ಸಿಐಟಿಯು ಕಾರ್ಮಿಕರ ಪ್ರಣಾಳಿಕೆ ಬಿಡುಗಡೆ

0
224

ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿಐಟಿಯು ತನ್ನ ಪ್ರಣಾಳಿಕೆಯನ್ನು ಭಾನುವಾರ ನಗರದ ಪತ್ರಿಕಾ ಭವನದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮೀ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ಕಾರ್ಮಿಕರ ಹಕ್ಕುಗಳನ್ನು ದಮನಿಸುವವರ ವಿರುದ್ಧ ಮತ ಚಲಾಯಿಸುವಂತೆ ಕರೆ ನೀಡಿದರು.

Contact Your\'s Advertisement; 9902492681

ಕಾರ್ಪೋರೆಟ್ ಹಿತವನ್ನು ರಕ್ಷಿಸುತ್ತ ದೇಶದ ಸಂಪತ್ತು ಲೂಟಿ ಮಾಡುವವರ ವಿರುದ್ದದ ಹೋರಾಟ ನಮ್ಮದು ಎಂದು ತಿಳಿಸಿದರು.

ಸಂವಿಧಾನ ಹಾಗೂ ಧರ್ಮ ನಿರಪೇಕ್ಷ ಮೌಲ್ಯಗಳನ್ನು ನಾಶ ಮಾಡುವ ಬಿಜೆಪಿ ಸರ್ಕಾರ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಪಾದಿಸಿದರು.

ಸದಾ ಜನತೆಯ ಹಕ್ಕುಗಳಿಗಾಗಿ ಹೋರಾಡುವ ಎಡ ಮತ್ತು ಜಾತ್ಯಾತೀತ ಶಕ್ತಿಗಳ ಗೆಲುವಿಗಾಗಿ ಎಲ್ಲರೂ ಮತ ಚಲಾಯಿಸುವಂತೆ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಂ.ಬಿ. ಸಜ್ಜನ್ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here