ಒಮ್ಮೆ ಸಿಂಹಕ್ಕೆ ಜೋರಾಗಿ ಹಸಿವೆಯಾಯ್ತು, ಪಕ್ಕದಲ್ಲಿದ್ದ ನರಿಯೊಂದಿಗೆ ಹೇಳಿತು: “ನನಗೇನಾದರು ತಿನ್ನಲು ತಂದು ಕೊಡು, ಇಲ್ಲದಿದ್ದರೆ ನಾನು ನಿನ್ನನ್ನು ಕೊಂದು ತಿನ್ನುತ್ತೇನೆ.” ನರಿ ನೇರ ಒಂದು ಕತ್ತೆಯ ಬಳಿ ಹೋಗಿ ಹೇಳಿತು: “ಸಿಂಹ ನಿನ್ನನ್ನು ರಾಜನನ್ನಾಗಿ ಮಾಡ್ತಾನಂತೆ,ಬಾ ನನ್ನ ಜೊತೆ.” ಕತ್ತೆಯನ್ನು ಕಂಡಾಗ ಸಿಂಹ ಅದರ ಮೇಲೆ ಆಕ್ರಮಿಸಿತು, ಕಿವಿಯನ್ನು ಕಚ್ಚಿ ಕತ್ತರಿಸಿತು, ಆದರೆ ಕತ್ತೆ ಹೇಗೋ ತಪ್ಪಿಸಿಕೊಂಡು ಅಲ್ಲಿಂದ ಓಡಿ ಹೋಯಿತು.
ಕತ್ತೆ ನರಿಯೊಂದಿಗೆ ಕೇಳಿತು, “ನೀನು ನನಗೆ ಮೋಸ ಮಾಡಿ ಬಿಟ್ಟೆ ಅಲ್ವಾ?…! ” ನರಿ ಹೇಳಿತು: “ಮುಠ್ಠಾಳನಂತೆ ಮಾತಾಡ್ಬೇಡ, ನಿನ್ನ ತಲೆಗೆ ಕಿರೀಟ ತೊಡಿಸಲು ನಿನ್ನ ಕಿವಿಯನ್ನು ಕತ್ತರಿಸಿದ್ದು.”‘ ಕತ್ತೆ ಅದು ಸತ್ಯವಾಗಿರಬಹುದು ಎಂದು ಭಾವಿಸಿ ಮತ್ತೆ ಸಿಂಹದ ಬಳಿ ಹೋಯಿತು… ಸಿಂಹ ಪುನಃ ಕತ್ತೆಯನ್ನು ಆಕ್ರಮಿಸಿ ಕಚ್ಚಿ ಬಾಲವನ್ನು ಕತ್ತರಿಸಿ ಹಾಕಿತು..!, ಕತ್ತೆ ಮತ್ತೊಮ್ಮೆ ಪಾರಾಗಿ ಹೋಗಿ ನರಿಯೊಂದಿಗೆ ಕೇಳಿತು “ನೀನು ನನ್ನಲ್ಲಿ ಸುಳ್ಳು ಹೇಳಿದ್ದಲ್ವಾ?!.
ನರಿ ಹೇಳಿತು: “ಅಯ್ಯೋ ಪೆದ್ದುಮುಂಡೇದು, ನಿನಗೆ ಸಿಂಹಾಸನದಲ್ಲಿ ಆರಾಮವಾಗಿ ಕುಳಿತುಕೊಳ್ಳಲು ಬೇಕಾಗಿ ತಾನೇ ನಿನ್ನ ಬಾಲವನ್ನು ಕತ್ತರಿಸಿದ್ದು”… ಕತ್ತೆ ವಾಪಸ್ ಸಿಂಹದ ಬಳಿ ಹೋಗುವಂತೆ ಮನವೊಲಿಸಿತು ನರಿ. ಈಗ ಸಿಂಹ ಕತ್ತೆಯನ್ನು ಹಿಡಿದು ಕೊಂದು ಹಾಕಿತು…! ಸಿಂಹ ನರಿಯೊಂದಿಗೆ ಹೇಳಿತು: “ನೀನು ಒಳ್ಳೆಯ ಕೆಲಸ ಮಾಡಿದೆ, ವೆಲ್ ಡನ್, ಇನ್ನು ಹೋಗಿ ಇದರ ಚರ್ಮ ಸುಲಿದು ತಾ… ನರಿ ಕತ್ತೆಯ ಚರ್ಮ ಸುಲಿದು,,,ಕತ್ತೆಯ ಮೆದುಳನ್ನು ತಿಂದು ಅದರ ಹೃದಯ, ಕರುಳು, ಶ್ವಾಸಕೋಶವನ್ನು ಸಿಂಹದ ಮುಂದೆ ತಂದಿಟ್ಟಿತು.
ಸಿಂಹ ಕೋಪದಿಂದ ಕೇಳಿತು,: “ಇದರ ಮೆದುಳು ಎಲ್ಲಿ…?” ನರಿ ಉತ್ತರಿಸಿತು: “ಅದಕ್ಕೆ ಮೆದುಳು ಎಂಬುದು ಇರಲಿಲ್ಲ ಪ್ರಭು…,ಅದು ಇದ್ದಿದ್ದರೆ ಕಿವಿ ಬಾಲ ಕಚ್ಚಿ ಕತ್ತರಿಸಿದ ನಂತರವೂ ನಿಮ್ಮ ಬಳಿ ವಾಪಸ್ ಬರ್ತಿತ್ತಾ???…!!!
ಗುಣಪಾಠ # 2024- ರಲ್ಲಿ ಮೂರನೇ ಬಾರಿ ಮತ ಚಲಾಯಿಸಲು ಬೂತಿಗೆ ಹೋಗುವ ಮೆದುಳು ಇರುವ ಭಾರತೀಯ ಮತದಾರರನ್ನು ಎಚ್ಚರಿಸಲು ಹಲವು ದಶಕಗಳ ಹಿಂದೆ ಬರೆದ “ಚಂದಾ”ಮಾಮ ಕಥೆ ಇದು…! (ಮಿತ್ರರ ಗೋಡೆಯಿಂದ) #election #status #democracy (ವಾಟ್ಸಪ್ ಕೃಪೆ)
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…
ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…