ಅಶ್ಪøಶ್ಯತೆ ತೊಡೆದು ಹಾಕುವಲ್ಲಿ ಶ್ರಮಿಸಿದ ಮಹಾನ್ ನಾಯಕ ಜಗಜೀವರಾಂ

ಶಹಾಬಾದ: ಬಾಬು ಜಗಜೀವರಾಂ ಅವರು ಅಶ್ಪøಶ್ಯತೆಯನ್ನು ತೊಡೆದು ಹಾಕಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದರು.ಶೋಷಿತರ ಪರವಾಗಿ ಹೋರಾಟ ಮಾಡಿ ಅವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಯಶಸ್ವಿಯಾಗಿದ್ದರು ಎಂದು ಬಿಜೆಪಿ ಹಿರಿಯ ಮುಖಂಡ ಕನಕಪ್ಪ ದಂಡಗುಲಕರ್ ಹೇಳಿದರು.

ಅವರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾದ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನ ಮಂತ್ರಿ ಬಾಬು ಜಗಜೀವನರಾಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಬು ಜಗಜೀವರಾಂ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು.ಶಿಕ್ಷಣವನ್ನು ಮೂಲ ಅಸ್ತ್ರವನ್ನಾಗಿಸಿಕೊಂಡು ಚೆನ್ನಾಗಿ ಓದಿ ಉನ್ನತ ಹುದ್ದೆ ಪಡೆದು ಸಮಾಜ ಸೇವೆ ಮಾಡಬೇಕು.ಆಗಲೇ ಅಸ್ಪøಶ್ಯತೆ ನಿವಾರಣೆ ಸಾಧ್ಯವಾಗುತ್ತದೆ ಎಂದರು.

ಮುಖಂಡ ಮೋಹನ ಹಳ್ಳಿ ಮಾತನಾಡಿ, ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಇವರು ದಲಿತ ನಾಯಕರಲ್ಲ.ಇವರು ಮನುಕುಲದ ನಾಯಕರು. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲನೆ ಮಾಡುವ ಮೂಲಕ ಸುಂದರ ಸಮಾಜದ ಬೆಳವಣಿಗೆಗೆ ಕೈಜೋಡಿಸಬೇಕೆಂದು ಹೇಳಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ ಗೌಳಿ, ದೇವದಾಸ ಜಾಧವ, ಸಿದ್ರಾಮ ಕುಸಾಳೆ, ಸದಾನಂದ ಕುಂಬಾರ, ದುರ್ಗಪ್ಪ ಪವಾರ, ಬಸವರಾಜ ಬಿರಾದಾರ, ಸಂಜಯ ವಿಟಕರ್, ಯಲ್ಲಪ್ಪ ದಂಡಗುಲಕರ, ತಿಮ್ಮಣ್ಣ ಕುರಡೆಕರ, ರಾಮು ಕುಸಾಳೆ, ಬಸವರಾಜ ಸಾತ್ಯಾಳ, ನಾರಾಯಣ ಕಂದಕೂರ, ಶರಣು ವಸ್ತ್ರದ, ದತ್ತಾತ್ರೇಯ ಘಂಟೆ, ಮಂಜುನಾಥ ದೊಡ್ಡಮನಿ, ತಿಪ್ಪಯ್ಯ ಕಣಸೂರ, ಅಮರ ಕೋರೆ, ಸಂತೋಷ ಹುಲಿ, ಶ್ರೀನೀವಾಸ ದೇವಕರ, ಮಲ್ಲು ಪುಜಾರಿ, ನಾಗರಾಜ ಮುದ್ನಾಳ, ಶರಣರಾಜ ಗೊಬ್ಬೂರಕರ, ಬಸವರಾಜ ತುಮಕೂರ, ಯಲ್ಲಾಲಿಂಗ ಹಯ್ಯಾಳಕರ, ಶೀವು ರಾಮಗಡ, ವಿಶ್ವರಾಜ,ಸುರೆಶ ಹಯ್ಯಾಳಕರ, ಶಂಕರ ದಂಡೊತಿಕರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೇವದಾಸ ಜಾಧವ್ ಸ್ವಾಗತಿಸಿ, ನಿರೂಪಿಸಿದರು. ಸಿದ್ರಾಮ ಕುಸಾಳೆ ವಂದಿಸಿದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

15 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

38 mins ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

2 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

2 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420