ಶಹಾಪುರ: ತಾಲೂಕಿನ ಮುಡಬೂಳ ಗ್ರಾಮದಲ್ಲಿ ಭಾನುವಾರ ಶ್ರೀಮದ್ 1008 ಜಗದ್ಗುರು ಶ್ರೀ ಡಾ.ಚನ್ನಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಭಗವತ್ ಪಾದಂಗಳು ಕಾಶಿ ಪೀಠ ಸನ್ನಿಧಿಯವರ ಅಡ್ಡಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಜೈ ಘೋಷಗಳ ಮಧ್ಯೆ ಅದ್ಧೂರಿಯಾಗಿ ಜರುಗಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಅಡ್ಡ ಪಲ್ಲಕ್ಕಿ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು, ಯುವತಿಯರು ಕುಂಭ ಹೊತ್ತು ಮೆರುಗು ತಂದರು. ಡೊಳ್ಳು, ಹಲಗೆ ವಾದ್ಯ ಸೇರಿ ನಾನಾ ವಾದ್ಯಗಳು ಹಾಗೂ ಭಜನಾ ತಂಡಗಳ ಹಾಡು ಗಮನ ಸೆಳೆದವು.
ನೂತನ ಪಲ್ಲಕ್ಕಿ- ಮೂರ್ತಿ ಮೆರವಣಿಗೆ: ಇದೇ ಸಂದರ್ಭದಲ್ಲಿ ಶ್ರೀ ಕಡಕೋಳ ಮಡಿವಾಳೇಶ್ವರರ ನೂತನ ಪಲ್ಲಕ್ಕಿ ಹಾಗೂ ನೂತನ ಮೂರ್ತಿಗಳ ಮೆರವಣಿಗೆ ಗ್ರಾಮದ ನಾನಾ ಬಡಾವಣೆಗಳಲ್ಲಿ ಸಂಭ್ರಮ, ಸಡಗರದಿಂದ ನಡೆಯಿತು.
ನಾಡಿನ ಪೂಜ್ಯರಾದ ಶ್ರೀ ಷ.ಬ್ರ.ಸಿದ್ಧರಾಮ ಶಿವಾಚಾರ್ಯರು, ಶ್ರೀ ಷ.ಬ್ರ.ಡಾ.ರುದ್ರಮುನಿ ಶಿವಾಚಾರ್ಯರು, ಶ್ರೀ ಷ.ಬ್ರ.ಚಂದ್ರಗುಂಡ ಶಿವಾಚಾರ್ಯರು, ಅಭಿನವ ಮುರಘೇಂದ್ರ ಶಿವಾಚಾರ್ಯರು, ಶ್ರೀ ಷ.ಬ್ರ.ಸಿದ್ಧೇಶ್ವರ ಶಿವಾಚಾರ್ಯರು, ಯಂಕಂಚಿ ಶ್ರೀಗಳು, ನಾವದಗಿ ಶ್ರೀಗಳು, ಲಕ್ಷ್ಮಪೂರ ಶ್ರೀಗಳು, ರಾಮಲಿಂಗಯ್ಯ ಶ್ರೀಗಳು ಸೇರಿದಂತೆ ನಾನಾ ಮಠಗಳ ಶ್ರೀಗಳು ಹಾಗೂ ಶಂಕರಗೌಡ ಮಾಲಿ ಪಾಟೀಲ, ಸಿದ್ದಣ್ಣ ಗೌಡ ಪೊಲೀಸ್ ಪಾಟೀಲ, ಬಸನಗೌಡ ಪೊಲೀಸ್ ಪಾಟೀಲ, ಶ್ರೀಶೈಲಪ್ಪ ಬುಕಿಷ್ಟಗಾರ್, ಬಸವರಾಜ ಮುದ್ನೂರು, ರಾಶೇಖರ ಗೌಡ ಮಾಲಿ ಪಾಟೀಲ, ಅಂಬ್ರಣ್ಣ ಸಾಹು ಬುಸ್ಸ, ನಿಂಗಣ್ಣ ಬಬಲಾದಿ ರವಿಕುಮಾರ್ ಬಬಲಾದಿ, ಶಿವಶರಣಪ್ಪ ಬುಸ್ಸಾ, ಗುರುಲಿಂಗಯ್ಯ ಹಿರೇಮಠ್, ಬಸವರಾಜ ಹವಲ್ದಾರ, ಹಣಮಂತ ಗುರಿಕಾರ, ಬಸವರಾಜ ಸಿರಿಮನಿ, ಶಾಂತಲಿಂಗಪ್ಪ ಬಬಲಾದಿ, ಪ್ರವೀಣ ದೇಸಾಯಿ, ಶ್ರೀಮಾಳಪ್ಪ ಡ್ಯಾವಗುಂದ, ಶ್ರೀಶೈಲ ಅಗಸರ, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…