ಕಲಬುರಗಿ: ಗುರುವಾರದಂದು ಹೈ.ಕ.ಶಿ. ಸಂಸ್ಥೆಯ, ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯ, ಕಲಬುರಗಿ, ರಾಷ್ಟೀಯ ಸೇವಾ ಯೋಜನೆ, ಭಾರತ ಸರ್ಕಾರದ, ಕ್ರೀಡಾ ಮತು ಯುವ ಸಬಲೀಕರಣ ಇಲಾಖೆ, ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಸಂಯುಕ್ತಾಶ್ರಯದಲ್ಲಿ ಶಹೀಧ್ ದಿವಸದ (ಬಲಿದಾನ ದಿವಸ) ಅಂಗವಾಗಿ “ಮತದಾನದ ಜಾಗೃತಿ, ಚುನಾವಣೆಯಲ್ಲಿ ಯುವಕರ ಪಾತ್ರ ಮತ್ತು ಸ್ವಚ್ಛತಾ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಡಾ. ವಿಜಯಕುಮಾರ ಗಾಣಿಗೆರ್, ಪ್ರಾಂಶುಪಾಲರು, ಡಾ. ಬಿ.ಆರ್. ಅಂಬ್ಡೇಕರ್ ಪದವಿ ಮಹಾವಿದ್ಯಾಲಯ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮತದಾನ ಮಾಡುವ ಪವಿತ್ರ ಕಾರ್ಯದಲ್ಲಿ ಎಲ್ಲರೂ ಮತ್ತು ವಿಶೇಷವಾಗಿ ಎಲ್ಲಾ ಯುವಕರು ಕಡ್ಡಾಯವಾಗಿ ಭಾಗವಹಿಸುವುದರ ಮುಖಾಂತರ ಸದೃಢವಾದ ದೇಶವನ್ನು ಕಟ್ಟುವುದರಲ್ಲಿ ಕೈ ಜೋಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜಶೇಖರ ವಿ. ಬೀರನಳ್ಳಿ ವಹಿಸಿ ವಿದ್ಯಾರ್ಥಿಗಳನ್ನು ಉದೇಶಿಸಿ ಮಾತನಾಡಿ ಪ್ರಜಾಪ್ರಭುತ್ವವದ ವ್ಯವಸ್ಥೆಯನ್ನು ಉಳಿಸುವಲ್ಲಿ ಯುವಕರ ಪಾತ್ರ ಬಹಳ ಪ್ರಮುಖವಾದದು. ಮತ್ತು ಇದರ ಅಳಿವು – ಉಳಿವು ಯುವಕರ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದ ಪ್ರಾಸ್ಥವಿಕ ನುಡಿಗಳು ಹಾಗೂ ಸ್ವಾಗತವನ್ನು ಡಾ. ಪ್ರಾಣೇಶ ಎಸ್. ರಾ.ಸೇ.ಯೋ. ಅಧಿಕಾರಿ ನೆರವೇರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ರೇಣುಕಾದೇವಿ ಪಾಟೀಲ ನಿರ್ವಹಿಸಿದರು. ವಂದನಾರ್ಪಣೆಯನ್ನು ಡಾ. ಶಂಕ್ರಪ್ಪ ಕೆ. ರಾ.ಸೆ.ಯೋ. ಅಧಿಕಾರಿ ʼಬʼ ಘಟಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…