ಸುರಪುರ: ಯುಗಾದಿ ಹಾಗೂ ರಂಜಾನ್ ಹಬ್ಬ ಎರಡು ಕೂಡ ಕೆಲವೇ ದಿನಗಳ ಅಂತರದಲ್ಲಿ ಬಂದಿದ್ದು ಎರಡೂ ಹಬ್ಬವನ್ನು ಎಲ್ಲರು ಪರಸ್ಪರ ಸೌಹಾರ್ದತೆಯಿಂದ ಆಚರಿಸುವಂತೆ ಪಿಎಸ್ಐ ಶರಣಪ್ಪ ಹವಲ್ದಾರ್ ತಿಳಿಸಿದರು.
ನಗರದ ಪೊಲೀಸ್ ಠಾಣೆಯ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾದ ಯುಗಾದಿ ಹಾಗೂ ರಂಜಾನ್ ಹಬ್ಬ ಆಚರಣೆ ಅಂಗವಾಗಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ನಮ್ಮ ಸುರಪುರ ನೆಲವು ಶಾಂತಿ ಸೌಹಾರ್ಧತೆಗೆ ಹೆಸರುವಾಸಿಯಾದ ಭೂಮಿಯಾಗಿದೆ,ಇಲ್ಲಿ ಇತಿಹಾಸ ಕಾಲದಿಂದಲೂ ಸರ್ವಧರ್ಮಿಯರು ಎಲ್ಲಾ ಹಬ್ಬವನ್ನು ಪರಸ್ಪರ ಬೆರೆತು ಆಚರಿಸುವ ಮೂಲಕ ಸೌಹಾರ್ಧತೆಯ ಸಂದೇಶವನ್ನು ನೀಡುತ್ತಾ ಬರುತ್ತಿದ್ದು,ಅದರಂತೆ ಈಗ ಬಂದಿರುವ ಮಂಗಳವಾರ ಯುಗಾದಿ ಹಬ್ಬ ಹಾಗೂ ಮುಸ್ಲೀಂ ಬಾಂಧವರು ಏಪ್ರಿಲ್ 11 ರಂದು ರಂಜಾನ್ ಹಬ್ಬವನ್ನು ಚುನಾವಣೆ ನೀತಿ ಸಂಹಿತೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ಎಲ್ಲರು ಸೇರಿ ಆಚರಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಪಿ.ಎಸ್.ಐ ಚಂದ್ರಾಮಪ್ಪ,ಮುಖಂಡರಾದ ಅಬ್ದುಲ್ ಅಲೀಂ ಗೋಗಿ,ಸಚಿನಕುಮಾರ ನಾಯಕ,ಶಿವಲಿಂಗ ಹಸನಾಪುರ,ಉಸ್ತಾದ್ ವಜಾಹತ್ ಹುಸೇನ್ ಮಾತನಾಡಿದರು.ಮುಖಂಡರಾದ ಮಲ್ಲು ಬಿಲ್ಲವ್,ದಾನಪ್ಪ ಕಡಿಮನಿ,ಖಾಜಾ ಅಜ್ಮೀರ್,ನಾಗಪ್ಪ ಕಟ್ಟಿಮನಿ,ಗಫೂರ ಖುರೇಶಿ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.
ಪೊಲೀಸ್ ಸಿಬ್ಬಂದಿಗಳಾದ ಶಿವಮÁಜ ಹೆಚ್.ಸಿ,ಮಹೇಶ ಹೆಚ್.ಸಿ ನಿಂಗಯ್ಯ ಪಿ.ಸಿ ಭಾಗವಹಿಸಿದ್ದರು,ಪೊಲೀಸ್ ಪೇದೆ ದಯಾನಂದ ಜಮಾದಾರ್ ಸಭೆಯ ಕುರಿತು ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…