ಬರ ನಿರ್ವಹಣೆಗೆ ಜಲ ಸಾಕ್ಷರತೆ ಅಗತ್ಯ: ವಿಶ್ವ ಜಲ ತಜ್ಞ ರಾಜೇಂದ್ರ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ತೀವ್ರ ಬರಗಾಲದಿಂದ ಬಳಲುತ್ತಿದ್ದು, ನೀರಿನ ಅಭಾವವಿದ್ದು, ಇದರ ನಿರ್ವಹಣೆ ಈ ಕುರಿತು ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ವಿಶ್ವ ಜಲ ಆಯೋಗದ ಸದಸ್ಯ ಹಾಗೂ ವಿಶ್ವವಿಖ್ಯಾತ ಜಲ ತಜ್ಞ ರಾಜೇಂದ್ರ ಸಿಂಗ್‌ ಹೇಳಿದರು.

ಡಾ. ಅಜಯಸಿಂಗ್ ಅವರು ಸಹ ಈ ಕುರಿತು ಆಸಕ್ತಿ ತೋರಿದ್ದು, ಅವರು ಒಪ್ಪಿಗೆ ಕೊಟ್ಟರೆ ಈ ಭಾಗದ ನೀರಿನ ಸಮಸ್ಯೆ ಬಗೆಹರಿಸಲು ಉತ್ತಮವಾದ ಯೋಜನೆಯನ್ನು ರೂಪಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅತೀವೃಷ್ಟಿ ಹಾಗೂ ಬರಗಾಲಕ್ಕೆ ಪ್ರತಿಕೂಲ ವಾತಾವರಣವೇ ಕಾರಣವಾಗಿದ್ದು, ಇದೀಗ ಜಗತ್ತಿನಾದ್ಯಂತ ಜನಾಂಗೀಯ ದ್ವೇಷ ನಡೆದಿಲ್ಲ. ಈಗ ನೀರಿಗಾಗಿ ಯುದ್ಧ ನಡೆದಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜಗತ್ತು ಈ ಯುದ್ಧದಿಂದ ಮುಕ್ತವಾಗಿ ಶಾಂತಿ ನೆಲೆಸಬೇಕಾದರೆ ನೀರಿನ ಸಂರಕ್ಷಣೆ ಹಾಗೂ ಬಳಕೆ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ನೀರಿಲ್ಲದೆ ಬದುಕಿಲ್ಲ ಎಂಬುದನ್ನು ಮನಗಾಣಿಸಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.

ರಾಜಸ್ತಾನ, ಉತ್ತರ ಪ್ರದೇಶ, ಮಧ್ಯ ಪ್ರದೇಶಕ್ಕಿಂತ ಮೂರು ಪಟ್ಟು ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತದೆ. ಹೀಗಾಗಿ ಈ ರಾಜ್ಯದ ಜನ ನೀವು ದೇವರ ಪ್ರಿತಿಯ ಮಕ್ಕಳಾಗಿದ್ದೀರಿ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನೀರಿನ ಉಪಯೋಗದ ದಕ್ಷತೆ ಹೆಚ್ವಿಸಬೇಕಾದರೆ, ನೀರಿನ ಬಗ್ಗೆ ಪ್ರೇಮ ಬೆಳೆಸಿಕೊಳ್ಳಬೇಕು. ನೀರಿಲ್ಲದೆ ಬದುಕುಲಾರೆವು ಎಂಬ ಜಲ ಸಾಕ್ಷರತೆ ಪ್ರಮಾಣ ಹೆಚ್ಚಿಸಬೇಕಾಗಿದೆ ಎಂದರು.

