ಶಾಂತಿ ಸುವ್ಯವಸ್ಥೆ ಮಕ್ಕಳ ಪರೀಕ್ಷೆಗೆ ತೊಂದರೆಯಾಗದಂತೆ ಹೋಳಿ ಆಚರಿಸಿ

ಸುರಪುರ: ಲೋಕಸಭೆ ಮತ್ತು ವಿಧಾನಸಭೆ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವದರಿಂದ ಮಾ25 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇರುವದರಿಂದ ನಗರದಲ್ಲಿ ಹೋಳಿ ಹಬ್ಬವನ್ನು ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಾಗೂ ಮಕ್ಕಳ ಪರೀಕ್ಷೆಗೆ ತೊಂದರೆಯಾಗದಂತೆ ಹಬ್ಬವನ್ನು ಆಚರಿಸಬೇಕು ಎಂದು ಪಿಎಸ್‍ಐ ಸೋಮಲಿಂಗ ಒಡೆಯರ ಹೇಳಿದರು.

ನಗರದ ಪೋಲಿಸ್ ಠಾಣೆಯಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ಮಾತನಾಡಿ, ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾದ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಇಲಾಖೆಗೆ ನಾಗರಿಕರ ಸಹಕಾರ ಬಹಳ ಮುಖ್ಯ ಎಂದ ಅವರು ಠಾಣೆ ವ್ಯಾಪ್ತಿಯಲ್ಲಿ ಯಾರಾದರೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದಲ್ಲಿ ಹಾಗೂ ಬಣ್ಣ ಆಡುವ ನೆಪದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟು ಮಾಡಿದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಹೋರಾಟಗಾರ ಮಾಳಪ್ಪ ಕಿರದಳ್ಳಿ ಮಾತನಾಡಿ,ನಮ್ಮ ತಾಲೂಕಿನಲ್ಲಿ ಹಿಂದಿನಿಂದಲೂ ಶಾಂತಿ ಸೌಹಾರ್ಧತೆಯಿಂದ ಸರ್ವ ಧರ್ಮಿಯರು ಭಾಗವಹಿಸಿ ಹೋಳಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದ್ದು,ಈ ವರ್ಷವೂ ಕೂಡ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಿಎಸ್‍ಐಗಳಾದ ಶರಣಪ್ಪ ಹವಾಲ್ದಾರ, ಚಂದ್ರಾಮಪ್ಪ ಬಳಿಚಕ್ರ ಮಾತನಾಡಿದರು, ಸಭೆಯಲ್ಲಿ ಪ್ರಮುಖರಾದ ರವಿಚಂದ್ರ ಸಾಹುಕಾರ,ಭೀಮನಗೌಡ ಹೇಮನೂರು, ಶ್ರೀಧರ ನಾಯಕ,ದುರ್ಗಪ್ಪ ಡೊಣ್ಣಿಗೇರಿ, ಮೌನೇಶ ಬೋವಿ, ಶಾಂತಗೌಡ ಪಾಟೀಲ,ಮಾನಪ್ಪ ಡೊಣ್ಣಿಗೇರಿ, ಬಸವರಾಜ ಲಕ್ಷ್ಮೀಪುರ, ಮಲ್ಲು ಸೂಗುರು, ಬಸವರಾಜ ಪಾಟೀಲ, ವೆಂಕಟೇಶ ಕೊಳ್ಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು. ಜನಸ್ನೇಹಿ ಪೋಲಿಸ್ ದಯಾನಂದ ಜಮಾದಾರ ನಿರೂಪಿಸಿ ವಂದಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420