ಭಾಲ್ಕಿ; ತಾಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ (ರಿ) ವತಿಯಿಂದ ನಡೆಯುತ್ತಿರುವ ಶ್ರೀಮತಿ ಸಿದ್ಧಮ್ಮ ಕಲ್ಯಾಣರಾವ ಪಾಟೀಲ ಗುರುಕುಲ ಪ್ರಾಥಮಿಕ ಮತ್ತು ನೀಲಮ್ಮ ವೀರಬಸಪ್ಪ ಪಾಟೀಲ ಗುರುಕುಲ ಪ್ರೌಢಶಾಲೆ ಹಾಗೂ ವಿ.ಕೆ.ಪಾಟೀಲ ಕಲಾ, ವಾಣಿಜ್ಯ, ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಾಡಿನ ಪ್ರತಿಷ್ಠಿತ ನಾಡೋಜ ಪ್ರಶಸ್ತಿ ಪುರಸ್ಕøತರಾದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರಿಗೆ ಅಭಿನಂದನಾ ಸಮಾರಂಭ ಹಾಗೂ 10ನೇ ಮಕ್ಕಳ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ವಹಿಸಿಕೊಂಡಿದ್ದರು. ದಿವ್ಯಸಮ್ಮುಖ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ವಹಿಸಿಕೊಂಡಿದ್ದರು.
ಅಧ್ಯಕ್ಷತೆ ಶರಣೆ ನೀಲಮ್ಮ ವಿ.ಕೆ.ಪಾಟೀಲ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಶರಣ ಮಲ್ಲಿಕಾರ್ಜುನ ಪಾಟೀಲ, ಶರಣ ವೈಜಿನಾಥ ರಾಗಾ, ಶರಣ ಸಿದ್ಧಯ್ಯ ಕಾವಡಿಮಠ, ಶರಣೆ ಗಾಯತೊಂಡೆ ತಾಯಿವರು ಹಾಗೂ ಶರಣ ಮೋಹನರೆಡ್ಡಿ ಆಗಮಿಸಿದ್ದರು. ವಚನ ಪ್ರಾರ್ಥನೆ ಕು.ಸುಷ್ಮಾ ಮತ್ತು ಕು.ರೀನಾ ವಿದ್ಯಾರ್ಥಿಗಳು ನಡೆಸಿಕೊಟ್ಟರು. 10ನೇ ವಿದ್ಯಾರ್ಥಿಗಳಿಂದ ಬಸವಗುರುಪೂಜೆ ನಡೆಯಿತು.
ಕು. ಲಕ್ಷ್ಮಿ ಕು. ಪ್ರಜ್ವಲ್ರೆಡ್ಡಿ ಕು. ಆರತಿರೆಡ್ಡಿ ಬೀಳ್ಕೊಡುಗೆ ಸಮಾರಂಭದ ಕುರಿತು ತಮ್ಮ ಅನಿಸಿಕೆ ಹೇಳಿದರು. ಕು. ಮುಖ್ಯೋಪಾಧ್ಯಾಯರಾದ ಶರಣ ಶಿವಕುಮಾರ ನಾಗಶೆಟ್ಟಿ ಸ್ವಾಗತಿಸಿದರು. ಶರಣೆ ಸಾವಿತ್ರಿ ಹಚ್ಚೆ ಶರಣು ಸಮರ್ಪಣೆ ಮಾಡಿದರು. ಶಾಲೆಯ ಶಿಕ್ಷಕ/ಶಿಕ್ಷಕೇತರರ ಸಿಬ್ಬಂದಿ ಹಾಗೂ ಮಕ್ಕಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…