ಮತ ಚಲಾಯಿಸಲು ಬೂತಿಗೆ ಹೋಗುವ ಮೆದುಳು; “ಚಂದಾ”ಮಾಮ ಕಥೆ

0
19

ಒಮ್ಮೆ ಸಿಂಹಕ್ಕೆ ಜೋರಾಗಿ ಹಸಿವೆಯಾಯ್ತು, ಪಕ್ಕದಲ್ಲಿದ್ದ ನರಿಯೊಂದಿಗೆ ಹೇಳಿತು: “ನನಗೇನಾದರು ತಿನ್ನಲು ತಂದು ಕೊಡು, ಇಲ್ಲದಿದ್ದರೆ ನಾನು ನಿನ್ನನ್ನು ಕೊಂದು ತಿನ್ನುತ್ತೇನೆ.” ನರಿ ನೇರ ಒಂದು ಕತ್ತೆಯ ಬಳಿ ಹೋಗಿ ಹೇಳಿತು: “ಸಿಂಹ ನಿನ್ನನ್ನು ರಾಜನನ್ನಾಗಿ ಮಾಡ್ತಾನಂತೆ,ಬಾ ನನ್ನ ಜೊತೆ.” ಕತ್ತೆಯನ್ನು ಕಂಡಾಗ ಸಿಂಹ ಅದರ ಮೇಲೆ ಆಕ್ರಮಿಸಿತು, ಕಿವಿಯನ್ನು ಕಚ್ಚಿ ಕತ್ತರಿಸಿತು, ಆದರೆ ಕತ್ತೆ ಹೇಗೋ ತಪ್ಪಿಸಿಕೊಂಡು ಅಲ್ಲಿಂದ ಓಡಿ ಹೋಯಿತು.

ಕತ್ತೆ ನರಿಯೊಂದಿಗೆ ಕೇಳಿತು, “ನೀನು ನನಗೆ ಮೋಸ ಮಾಡಿ ಬಿಟ್ಟೆ ಅಲ್ವಾ?…! ” ನರಿ ಹೇಳಿತು: “ಮುಠ್ಠಾಳನಂತೆ ಮಾತಾಡ್ಬೇಡ, ನಿನ್ನ ತಲೆಗೆ ಕಿರೀಟ ತೊಡಿಸಲು ನಿನ್ನ ಕಿವಿಯನ್ನು ಕತ್ತರಿಸಿದ್ದು.”‘ ಕತ್ತೆ ಅದು ಸತ್ಯವಾಗಿರಬಹುದು ಎಂದು ಭಾವಿಸಿ ಮತ್ತೆ ಸಿಂಹದ ಬಳಿ ಹೋಯಿತು… ಸಿಂಹ ಪುನಃ ಕತ್ತೆಯನ್ನು ಆಕ್ರಮಿಸಿ ಕಚ್ಚಿ ಬಾಲವನ್ನು ಕತ್ತರಿಸಿ ಹಾಕಿತು..!, ಕತ್ತೆ ಮತ್ತೊಮ್ಮೆ ಪಾರಾಗಿ ಹೋಗಿ ನರಿಯೊಂದಿಗೆ ಕೇಳಿತು “ನೀನು ನನ್ನಲ್ಲಿ ಸುಳ್ಳು ಹೇಳಿದ್ದಲ್ವಾ?!.

Contact Your\'s Advertisement; 9902492681

ನರಿ ಹೇಳಿತು: “ಅಯ್ಯೋ ಪೆದ್ದುಮುಂಡೇದು, ನಿನಗೆ ಸಿಂಹಾಸನದಲ್ಲಿ ಆರಾಮವಾಗಿ ಕುಳಿತುಕೊಳ್ಳಲು ಬೇಕಾಗಿ ತಾನೇ ನಿನ್ನ ಬಾಲವನ್ನು ಕತ್ತರಿಸಿದ್ದು”… ಕತ್ತೆ ವಾಪಸ್ ಸಿಂಹದ ಬಳಿ ಹೋಗುವಂತೆ ಮನವೊಲಿಸಿತು ನರಿ. ಈಗ ಸಿಂಹ ಕತ್ತೆಯನ್ನು ಹಿಡಿದು ಕೊಂದು ಹಾಕಿತು…! ಸಿಂಹ ನರಿಯೊಂದಿಗೆ ಹೇಳಿತು: “ನೀನು ಒಳ್ಳೆಯ ಕೆಲಸ ಮಾಡಿದೆ, ವೆಲ್ ಡನ್, ಇನ್ನು ಹೋಗಿ ಇದರ ಚರ್ಮ ಸುಲಿದು ತಾ… ನರಿ ಕತ್ತೆಯ ಚರ್ಮ ಸುಲಿದು,,,ಕತ್ತೆಯ ಮೆದುಳನ್ನು ತಿಂದು ಅದರ ಹೃದಯ, ಕರುಳು, ಶ್ವಾಸಕೋಶವನ್ನು ಸಿಂಹದ ಮುಂದೆ ತಂದಿಟ್ಟಿತು.

ಸಿಂಹ ಕೋಪದಿಂದ ಕೇಳಿತು,: “ಇದರ ಮೆದುಳು ಎಲ್ಲಿ…?” ನರಿ ಉತ್ತರಿಸಿತು: “ಅದಕ್ಕೆ ಮೆದುಳು ಎಂಬುದು ಇರಲಿಲ್ಲ ಪ್ರಭು…,ಅದು ಇದ್ದಿದ್ದರೆ ಕಿವಿ ಬಾಲ ಕಚ್ಚಿ ಕತ್ತರಿಸಿದ ನಂತರವೂ ನಿಮ್ಮ ಬಳಿ ವಾಪಸ್ ಬರ್ತಿತ್ತಾ???…!!!

ಗುಣಪಾಠ # 2024- ರಲ್ಲಿ ಮೂರನೇ ಬಾರಿ ಮತ ಚಲಾಯಿಸಲು ಬೂತಿಗೆ ಹೋಗುವ ಮೆದುಳು ಇರುವ ಭಾರತೀಯ ಮತದಾರರನ್ನು ಎಚ್ಚರಿಸಲು ಹಲವು ದಶಕಗಳ ಹಿಂದೆ ಬರೆದ “ಚಂದಾ”ಮಾಮ ಕಥೆ ಇದು…! (ಮಿತ್ರರ ಗೋಡೆಯಿಂದ) #election #status #democracy (ವಾಟ್ಸಪ್ ಕೃಪೆ)

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here