ಮಳೆ ನೀರನ್ನು ಭೂಮಿಯ ಒಡಲಲ್ಲಿ ಸಂಗ್ರಹಿಸಿದರೆ ಆ ಸೂರ್ಯನಿಂದಲೂ ನೀರನ್ನು ಕದಿಯಲು ಬರುವುದಿಲ್ಲ. ಇದೊಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದ್ದ ಹಾಗೆ. ಕ್ರಾಪ್ ಪ್ಯಾಟೆನಿಟಿ ಹಾಗೂ ರೇನ್ ಪ್ಯಾಟರ್ನಿಟಿ ಮಧ್ಯೆ ಲಿಂಕ್ ಬೆಳೆಸಬೇಕಾಗಿದೆ ಎಂದು ಅವರು ಕಾಳಜಿ ವ್ಯಕ್ತಪಡಿಸಿದರು.

ದೊಡ್ಡ ದೊಡ್ಡ ಅಣೆಕಟ್ಟು ನಿರ್ಮಾಣ ಮಾಡುವುದರಿಂದ ನದಿಗಳನ್ನು ಕೊಂದಂತಾಗುತ್ತಿದ್ದು, ಸಣ್ಣ ಸಣ್ಣ ಬಾವಿ, ಕೆರೆ ಹಾಗೂ ಚೆಕ್ ಡ್ಯಾಮ್ ಗಳನ್ನು ನಿರ್ಮಿಸುವ ಮೂಲಕ ನೀರಿನ ಸಂರಕ್ಷಣೆ ಮಾಡಬಹುದು ಎಂದು ಅವರು ವಿವರಿಸಿದರು.

ನನ್ನ ಈ ಜನ ಹೋರಾಟದ ಅಭಿಯಾನದ ಅಂಗವಾಗಿ ನಮ್ಮಲ್ಲಿ 30 ನದಿಗಳಿಗೆ ಮರುಜೀವ ಬಂದಿದೆ. ಸುಮಾರು 3000 ಜನ ಬಂದೂಕು ಬಿಟ್ಟಿದ್ದಾರೆ. 5 ಲಕ್ಷಕ್ಕೂ ಹೆಚ್ಚು ಜನ ಕೃಷಿ ಕಾಯಕದಲ್ಲಿ ತೊಡಗಿದ್ದಾರೆ. ಸೂಕ್ತ ನೀರು ನಿರ್ವಹಣೆ ಮಾಡುತ್ತಿರುವುದರಿಂದ ನಮ್ಮಲ್ಲಿ 10 ಲಕ್ಷ 800 ಕಿ.ಮೀ. ವ್ಯಾಪ್ತಿಯಲ್ಲಿ ಪ್ಲಡ್ ಮತ್ತು ಡ್ರಾಟ್ ಬರುತ್ತಿಲ್ಲ ಎಂದು ಅವರು ಹೇಳಿದರು.

ಜಲ ಸಾಕ್ಷರತೆಯ ಜೊತೆಗೆ ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ. ಈ ದಿಸೆಯಲ್ಲಿ ಜನರಿಗಾಗಿ ಇರುವ ಸರ್ಕಾರ ದಿಟ್ಟ ಹೆಜ್ಜೆ ಇಡಬೇಕಾಗಿದೆ ಎಂದು ಅವರು ತಿಳಿಸಿದರು.

ಮುಖಂಡರಾದ ಹಣಮಂತ ಭೂಸನೂರ, ಗಣೇಶ ಆರ್. ಪಾಟೀಲ ಇದ್ದರು.

ಮನುಷ್ಯನ ಆರೋಗ್ಯ ಕಾಪಾಡುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದುದು ಭೂಮಿಯ ಆರೋಗ್ಯ ಕಾಪಡುವುದು ಆಗಿದೆ. ನಾವು ಮನಸ್ಸು ಮಾಡಿದರೆ ಇತಿಹಾಸವನ್ನು ಬೇಗ ಬಸಲಾಯಿಸಬಹುದು. ಆದರೆ ಭೂಗೋಳವನ್ನು ಬೇಗ ಬದಲಾಯಿಸಲಾಗುವುದಿಲ್ಲ. ಹೀಗಾಗಿ ಜಲ ಸಾಕ್ಷರತೆ ಅಗತ್ಯವಾಗಿದೆ.
-ರಾಜೇಂದ್ರ ಸಿಂಗ್, ಜಲತಜ್ಞ

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420