ಬೆಂಗಳೂರು; ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024 ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೆಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಯಾದಗಿರಿ ಜಿಲ್ಲೆಯ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಸಹ ದಿನಾಂಕ:07-05-2024 (ಮಂಗಳವಾರ) ರಂದು ನಿಗಧಿಯಾಗಿರುತ್ತದೆ.

ಸದರಿ ದಿನಾಂಕಗಳಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು / ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ.

ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ / ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

35 mins ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

41 mins ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

45 mins ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

2 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

5 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

7 hours ago