ಸೊನ್ನಲಗಿ ಸಿದ್ದರಾಮೇಶ್ವರ ಪುರಾಣ ಮಹಾ ಮಂಗಲ, ಪಲ್ಲಕ್ಕಿ ಉತ್ಸವ

ಆಳಂದ; ಧಾರ್ಮಿಕ ಮತ್ತು ಅಧ್ಯಾತ್ಮಿಕ ಸಂಸ್ಕಾರಗಳು ನೀಡಿದರೆ ಮಾತ್ರ ಇಂದಿನ ಮಕ್ಕಳು ಸನ್ಮಾರ್ಗದ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಅಬ್ಬೆ ತುಮಕೂರಿನ ಪ್ರವಚನಕಾರ ತೋಟಯ್ಯ ಶಾಸ್ತ್ರಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮುನ್ನೋಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವರ ಜಾತ್ರೆ ನಿಮಿತ್ತ ಹಮ್ಮಿಕೊಂಡ ಸೊನ್ನಲಗಿ ಸಿದ್ದರಾಮೇಶ್ವರ ಪುರಾಣ ಮಹಾ ಮಂಗಲ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

೧೨ನೇ ಶತಮಾನದ ಬಸವಾದಿ ಶರಣರಲ್ಲಿ ಸಿದ್ಧರಾಮರು ಕಾಯಕಯೋಗಿ ಶರಣರಾಗಿದ್ದರು, ಅವರ ನಡೆ ನುಡಿ, ದಾಸೋಹ ಹಾಗೂ ಸಮಾಜ ಸೇವಾ ಕಾರ್ಯಗಳು ಮಾದರಿಯಾಗಿವೆ, ಪುರಾಣ, ಪ್ರವಚನಗಳಿಂದ ಮನುಷ್ಯನ ವ್ಯಕ್ತಿತ್ವದಲ್ಲಿ ಪರಿವರ್ತನೆಯಾಗಬೇಕಿದೆ ಎಂದರು. ಉಪನ್ಯಾಸಕ ಸಂಜಯ ಪಾಟೀಲ ಮಾತನಾಡಿ ಮಾನವೀಯ ಮೌಲ್ಯಗಳ ಎಲ್ಲ ಧರ್ಮಗಳ ತಳಹದಿಯಾಗಿದ್ದು, ಶರಣರು ಸಾರಿದ ವಚನಗಳು ಹಾಗೂ ಶರಣರ ಆದರ್ಶ ಜೀವನವು ನಮ್ಮ ಯುವಕರಿಗೆ ಸ್ಫೂರ್ತಿಯಾಗಬೇಕಿದೆ, ಈ ಹಿನ್ನಲೆಯಲ್ಲಿ ಶರಣರ ಪುರಾಣ, ಪ್ರವಚನಗಳೂ ಅವಶ್ಯಕವಾಗಿವೆ ಎಂದರು.

ಮುಖಂಡ ಶಿವಪುತ್ರಪ್ಪ ಪಾಟೀಲ ಅಧ್ಯಕ್ಷತೆವಹಿಸಿದರು. ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ದಯಾನಂದ ವಾಲಿ, ಪ್ರಮುಖರಾದ ಶಂಭುಲಿಂಗಯ್ಯ ಸ್ವಾಮಿ, ರೇವಪ್ಪ ಬಿರಾದಾರ, ಶಾಂತಕುಮಾರ ವೇದಶೆಟ್ಟಿ, ಶಿವಶರಣಪ್ಪ ಬುಜರ್ಕ, ಗುಂಡಪ್ಪ ಬಿರಾದಾರ, ರಾಜಕುಮಾರ ಬುಜರ್ಕ, ಸಿದ್ದು ವೇದಶೆಟ್ಟಿ, ಎಂ.ಎಸ್.ವಾಲಿ, ಮಹಾಂತಪ್ಪ ಬಿರಾದಾರ, ಶ್ರೀಶೈಲ ಶೇಗಜಿ, ಶರಣಬಸಪ್ಪ ಗೂಂಡೂರ, ಸೂರ್ಯಕಾಂತ ಪರೀಟ ಉಪಸ್ಥಿತರಿದ್ದರು. ಮಹಾದೇವ ಗುಂಡೂರ ನಿರೂಪಿಸಿದರು. ಶಿವಕುಮಾರ ಬುಜರ್ಕ ವಂದಿಸಿದರು. ಸಂಗೀತ ಕಲಾವಿದರಾದ ಚನ್ನಯ್ಯ ಹಿರೇಮಠ, ಸೋಮಯ್ಯ ಹಿರೇಮಠ, ಮೌನೇಶ ಪಂಚಾಳ ಅವರಿಂದ ವಿವಿಧ ಭಕ್ತಿಗೀತೆ, ಜಾನಪದ ಗೀತೆಗಳ ಗಾಯನ ಮನಸೆಳೆದವು.

ಈ ಮೊದಲು ಗ್ರಾಮದ ಮುಖ್ಯಬೀದಿಗಳಲ್ಲಿ ವೀರಭದ್ರೇಶ್ವರರ ಪಲ್ಲಕ್ಕಿ ಉತ್ಸವವು ವಿವಿಧ ವಾದ್ಯಗಳ ಸಡಗರ, ಸಂಭ್ರಮದೊಂದಿಗೆ ಜರುಗಿತು. ಪುರವಂತರ ಕುಣಿತ, ಒಡಪು ಹಾಗೂ ನೂರಾರೂ ಮಹಿಳೆಯರು ಕುಂಭಕಳಸದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದರು. ಜಾತ್ರೆ ಅಂಗವಾಗಿ ಕಳೆದ ೧೧ ದಿನದಿಂದ ಹಮ್ಮಿಕೊಂಡ ಸಿದ್ಧರಾಮೇಶ್ವರರ ಪುರಾಣದ ಮಹಾಮಂಗಲವು ನಡೆಯಿತು. ಅಧಿಕ ಸಂಖ್ಯೆಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

1 hour ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

15 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420