ವಾಡಿ: ಬಿಜೆಪಿಯ 44ನೇ ಸಂಸ್ಥಾಪನಾ ದಿನಾಚರಣೆ

ವಾಡಿ: ಪಟ್ಟಣದ ಹನುಮಾನ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿಯ 44ನೇ ಸಂಸ್ಥಾಪನಾ ದಿನದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಪಕ್ಷದ ಮುಖಂಡರಾದ ಬಸವರಾಜ ಪಂಚಾಳ ಮಾತನಾಡಿ ಬಿಜೆಪಿ ಪಕ್ಷ ದೇಶ ಅಭಿಮಾನದ,ಹಿಂದುತ್ವದ ಆಧಾರದ ಮೇಲೆ ಅಸ್ತಿತ್ವಕ್ಕೆ ಬಂದು,ಸರ್ವರ ಕಲ್ಯಾಣಕ್ಕಾಗಿ ಪಕ್ಷ ಶ್ರಮಿಸುತ್ತಿದೆ.

ವಿಶ್ವದಲ್ಲಿ ಹೆಚ್ಚು ಸದಸ್ಯತ್ವ ಹೊಂದಿರುವ ಏಕೈಕ ರಾಷ್ಟ್ರೀಯ ಪಕ್ಷ ವಾಗಿದೆ. ಹಲವರು ಹಿರಿಯರು ಕಿರಿಯರು ಎನ್ನದೇ ನಿಸ್ವಾರ್ಥವಾಗಿ ಶ್ರಮಿಸಿದ ಫಲದಿಂದ ಪಕ್ಷವು ಈಗ ಹೆಮ್ಮರವಾಗಿ ಬೆಳೆದಿದೆ.ಅದರಂತೆ ನಮ್ಮ ಮೋದಿ ಜಿ ಜನಪರ ಆಡಳಿತದಿಂದ ಇನ್ನೂ ಹೆಚ್ಚಿನ ಶ್ರೇಯಸ್ಸು ಪಕ್ಷ ಹೊಂದುತ್ತಿದೆ,ಈ ಪಕ್ಷದ ಪ್ರತಿಯೊಬ್ಬರೂ ಕಾರ್ಯಕರ್ತರು ಹೆಮ್ಮೆಪಡುವಂತ ಕಾರ್ಯದಲ್ಲಿ ಪಕ್ಷ ತೋಡಗಿದೆ ಎಂದರು.

ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಭಾರತೀಯ ಜನತಾ ಪಾರ್ಟಿಯ 44ನೇ ಸ್ಥಾಪನಾ ದಿನ ನಾವು ಆಚರಿಸುತ್ತಿದೆವೆ. 1980ರ ಏಪ್ರಿಲ್ 6 ರಂದು ನಮ್ಮ ಪಕ್ಷದ ಹೆಮ್ಮೆಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಅಧ್ಯಕ್ಷತೆಯಲ್ಲಿ ಜನಸಂಘದಲ್ಲಿದ್ದ ಸದಸ್ಯರು ಬಿಜೆಪಿ ಸ್ಥಾಪಿಸಿದ್ದರು.

ಶ್ಯಾಮ್ ಪ್ರಸಾದ್ ಮುಖರ್ಜಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ,ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ,ಮುರಳಿ ಮನೋಹರ ಜ್ಯೋಷಿ ಹಾಗೂ ಉಮಾಚ ಭಾರತಿ ಸೇರಿದಂತೆ ಅನೇಕ ಮಹಾನ ನಾಯಕರ ಶ್ರಮದಿಂದ
ಇಂದು ಜಗತ್ತಿನಲ್ಲಿ ನಮ್ಮ ಪಕ್ಷದ ತತ್ವ ಸಿದ್ಧಾಂತಗಳು ಶ್ರೇಷ್ಠತೆ ಮೆರೆಯುತ್ತಿವೆ.ಮೋದಿ ಜೀ ಅವರು ನಮ್ಮ ಹಿಂದಿನ ನಾಯಕರ ಕನಸನ್ನು ನನಸು ಮಾಡುತ್ತಿದ್ದಾರೆ ಅವರೆಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಮಚಂದ್ರ ರಡ್ಡಿ,ಶರಣಗೌಡ ಚಾಮನೂರ,ಅಶೋಕ ಹರನಾಳ,ಕಿಶನ ಜಾಧವ,ಆನಂದ ಡೌವಳೆ,ಆನಂದ ಇಂಗಳಗಿ,ಪ್ರೇಮ ರಾಠೋಡ,ಬಸವರಾಜ ಕಿರಣಗಿ,ಮಹಾಲಿಂಗ ಶೆಳ್ಳಗಿ,
ಅಯ್ಯಣ್ಣ ದಂಡೋತಿ,ಮಲ್ಲಿಕಾರ್ಜುನ ಸಾತಖೇಡ,ದೇವೇಂದ್ರ ಬಡಿಗೇರ,ವಿಜಯ ಬಾಬು,ಬಸವರಾಜ ಪಗಡಿಕರ,
ಯಂಕಮ್ಮ ಗೌಡಗಾಂವ, ಶರಣಮ್ಮ ಯಾದಗಿರಿ, ಉಮಾದೇವಿ ಗೌಳಿ,ದೆವಕ್ಕಿ ಪೂಜಾರಿ ಸೇರಿದಂತೆ ಇತರರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420