ಬಿಸಿ ಬಿಸಿ ಸುದ್ದಿ

ಡಾ.ಬಾಬು ಜಗಜೀವನ ರಾಮ ಜಯಂತೋತ್ಸವ ಆಚರಣೆಗೆ ಮೂಲ ಸೌಕರ್ಯ ಕಲ್ಪಿಸಲು ಮನವಿ

ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಜಯಂತೋತ್ಸವ ಕಾರ್ಯಕ್ರಮವನ್ನು ಅನ್ನಪೂರ್ಣ ಕ್ರಾಸ ಹತ್ತಿರ ಇರುವ ಬಾಬು ಜಗಜೀವನ ರಾಮ್ ಪ್ರತಿಮೆ ಬಳಿ ಏ.5ರಂದು ನಡೆಸಲು ಪರವಾನಿಗೆ ನೀಡುವಂತೆ ಡಾ.ಬಾಬು ಜಗಜೀವನ ರಾಮ್ ಜಯಂತೋತ್ಸವ ಸಮಿತಿ ಅಧ್ಯಕ್ಷ ದತ್ತುಭಾಸಗಿ ಅವರು, ಮಹಾನಗರ ಪಾಲಿಕೆಯ ಆಯುಕ್ತರಿಗೆ ಪತ್ರಬರೆದು ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿರುವ ಅವರು, ಏ. 5 ರಂದು ಬಹಿರಂಗ ಸಭೆ ನಡೆಸಲಾಗುವುದು, ಇದೇ ಕಾರ್ಯಕ್ರಮದಲ್ಲಿ ಎಸ್. ಎಸ್.ಎಲ್.ಸಿ.ಸೇರಿದಂತೆ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಒಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಕ್ರೀಡಾ ಕೂಟದ ವಿಜೇತ ತಂಡಗಳಿಗೆ ಪ್ರಶಸ್ತಿ ನೀಡಲಾಗುವುದು.

ಡಾ. ಬಾಬು ಜಗಜೀವನರಾಮ್ ಜಿಲ್ಲಾ ಜಯಂತೋತ್ಸವ ಸಮಿತಿ ನಿಯೋಗ, ಪಾಲಿಕೆ ಅಧಿಕಾರಿಗಳಿಗೆ ಭೇಟಿ ಮಾಡಿ, ಏ.5 ರಂದು ಡಾ. ಬಾಬು ಜಗಜೀವನರಾಮ್ ಜಯಂತೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ 10.45 ಗಂಟೆಗೆ ಅನ್ನಪೂರ್ಣಾ ಕ್ರಾಸ್ ಪುತ್ಥಳಿಯ ಎದುರುಗಡೆ ಆಯೋಜಿಸಲು ಹಾಗೂ ಇಲ್ಲಿಯೇ ಬಹಿರಂಗ ಸಭೆಯನ್ನು ನಡೆಸಲು ಅನುಮತಿ ನೀಡಬೇಕು.

ಸದರಿ ಬಹಿರಂಗ ಸಭೆಗೆ ಅತಿಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಖುರ್ಚಿ ಮತ್ತು ಪೆಂಡಾಲ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಜಯಂತೋತ್ಸವ ಕಾರ್ಯಕ್ರಮದ ಯಶಸ್ವಿಗೆ ಮಹಾನಗರ ಪಾಲಿಕೆ ವತಿಯಿಂದ ಎಲ್ಲರಿತಿಯ ಮೂಲ ಸೌಕರ್ಯ ಕಲ್ಪಿಸಬೇಕು ಇಲ್ಲಿ ಶಾಂತಿಯುತವಾಗಿ ಜಯಂತೋತ್ಸವ ಆಚರಿಸಲು ಪರವಾನಿಗೆ ಮತ್ತು ಸೂಕ್ತ ಬಂದೊಬಸ್ತ ಕಲ್ಪಿಸಬೇಕು ಎಂದು ಸಮಿತಿ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ಮನವಿ ಮಾಡಿದ್ದಾರೆ.

emedialine

Recent Posts

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

2 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

4 hours ago

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…

4 hours ago

ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗಪ್ರಶಸ್ತಿಗೆ ಆಹ್ವಾನ

ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…

5 hours ago

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಸಾವು

ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…

5 hours ago

ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…

5 hours ago