ಪತ್ರಿಕಾ ಭವನದಲ್ಲಿ ಸಂಸದ ಡಾ. ಉಮೇಶ್ ಜಾಧವ್ ಹೋಳಿ ಹಬ್ಬ ಆಚರಣೆ

0
36

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ದಿಂದ ಹಮ್ಮಿಕೊಂಡ ಹೋಳಿ ಹಬ್ಬದದಲ್ಲಿ ಸಂಸದ ಡಾ.ಉಮೇಶ ಜಾಧವ, ಶಿವರಾಜ ಪಾಟೀಲ, ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸೇರಿ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು, ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮದ ಬಣ್ಣದ ಹಬ್ಬವನ್ನು ಆಚರಿಸಿದರು.

ಹೋಳಿ ಹಬ್ಬ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.

Contact Your\'s Advertisement; 9902492681

ನಗರದ ಪತ್ರಿಕಾ ಭವನದಲ್ಲಿ ಆಚರಿಸಲಾದ ಹೋಳಿ ಹಬ್ಬದ ಸಂಭ್ರಮದಲ್ಲಿ ಸಂಸದರ ಜೊತೆ ಕಲಬುರಗಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ, ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸೇರಿ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು, ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮದ ಬಣ್ಣದ ಹಬ್ಬವನ್ನು ಆಚರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿವಿಧ ಬಗೆಯ ಬಣ್ಣಗಳನ್ನು ಒಗ್ಗೂಡಿಸುವಂತೆ ನಾವೆಲ್ಲರೂ ಒಂದು ಎಂಬುದನ್ನು ನಿರೂಪಿಸುತ್ತದೆ ಎಂದರು.

ಚಿಕ್ಕವರಿದ್ದಾಗ ಹೋಳಿ ಹಬ್ಬದ ಸಂಭ್ರವನ್ನು ಬಹಳ ಆನಂದದಿಂದ ಅನುಭವಿಸುತ್ತಿದ್ದೇವು. ಇಂದು ಪತ್ರಕರ್ತರೆಲ್ಲರ ಜತೆ ಹಬ್ಬ ಆಚರಿಸಿರುವುದು ಬಾಲ್ಯ ನೆನಪಿಸುವಂತೆ ಮಾಡಿದೆ ಎಂದು ಹೇಳಿದರು.

ಎಲ್ಲರೂ ಅದರಲ್ಲೂ ಹಿಂದೂಗಳೆಲ್ಲರೂ ಸಂಭ್ರಮದಿಂದ ಆಚರಿಸುವ ಹೋಳಿ ಹಬ್ಬದ ದಿನದಂದೇ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಎಸ್ ಎಸ್ ಎಲ್ ಸಿ ಬೋಡ್೯ ಪರೀಕ್ಷೆ ಇಟ್ಟಿರುವುದು ಸರಿಯಲ್ಲ. ಇದು ಮುಂದಿನ ದಿನಗಳಲ್ಲಿ ಪುನರಾವರ್ತನೆಯಾಗಬಾರದು ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಸೇರಿದಂತೆ ಪತ್ರಕರ್ತ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here