಕ್ಷ ತಿಮ್ಮಯ್ಯ ದೊರೆ,ಮರೆಪ್ಪ ದೇಸಾಯಿ,ಮಹಿಬೂಬ ರುಕ್ಮಾಪುರ ವೇದಿಕೆ ಮೇಲಿದ್ದರು.

ನಗರ ಘಟಕದ ಪದಾಧಿಕಾರಿಗಳು: ಬಾಲಪ್ಪ ಗೌರವಾಧ್ಯಕ್ಷ, ಅಯ್ಯಪ್ಪ ವಗ್ಗಾಲಿ ಅಧ್ಯಕ್ಷ,ಮಲ್ಲಪ್ಪ,ಹಣಮಂತ ಉಪಾಧ್ಯಕ್ಷರು,ಶರಣಬಸಪ್ಪ ಪೂಜಾರಿ ಪ್ರ.ಕಾರ್ಯದರ್ಶಿ,ದ್ಯಾಮಗೌಡ ಖಜಾಂಚಿ,ಮಲ್ಲಪ್ಪ ಉಪ ಖಜಾಂಚಿ, ಅಮೀತ್,ವಿಶ್ವನಾಥ,ಜಿಲಾನಿ,ಮಹ್ಮದ್ ಖಾಸಿಂ,ಚಂದಪ್ಪ,ನಾಗರಾಜ,ಅಲೀಮ್,ಮರೆಪ್ಪ ಸಂಘಟನಾ ಕಾರ್ಯದರ್ಶಿಗಳು,ಮೊಹ್ಮದ್ ಯೂಸುಫ್,ಸಿದ್ದರಾಜ,ರಫೀಕ್,ಮಹೇಬೂಬ್ ಹಾಗೂ ತಿಮ್ಮಣ್ಣ ಇವರನ್ನು ಸಹ ಕಾರ್ಯದರ್ಶಿಗಳನ್ನಾಗಿ ನೇಮಕಗೊಳಿಸಲಾಯಿತು.

ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಕೂಡ ಕಾರ್ಮಿಕ ವಿರೋಧಿ ಪಕ್ಷಗಳೆ,ಕಾಂಗ್ರೆಸ್‍ನವರು ಕಳ್ಳರು,ಬಿಜೆಪಿಯವರು ಕೊಲೆಗಡುಕರು ನಾವು ಯಾರನ್ನು ಬೆಂಬಲಿಸಬೇಕು ಎನ್ನುವುದನ್ನು ತುಂಬಾ ಯೋಚಿಸಬೇಕು. – ಪ್ರಭುದೇವ ವೇಳಸಿಂಗಿ ಎಐಟಿಯುಸಿ ರಾಜ್ಯ ಉಪಾಧ್ಯಕ್ಷ

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

7 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420