ಕಲಬುರಗಿ: ಭಾರತೀಯ ಮಹಿಳಾ ಒಕ್ಕೂಟ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಅಂತ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ 23 ರಂದು ಶನಿವಾರ ಬೇಳಿಗ್ಗೆ 11 ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದ್ದು. ಈ ಕಾರ್ಯಕ್ರಮಕ್ಕೆ ಎನ್.ಎಫ್.ಐ.ಡಬ್ಲ್ಯೂ ರಾಜ್ಯ ಕಾರ್ಯದರ್ಶಿ ರೇಣುಕಾ ಕೇಸರಹಳ್ಳಿ ಉದ್ಘಾಟಿಸುವರು. ಎನ್.ಎಫ್.ಐ.ಡಬ್ಲ್ಯೂ ಜಿಲ್ಲಾಧ್ಯಕ್ಷೆ ಪದ್ಮಾವತಿ ಎನ್. ಮಾಲಿಪಾಟೀಲ ಅಧ್ಯಕ್ಷತೆ ವಹಿಸುವರು.
ಕುಟುಂಬ ವೈದ್ಯ ಡಾ. ಸಂಗೀತಾ ಎಮ್. ಶೃಂಗೇರಿ ಅವರು ವಿಶೇಷ ಉಪನ್ಯಾಸ ನೀಡುವರು, ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿ ಊಟ ತಯಾರಕರ ಪೇಡರೇಷನ್ ಎ.ಐ.ಟಿ.ಯು.ಸಿ. ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷೆ ಕಲ್ಪನಾ ವಿ. ಗುರುಸಿಣಿಗಿ ಆಗಮಿಸುವರು.
ಶ್ರೀದೇವಿ ವೈ. ಕೊಡಲಗಿ, ವಿಜಯಲಕ್ಷ್ಮೀ ಪಿ. ಯಳಸಂಗಿ, ಶಿವಲಿಂಗಮ್ಮ ವಿ. ಲೇಂಗಟಿಕರ್, ಶರಣಮ್ಮ ಎ. ಪೂಜಾರಿ, ಜಯಶ್ರೀ ಕೊಸಾಳೆ, ಯಶೋಧಾ ರಾಠೋಡ, ಅನಿತಾ ಭಕರೆ, ನಾಗಮ್ಮ ಗುಡ್ಡಾ, ಸಿದ್ದಮ್ಮ ಪೂಜಾರಿ, ಸವಿತಾ ಮುಗಟಿ, ಲಕ್ಷ್ಮೀಬಾಯಿ ರಾಜೋಳ, ಚಂದಮ್ಮ ಉದನೂರ ಅತಿಥಿಗಳಾಗಿ ಆಗಮಿಸುವರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಪಿಎಸ್ಐ ಯಶೋಧಾ ಕಟಕೆ, ಡಾ. ಸಂಗೀತಾ ಎಮ್. ಶೃಂಗೇರಿ, ಪತ್ರಕರ್ತೆ ಆಸ್ಮಾ ಇನಾಮದಾರ ಇವರಿಗೆ ಗೌರವ ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಎನ್.ಎಫ್.ಐ.ಡಬ್ಲ್ಯೂ ಜಿಲ್ಲಾಧ್ಯಕ್ಷೆ ಪದ್ಮಾವತಿ ಎನ್. ಮಾಲಿಪಾಟೀಲ ಹಾಗೂ ನಗರ ಅಧ್ಯಕ್ಷೆ ಶಿವಲಿಂಗಮ್ಮ ವಿ ಲೆಂಗಟಿಕರ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…