ಸುರಪುರ: ನೀರಾವರಿ ಯೋಜನೆಯ ಮೂಲಕ ದೇಶಕ್ಕೆ ಅಪಾರ ಕೊಡುಗೆ ನೀಡಿದ ಸರ್.ಎಂ.ವಿಶ್ವೇಶ್ವರಯ್ಯ ಅವರು ವಿಶ್ವಕ್ಕೆ ಮಾದರಿ.ಅವರ ಮಾರ್ಗದರ್ಶನದಲ್ಲಿ ಇಂದಿನ ಎಲ್ಲ ಎಂಜಿನಿಯರುಗಳು ನಡೆಯುತ್ತಿದ್ದಾರೆ.ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರಂತೆಯೆ ಆಗಬೇಕು ಎಂದು ಗುರುಕುಲ ವಿದ್ಯಾಸಂಸ್ಥೆಯ ಅಧ್ಯಕ್ಷ ಸೋಮಶೇಖರ ಶಾಬಾದಿ ಕರೆ ನೀಡಿದರು.
ನಗರದ ರಂಗಂಪೇಟಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಶ್ರೀ ಗುರುಪುಟ್ಟರಾಜ ಜನಕಲ್ಯಾಣ ಸೇವಾ ಸಮಿತಿ ಹಾಗೂ ಯೋಗಿ ಆದಿತ್ಯ ಸೇವಾ ಟ್ರಸ್ಟ್ ಬೋನ್ಹಾಳ ಹಮ್ಮಿಕೊಂಡಿದ್ದ ಎಂಜಿನಿಯರುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ,ಪ್ರತಿಯೊಬ್ಬ ವಿದ್ಯಾರ್ಥಿಗಳು ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಪ್ರತಿಫಲ ತಾನಾಗಿಯೇ ಸಿಗುತ್ತದೆ ಮತ್ತು ನಿಮ್ಮ ಗುರಿ ತಲುಪಲು ಇದು ಅನೂಕುಲವಾಗುತ್ತದೆ. ಕನಸಿನ ಬೆನ್ನು ಹತ್ತಿ ನಿರಂತರ ಅಧ್ಯಯನದಿಂದ ಕಾಲೇಜಿಗೆ ಕೀರ್ತಿ ತರುವಂತೆ ಅಭ್ಯಾಸ ಮಾಡಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಕ್ಷೀರಲಿಂಗಯ್ಯ ಹಿರೇಮಠ ಬೋನ್ಹಾಳ ಮಾತನಾಡಿ ಬಡತನದಲ್ಲಿ ಬೆಳೆದುಬಂದ ವಿಶ್ವೇಶ್ವರಯ್ಯ ಕಠಿಣ ಶ್ರಮದಿಂದ ಭಾರತರತ್ನದಂತಹ ಉನ್ನತ ಪದವಿಗೆ ಏರಿದರು.ಸಮಯ ಪರಿಪಾಲನೆ ದೂರದೃಷ್ಟಿ ಯೋಚನೆಗಳು ಅದ್ಬುತ್ ಕೌಶಲ್ಯ ಅವರಲ್ಲಿ ಮನೆ ಮಾಡಿದ್ದವು.ಅವರಂತೆ ಪ್ರತಿಯೊಬ್ಬ ವಿದ್ಯಾರ್ಧಿಗಳು ದೃಢ ಸಂಕಲ್ಪ ಮಾಡಿಕೊಂಡು ತಾಳ್ಮೆ ಮತ್ತು ಸಂಯಮದಿಂದ ನಡೆದು ಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸುನ್ನು ಕಾಣಬೇಕು ಎಂದು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.ಸಹನಾ ಸಗರ ಮತ್ತು ಅಂಬಿಕಾ ನಿರೂಪಿಸಿ ಇಂದ್ರ ವಂದಿಸಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಭಾಷಣ ಮತ್ತು ಪ್ರಬಂದ ಕಾರ್ಯಕ್ರಮಗಳು ನೆಡೆದವು.
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…