ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದೇನೆ; ನಾಗಯ್ಯ ಗುತ್ತೇದಾರ

0
19
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದೇನೆ ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ನಾಗಯ್ಯ ಗುತ್ತೇದಾರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರದಾಳ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ಥಾಪನೆಗೆ ನಮ್ಮ ಕುಟುಂಬದಿಂದ 2 ಎಕರೆ ಜಮೀನು ದೇಣಿಗೆ ನೀಡಿದ್ದೇವೆ. ಮಂಗಳೂರಿನಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಿತ್ತಾಪುರದಿಂದ 200 ಜನರನ್ನು ಕರೆದುಕೊಂಡು ಹೋಗಿದ್ದೇನೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಸತ್ಯಾಗ್ರಹಕ್ಕೆ 100ಕ್ಕೂ ಅಧಿಕ ಜನರನ್ನು ಕರೆದುಕೊಂಡು ಹೋಗಿದ್ದೇನೆ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ರಾಜು ಗುತ್ತೇದಾರ, ಶ್ರೀಮಂತ ಗುತ್ತೇದಾರ, ಕಾಶಣ್ಣ ಗುತ್ತೇದಾರ, ಸತೀಶ ಗುತ್ತೇದಾರ, ಲಕ್ಷ್ಮೀಕಾಂತ ಬೆಳಗೇರಾ, ಮಹಿಪಾಲ ಗುತ್ತೇದಾರ, ಅಂತಯ್ಯ ಗುತ್ತೇದಾರ, ಅನಂತಯ್ಯ ಗುತ್ತೇದಾರ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here