ಕಾಳಗಿ : ಶಾಶ್ವತ ಬರಪೀಡಿತ ಚಿಂಚೋಳಿ ಕಲ್ಲು-ಬಂಡೆಗಳಿಂದ ಸುತ್ತುವರೆದಿರುವ ಪ್ರದೇಶ. ಪರಿಣಾಮ ಬೇಸಿಗೆಯಲ್ಲಿ ಸಹಜವಾಗಿಯೇ ಬೆಂಕಿ ಕೆಂಡದಂಥ ಬಿಸಿಲ ತಾಪ. ಸದ್ಯ 40 ರಿಂದ 44 ಡಿಗ್ರಿ ಸೆಲ್ಸಿಯೆಸ್ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು ಸಾರ್ವಜನಿಕರು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಎಂದು ಪರಿವರ್ತನ ಫೌಂಡೇಶನ್ ಅಧ್ಯಕ್ಷರಾದ ರೇವಣಸಿದ್ಧ ಬಡಾ ತಿಳಿಸಿದ್ದಾರೆ.
ಏಪ್ರಿಲ್, ಮೇ ನಲ್ಲಿ 46 ಡಿಗ್ರಿ ಮುಟ್ಟಲೂಬಹುದು.ಈಗಲೇ ಉರಿ ಬಿಸಿಲಿನ ಧಗೆಗೆ ಜನರು ತತ್ತರಿಸಿದ್ದಾರೆ. ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಬೆಳಗ್ಗೆ ಎಳೆ ಬಿಸಿಲು ಚುರುಕು ಮುಟ್ಟಿಸುವಂತಿರುಆಗುತ್ತದೆಗಳಲ್ಲಿ ಫ್ಯಾನ್ , ಎಸಿ ಇದ್ದೂ ಸಾಲುತ್ತಿಲ್ಲ. ಜನತೆ ಇನ್ನೂ ಮನೆಯಿಂದ ಹೊರಗೆ ಬಂದರೆ ನೆತ್ತಿ ಸುಡುವಂಥ ಝಳ. ಎಳೆನೀರು, ಮಜ್ಜಿಗೆ, ಪಾನಕ, ಕಲ್ಲಂಗಡಿ, ಐಸ್ ಕ್ರೀಮ್, ಕಬ್ಬಿನ ಹಾಲು, ತಂಪು ಪಾನಿಯ ಮೊರೆ ಹೋಗುತ್ತಿದ್ದಾರೆ.
ಇವುಗಳಿಂದ ದಾಹ ಇಂಗದ ಜನರು ಈಜಿಗಾಗಿ ಈಜುಕೊಳ, ಕೆರೆ, ಬಾವಿ, ಜಲಮೂಲಗಳನ್ನು ಹುಡುಕಿಕೊಂಡು ಹೋಗುತ್ತಾರೆ. ರಟಕಲ ಗ್ರಾಮದ ಹತ್ತಿರವಿರುವ ಬಾವಿಗಳಲ್ಲಿ ಈಜಾಡುವವರ ಸಂಖ್ಯೆ ಜಾಸ್ತಿಯಾಗುತ್ತಿದೆ.ಈಜಿನಿಂದ ದೇಹ ತಂಪಾಗುತ್ತದೆ ಜತೆಗೆ ದೈಹಿಕ ವ್ಯಾಯಾಮವೂ ಆಗುತ್ತದೆ ಎಂಬ ಬಲವಾದ ನಂಬಿಕೆ ಆಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈಜು ತುಂಬಾ ಖುಷಿ ಕೂಡ ಕೊಡುತ್ತದೆ. ಸ್ನೇಹಿತರೆಲ್ಲರೂ ಆಗಾಗ್ಗೆ ಈಜುಕೊಳಕ್ಕೆ ಬರುತ್ತೇವೆ. ಇದರಿಂದ ದೇಹದ ಆಯಾಸವೂ ಕಡಿಮೆ ಆಗುತ್ತದೆ
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…