ಬಿಸಿ ಬಿಸಿ ಸುದ್ದಿ

ಅಬಕಾರಿ ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿದ ಜೆ.ಪಿ.ನಡ್ಡಾ ಬಂಧನಕ್ಕೆ ಜಗದೀಶ್ ವಿ ಸದಂ ಒತ್ತಾಯ

ಬೆಂಗಳೂರು: ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಪಿ. ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು ಬಹಿರಂಗಗೊಂಡಿದೆ. ಹೀಗಾಗಿ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬಂಧಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಸಂಬಂಧಿಸಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ಸದಂ, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅನೇಕ ಇಡಿ ದಾಳಿಗಳು ಮತ್ತು ಎರಡು ವರ್ಷಗಳ ಸುದೀರ್ಘ ತನಿಖೆ ಹೊರತಾಗಿಯೂ ಯಾವುದೇ ಎಎಪಿ ನಾಯಕರ ಬಳಿಯಾಗಲಿ, ಕಾರ್ಯಕರ್ತರ ಬಳಿಯಾಗಲಿ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ತಪ್ಪಿತಸ್ಥರು ಎನ್ನಲು ಅವರ ಬಳಿ ಪುರಾವೆಗಳೂ ಇಲ್ಲ. ನಡೆದಿರದ ಭ್ರಷ್ಟಾಚಾರವನ್ನು ನಡೆದಿದೆ ಎಂದು ಸುಳ್ಳಾಗಿ ಬಿಂಬಿಸಿ ಎದುರಾಳಿಯಾಗಿ ನಿಂತಿರುವ ಕೇಜ್ರಿವಾಲ್ ಅವರನ್ನು ಹತ್ತಿಕ್ಕುವ ಪ್ರಯತ್ನವನ್ನು ನರೇಂದ್ರ ಮೋದಿ ನಡೆಸುತ್ತಿದ್ದಾರೆ ಎಂದರು.

ಶರತ್ ಚಂದ್ರ ರೆಡ್ಡಿ ಅವರಿಗೆ ನವೆಂಬರ್ 9, 2022ರಂದು ಸಮನ್ಸ್ ನೀಡಲಾಯಿತು. ವಿಚಾರಣೆ ವೇಳೆ ಅವರು, ತಾವು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿಲ್ಲ ಅಥವಾ ಮಾತನಾಡಿಲ್ಲ ಮತ್ತು ಎಎಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು.

ಅದಾದ ಮರುದಿನವೇ ಇ.ಡಿ ಅವರನ್ನು ಬಂಧಿಸಿತು. ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳುವಂತೆ ಹೆದರಿಸಿತು. ಚುನಾವಣೆ ಬಾಂಡ್ ಹೆಸರಲ್ಲಿ ದೇಣಿಕೆ ಕೊಡುವಂತೆಯೂ ಬೆದರಿಸಿತು. ಈವರೆಗೂ ಜೈಲಿನಲ್ಲಿದ್ದ ರೆಡ್ಡಿ ಅವರು ಇದೀಗ ತಮ್ಮ ಹೇಳಿಕೆ ಬದಲಾಯಿಸಿಕೊಂಡರು.

ತಮ್ಮ ಫಾರ್ಮಾ ಕಂಪನಿ ಮೂಲಕ ಕೋಟಿ ಕೋಟಿ ದೇಣಿಗೆ ನೀಡಿದರು. ನಂತರ ಅಬಕಾರಿ ನೀತಿ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ ಎಂದರು. ಅವರು ಹಾಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ ತಕ್ಷಣವೇ ಬೆನ್ನು ನೋವಿನ ನೆಪದಲ್ಲಿ ಅವರಿಗೆ ಜಾಮೀನು ಕೊಡಲಾಗಿದೆ. ಪ್ರಮುಖ ಆರೋಪಿಯೊಬ್ಬರಿಗೆ ಬೆನ್ನು ನೋವಿನ ಕಾರಣಕ್ಕೆ ಜಾಮೀನು ನೀಡಿದ ಬೇರೆ ಉದಾಹರಣೆ ಇದೆಯೇ? ಏನೂ ತಪ್ಪೆಸಗದ ನಮ್ಮ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಅವರನ್ನು ಜೈಲಿನಲ್ಲಿ ಇರಿಸಿಕೊಳ್ಳಲಾಗಿದೆ. ಇದು ಕುತಂತ್ರ ರಾಜಕಾರಣವಲ್ಲದೆ ಬೇರೇನು? ಎಂದು ಪ್ರಶ್ನಿಸಿದರು.

ಹೈದರಾಬಾದ್ ಮೂಲದ ಉದ್ಯಮಿ ಪಿ ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ನವೆಂಬರ್ 10, 2022 ರಂದು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇ.ಡಿ ಅವರನ್ನು ಬಂಧಿಸಿತು.

ಬಳಿಕ ನವೆಂಬರ್ 15ರಂದು ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿ 5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ನೀಡಿದೆ. ನವೆಂಬರ್ 21 ರಂದು ಅವುಗಳನ್ನು ಬಿಜೆಪಿ ನಗದಾಗಿ ಪರಿವರ್ತಿಸಿಕೊಂಡಿದೆ ಎಂದು ತಿಳಿಸಿದರು.

ಅರಬಿಂದೋ ಫಾರ್ಮಾ ಒಟ್ಟು 52 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, ಅದರಲ್ಲಿ 34.5 ಕೋಟಿ ರೂ. ಬಿಜೆಪಿ ಪಾಲಾಗಿದೆ. ಭಾರತ್ ರಾಷ್ಟ್ರ ಸಮಿತಿಗೆ 15 ಕೋಟಿ ಹಾಗೂ ತೆಲುಗು ದೇಶಂ ಪಕ್ಷಕ್ಕೆ 2.5 ಕೋಟಿ ದೇಣಿಗೆ ನೀಡಿದೆ ಎಂದರು.

emedialine

Recent Posts

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

1 hour ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

1 hour ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

1 hour ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

2 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

5 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

7 hours ago