ಈಡಿಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಸಂಸದ ಜಾಧವ್

0
20

ಕಲಬುರಗಿ: ಚಿತ್ತಾಪುರ ತಾಲೂಕು ಕರದಾಳು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿಯವರನ್ನು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರು ಭೇಟಿಯಾಗಿ ಆಶೀರ್ವಾದ ಪಡೆದರು.

ಕಲಬುರಗಿ ಪ್ರವಾಸದಲ್ಲಿರುವ ಸ್ವಾಮೀಜಿಯವರನ್ನು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. ಭಾರತೀಯ ಸನಾತನ ಹಿಂದೂ ಧರ್ಮದ ಸಂಸ್ಕೃತಿಯನ್ನು ಕಾಪಾಡಲು ಪೂಜ್ಯ ಶ್ರೀಗಳ ಆಶೀರ್ವಾದ ಜನಪ್ರತಿನಿಧಿಗಳ ಮೇಲಿರಬೇಕು ಎಂದು ಜಾಧವ್ ಈ ಸಂದರ್ಭದಲ್ಲಿ ಮನವಿ ಮಾಡಿದರು.

Contact Your\'s Advertisement; 9902492681

ಪೂಜ್ಯಶ್ರೀಗಳು ಉಜ್ವಲ ಭವಿಷ್ಯ ಸಿಗಲಿ ಎಂದು ಹಾರೈಸಿ ಆಶೀರ್ವಾದವನ್ನಿತ್ತರು. ಈ ಸಂದರ್ಭದಲ್ಲಿ ಚಿಂಚೋಳಿ ತಾಲೂಕಿನ ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಶೇಖರ್ ಗಾರಂಪಳ್ಳಿ ಜೊತೆಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here