ಬಿಸಿ ಬಿಸಿ ಸುದ್ದಿ

ಅಫಜಲಪುರ ನೀರಿಗೆ ಆಹಾಕಾರ: ನಾಟಿಕಾರ್ ಅಮರಣಾಂತ ಉಪವಾಸ ಸ್ಥಳಕ್ಕೆ ಸಂಸದ ಜಾಧವ್ ಭೇಟಿ

ಅಫಜಲಪುರ: ತಾಲೂಕಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ತಲೆದೋರಿದ್ದು ಕೃಷಿ ಭೂಮಿ ಒಣಗಿದ್ದು ಸರಕಾರ ಕೂಡಲೇ ಮಧ್ಯೆ ಪ್ರವೇಶಿಸಿ ಶಿವಕುಮಾರ್ ನಾಟಿಕಾರ್ ಅಮರಣಾಂತ ಉಪವಾಸವನ್ನು ಕೊನೆಗೊಳಿಸಬೇಕೆಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಸರಕಾರಕ್ಕೆ ಮನವಿ ಮಾಡಿದ್ದಾರೆ .

ಅಫಜಲಪುರದ ಅಂಬೇಡ್ಕರ್ ವೃತ್ತದಲ್ಲಿ ಜೆಡಿಎಸ್ ಮುಖಂಡರಾದ ಶಿವ ಕುಮಾರ್ ನಾಟಿಕಾರ್ ಅವರು ಮಾರ್ಚ್ 15ರಿಂದ ಭೀಮಾ ನದಿಗೆ ನೀರು ಹರಿಸಿ ಕುಡಿಯಲು ನೀರು ಕುಡಿ ಹಾಗೂ ರೈತರ ಜೀವ ಉಳಿಸಿ ಎಂಬ ಬೇಡಿಕೆಯನ್ನು ಮುಂದಿಟ್ಟು ಆರಂಭಿಸಿದ ಅಮರಣಾಂತ ಉಪವಾಸ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.

ರಾಜ್ಯ ಜಲ ಸಂಪನ್ಮೂಲ ಖಾತೆ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಕ್ಷಣ ಮಧ್ಯಪ್ರವೇಶಿಸಿ ಐದು ದಿನಗಳಿಂದ ನಡೆಸುವ ಉಪವಾಸ ಮುಷ್ಕರವನ್ನು ಕೊನೆಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಚಾವತ್ತು ವರದಿಯಲ್ಲಿ 15 ಟಿಎಂಸಿ ನೀರನ್ನು ಬಳಸಲು ಕರ್ನಾಟಕ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಉಜಿನಿ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹವಿದ್ದರೆ ಮಾನವೀಯ ದೃಷ್ಟಿಯಲ್ಲಿ ಕುಡಿಯಲು ನೀರು ಪೂರೈಸುವುದಕ್ಕಾಗಿ ಭೀಮಾ ನದಿಗೆ ನೀರು ಹರಿಬಿಡಬೇಕು ಎಂದು ಅವರು ಮನವಿ ಮಾಡಿದರು.

ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಲಬುರ್ಗಿ ಜಿಲ್ಲಾಧಿಕಾರಿಗಳ ಮೂಲಕ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ಮಾಡಲು ಪ್ರಯತ್ನಿಸಲಾಗುವುದು ಇದಕ್ಕಾಗಿ ಅಫಜಲ್ಪುರದ ಸರ್ವ ಪಕ್ಷಗಳ ಸದಸ್ಯರ ಜೊತೆ ಅಗತ್ಯವಿದ್ದಲ್ಲಿ ಬೆಂಗಳೂರಿಗೆ ನಿಯೋಗ ತೆರಳಲು ಸಿದ್ಧ ಎಂದು ಹೇಳಿದರು.

ಕಾನೂನಾತ್ಮಕ ಕ್ರಮವನ್ನು ರಾಜ್ಯ ಸರ್ಕಾರವೇ ಕೈಗೊಳ್ಳಬೇಕಾಗಿರುವುದರಿಂದ ಮಾನವೀಯತೆಯ ದೃಷ್ಟಿಯಿಂದ ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳು ತಕ್ಷಣ ಈ ಸಮಸ್ಯೆಯನ್ನು ಬಗೆಹರಿಸಿ ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ಮುಂಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದರು.

ಸತ್ಯಾಗ್ರಹ ಸ್ಥಳದಲ್ಲಿ ವೈದ್ಯರಾದರು ಜಾಧವ್: ಸತ್ಯಾಗ್ರಹ ಸ್ಥಳದಲ್ಲಿ ಕಳೆದ ಐದು ದಿನಗಳಿಂದ ಅಮರಣಾಂತ ಉಪವಾಸ ನಡೆಸುತ್ತಿರುವ ಶಿವಕುಮಾರ್ ನಾಟಿಕಾರ್ ಅವರ ಆರೋಗ್ಯ ಸ್ಥಿತಿ ಏರುಪೇರಾಗಿರುವುದರಿಂದ ಡಾ. ಉಮೇಶ್ ಜಾಧವ್ ಅವರು ಪರೀಕ್ಷೆ ಮಾಡಿ ತಮ್ಮ ಮೂಲ ವೈದ್ಯ ವೃತ್ತಿಯನ್ನು ಮಾಡಿ ಜನ ಪ್ರೀತಿಗೆ ಪಾತ್ರರಾದರು.

ನಾಟಿಕಾರ್ ಅವರ ಬಿಪಿ, ಶುಗರ್ ಸೇರಿದಂತೆ ಆರೋಗ್ಯ ಸ್ಥಿತಿಯನ್ನು ಪರೀಕ್ಷೆ ಮಾಡಿದ ಜಾಧವ್ ತಕ್ಷಣದಲ್ಲೇ ತಾಲೂಕು ಸರಕಾರಿ ವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಸ್ಥಳಕ್ಕೆ ಕರೆಸಿ ವಿಪರೀತವಾಗಿ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವುದರಿಂದ ತಕ್ಷಣದಲ್ಲೇ ಆರೋಗ್ಯ ಕಾಪಾಡಲು ವೈದ್ಯಕೀಯ ಸಲಹೆಯನ್ನು ನೀಡಿದರು.

ಅಮರಣಾಂತ ಉಪವಾಸ ಮುಂದುವರಿಸಿದಲ್ಲಿ ದೇಹವು ಗಂಭೀರ ಸ್ಥಿತಿಗೆ ತಲುಪುವ ಎಚ್ಚರಿಕೆಯನ್ನು ನೀಡಿದರಲ್ಲದೆ ಕೂಡಲೇ ಸರಕಾರ ಸ್ಪಂದನೆ ಮಾಡದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇದೆ ಎಂದು ಸಲಹೆಯಿತ್ತರು.

ನಾಟಿಕಾರ್ ಅವರನ್ನು ಬೆಂಬಲಿಸಿ ಸರ್ವ ಪಕ್ಷಗಳ ನಾಯಕರು ಮತ್ತು ಅಭಿಮಾನಿಗಳು ಅಂಬೇಡ್ಕರ್ ವೃತ್ತದ ನಿರಶನ ಸ್ಥಳಕ್ಕೆ ಭೇಟಿ ಮಾಡಿ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿರುವುದು ಕಂಡುಬಂತು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago