ಸುರಪುರ ಚುನಾವಣಾ ಕರ್ತವ್ಯಕ್ಕೆ ಆಗಮಿಸಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

0
6002

ಸುರಪುರ: ದೇಶದಲ್ಲಿ ನಡೆಯುತ್ತಿರುವ 2019ರ ಲೋಕಸಭಾ ಚುನಾವಣೆಯ ಅಂಗವಾಗಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕಾಗಿ ಆಗಮಿಸಿದ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಾಳೆ ನಡೆಯುವ ಮತದಾನಕ್ಕಾಗಿ ಸುರಪುರದ ಶ್ರೀ ಪ್ರಭು ಕಾಲೇಜು ಮೈದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ ಶಹಾಪುರ ತಾಲ್ಲೂಕಿನ ಹಳಿಸಗರ ಗ್ರಾಮದ ಗಂಗಾ ನಗರದಲ್ಲಿರುವ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಶಿವಪುತ್ರಪ್ಪ ಸಂಗಣ್ಣ (48 ವರ್ಷ) ಎಂಬ ಶಿಕ್ಷಕ ತೀವ್ರ ಹೃದಯ ಘಾತಕ್ಕೊಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Contact Your\'s Advertisement; 9902492681

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಇರಿಸಲಾಗಿದ್ದು ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here