ಬಿಸಿ ಬಿಸಿ ಸುದ್ದಿ

ರಸ್ತೆ ದಾಟುತ್ತಿದ್ದ ಯುವಕನಿಗೆ ಸಾರಿಗೆ ಬಸ್ ಡಿಕ್ಕಿ: ಯುವಕನ ಸಾವು

ಕಲಬುರಗಿ : ರಸ್ತೆ ದಾಟುತ್ತಿದ್ದ ಯುವಕನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಶಹಾಬಾದ ತಾಲೂಕಿನ ಮಾಲಗತ್ತಿ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಾಲಗತ್ತಿ ಗ್ರಾಮದ ನಿವಾಸಿ ವೀರೇಶ ಮಲಕಪ್ಪ ಹೊನ್ನಕ್ಕ (23) ಮೃತ ಯುವಕ. ಯುವಕ ರಾಜ್ಯ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಕೆಕೆಆರಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ.

ಸ್ಥಳಕ್ಕೆ ಶಹಾಬಾದ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಸಾರಿಗೆ ಬಸ್ ಪೆÇಲೀಸರ ವಶಕ್ಕೆ ಪಡೆದಿದ್ದಾರೆ.

ಪರಿಹಾರ ನೀಡಬೇಕೆಂದು ಪ್ರತಿಭಟನೆ: ರಸ್ತೆ ದಾಟುತ್ತಿದ್ದ ಯುವಕನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ತಾಲೂಕಿನ ಮಾಲಗತ್ತಿ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿ ತಡೆದು ಕೋಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೋಲಿ ಸಮಾಜದ ಹಿರಿಯ ಮುಖಂಡ ಅವ್ವಣ್ಣ ಮ್ಯಾಕೇರಿ ಮಾತನಾಡಿ, ಕುಟುಂಬಕ್ಕೆ ಆಧಾರ ಸ್ತಂಭವಾದ ಯುವನ ಮರಣದಿಂದ ತೀವ್ರವಾದ ಅಘಾತವಾಗಿದೆ.ಮೃತ ಯುಕನ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಒದಗಿಸಬೇಕು.ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡಬೇಕು ಹಾಗೂ ಚಾಲಕನನ್ನು ವಜಾ ಮಾಡಬೇಕೆಂದು ಪಟ್ಟು ಹಿಡಿದರು.ಅಲ್ಲದೇ ರಸ್ತೆ ಮೇಲೆ ಕುಳಿತು ನೂರಾರು ಜನರು ಪ್ರತಿಭಟಿಸಿದರು.

ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಭಟನೆಯಿಂದ ರಸ್ತೆಯ ಮೇಲೆ ನೂರಾರು ವಾಹನಗಳು ದಟ್ಟಣೆ ಕಂಡು ಬಂದಿತು. ನಂತರ ಸ್ಥಳಕ್ಕೆ ಆಗಮಿಸಿದ ಕೆಕೆಆರ್‍ಟಿಸಿ ಅಧಿಕಾರಿ ಐವತ್ತು ಸಾವಿರ ಒದಗಿಸಲಾಗುವುದು.ಕುಟುಂಬದ ಸದಸ್ಯರೊಬ್ಬರಿಗೆ ತಾತ್ಕಾಲಿನ ನೌಕರಿಗೆ ತೆಗೆದುಕೊಳ್ಳಲಾಗುವುದು.ಚಾಲಕನನ್ನು ವಜಾ ಮಾಡಲಾಗುವುದೆಂದು ತಿಳಿಸಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

ಈ ಸಂದರ್ಭದಲ್ಲಿ ಮಾಲಗತ್ತಿ ಗ್ರಾಪಂ ಅಧ್ಯಕ್ಷರು, ಕೋಲಿ ಸಮಾಜದ ಮುಖಂಡರಾದ ಶರಣಪ್ಪ ಸಣಮೋ, ಕಾಶಿನಾಥ ಸಣಮೋ, ತಾಲೂಕಾ ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್, ತಾಲೂಕಾ ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ, ಸಿದ್ದು ಅಲ್ಲೂರ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

50 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago