ಬಿಸಿ ಬಿಸಿ ಸುದ್ದಿ

ವಾಟ್ಸ್ಯಾಪ್ ಚಾನೆಲ್ ಸೇರಿದಂತೆ ಸಾಮಾಜಿಕ ಜಾಲತಾಣ‌ಗಳ ಮೇಲೆ ನಿಗಾ ವಹಿಸಲು ಸೂಚನೆ

  • ಎಂ.ಸಿ.ಎಂ.ಸಿ. ಸಮಿತಿ ಕಾರ್ಯ ಪರಿಶೀಲಿಸಿದ ಡಿ.ಸಿ.ಎಫ್ ಸುಮಿತ್ ಪಾಟೀಲ

ಕಲಬುರಗಿ; ಇತ್ತೀಚೆಗೆ ರಾಜಕೀಯ ನಾಯಕರು ಹೆಚ್ಚಾಗಿ ವಾಟ್ಸಾಪ್ ಚಾನೆಲ್‌ ಬಳಸುತ್ತಿರುವುದರಿಂದ ವಾಟ್ಸಾಪ್ ಚಾನೆಲ್‌ಗಳು ಸೇರಿದಂತೆ ಸಾಮಾಜಿಕ‌ ಜಾಲತಾಣಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಮೀಡಿಯಾ ಮಾನಿಟರಿಂಗ್ ಸೆಲ್‌ ಸಿಬ್ಬಂದಿಗೆ ಮಾಧ್ಯಮ‌ ಸಂಬಂಧಿತ ವಿಷಯಗಳ ಮೇಲ್ವಿಚಾರಣೆಯ ನೋಡಲ್ ಅಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ ಸೂಚನೆ ನೀಡಿದರು.

ಶನಿವಾರ ಕಲಬುರಗಿ ನಗರದ ವಾರ್ತಾ ಭವನದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಮೀಡಿಯಾ ಮಾನಿಟರಿಂಗ್ ಸೆಲ್‌ ಗೆ ಭೇಟಿ ನೀಡಿದ ಅವರು, ಇದಲ್ಲದೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಬರುವ ಕಾಸಿಗಾಗಿ ಸುದ್ದಿ ಪ್ರಸಾರ ಗೊಂಡಲ್ಲಿ ಕೂಡಲೆ ಎಂ.ಸಿ‌.ಎಂ.ಸಿ ಸಮಿತಿಗೆ, ಎಂ.ಸಿ.ಸಿ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಕಾನೂನು ಕ್ರಮಕ್ಕೆ ಸಹಾಯಕ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ದಿನದ 24 ಗಂಟೆ ಮುದ್ರಣ ಮಾಧ್ಯಮ, ಕೇಬಲ್ ಟಿ.ವಿ., ರಾಜಕೀಯ ಪಕ್ಷ, ನಾಯಕ,ಅಭ್ಯರ್ಥಿಗಳ ಸಾಮಾಜಿಕ ಜಾಲತಾಣ ಖಾತೆಗಳನ್ನು ವೀಕ್ಷಿಸಬೇಕು. ಎಫ್.ಎಂ. ರೇಡಿಯೋ ಮೇಲೂ ನಿಗಾ ವಹಿಸಬೇಕು ಎಂದರು. ಜಾಹೀರಾತು ಪ್ರಕಟಗೊಂಡಲ್ಲಿ ಅದನ್ನು ಆಯಾ ಪಕ್ಷ, ಅಭ್ಯರ್ಥಿಗಳ ಲೆಕ್ಕಕ್ಕೆ ಝರ್ಚು ಹಾಕಿ ಖರ್ಚು ವೆಚ್ಚ ಸಮಿತಿಗೆ ಮಾಹಿತಿ ನೀಡಬೇಕೆಂದು ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಮತ್ತು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಕಾರ್ಯದರ್ಶಿ ಸಿದ್ದೇಶ್ವರಪ್ರ ಜಿ.ಬಿ. ಅವರು ಸಮಿತಿ ಕಾರ್ಯನಿರ್ವಹಣೆ ಬಗ್ಗೆ ವಿವರಿಸಿದರು. ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

39 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

1 hour ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago