ಕಲಬುರಗಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಸೇರಿದಂತೆ ಇತರೆಲ್ಲೆಡೆ ತಪಾಸಣಾ ಸಿಬ್ಬಂದಿ ಗಸ್ತು ಚುರುಕುಗೊಂಡಿದ್ದು, ರವಿವಾರ (ಮಾ.17 ರಂದು) ಯಡ್ರಾಮಿ ತಾಲೂಕಿನ ಯಡ್ರಾಮಿ ತಾಲೂಕಿನ ಎಸ್.ಎನ್.ಹಿಪ್ಪರಗಾ ಗ್ರಾಮದ ಬಸ ನಿಲ್ದಾಣ ಹತ್ತಿರ ವಾಹನಗಳ ತಪಾಸಣೆ ಸಂದರ್ಭದಲ್ಲಿ ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 214.560 ಲೀಟರ ಮದ್ಯ ಹಾಗೂ ವಿವಿಧ ಬ್ರಾಂಡುಗಳ 117.360 ಲೀಟರ ಬೀಯರ್ ವಶಕ್ಕೆ ಪಡೆಯಲಾಗಿದೆ.
ಮಂದೇವಾಲ ಗ್ರಾಮದ ಕಡೆಯಿಂದ ಎಸ್.ಎನ್.ಹಿಪ್ಪರಗಾ ಗ್ರಾಮದ ಕಡೆಗೆ ಬರುತ್ತಿದ್ದ ಮಾರುತಿ ಸುಜಕಿ ಈಕೋ ಕಾರ್ ನೊಂದಣಿ ಸಂಖ್ಯೆ ಕೆಎ.21 ಪಿ.4470 ರಲ್ಲಿ ಅಕ್ರಮವಾಗಿ ವಿವಿಧ ಬ್ರಾಂಡುಗಳ 214.560 ಲೀಟರ ಮದ್ಯ ಹಾಗೂ ವಿವಿಧ ಬ್ರಾಂಡುಗಳ 117.360 ಲೀಟರ ಬಿಯರನ್ನು ಹೊಂದಿ ಮಾರಾಟದ ಉದ್ದೇಶಕ್ಕಾಗಿ ಸಾಗಾಣಿಕೆ ಮಾಡುತ್ತಿರುವದನ್ನು ಪತ್ತೆ ಹಚ್ಚಿದ ಸಿ.ಪಿ.ಐ ಕವಿತಾ ನೇತೃತ್ವದ ಅಬಕಾರಿ ತನಿಖಾ ತಂಡವು ಕಾರಿನ ಸಮೇತ ಮದ್ಯವನ್ನು ವಶಕ್ಕೆ ಪಡೆದಿದೆ.
ಪ್ರಕರಣದಲ್ಲಿ ಅಬಕಾರಿ ಕಾಯ್ದೆ 1965 ಕಲಂ 11, 14, ಹಾಗೂ 15ರ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಕಲಂ 32(1) ಕಲಂ 38(ಎ)ರ ಪ್ರಕಾರ ಜಪ್ತಿಯಾದ ಮದ್ಯ ಹಾಗೂ ಬೀರ ಮುದ್ದೇಮಾಲಿನ ಮೌಲ್ಯ 1,54,952 ರೂ. ಹಾಗೂ 3 ಲಕ್ಷ ರೂ. ಮೌಲ್ಯದ ಮಾರುತಿ ಸುಜಕಿ ಈಕೋ ಕಾರ್ ಜಪ್ತಿ ಮಾಡಲಾಗಿದೆ. ಅಕ್ರಮ ಮದ್ಯ ಸಾಗಣೆ ಹಿನ್ನೆಲೆಯಲ್ಲಿ ಕಾರ್ ಚಾಲಕ ಯಡ್ರಾಮಿ ತಾಲೂಕಿನ ರವಿಕುಮಾರ ತಂದೆ ಚಂದ್ರಾಮ ಹುಣಚಾಳ ಇವರ ವಿರುದ್ಧ ಅಬಕಾರಿ ಇಲಾಖೆಯ ಕಲಬುರಗಿ ಉಪ ವಿಭಾಗ ಕಚೇರಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುರೆಸಿದೆ.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…
ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…