ರಾಜಕೀಯ ಬಂಡವಾಳಿಗರ ನಾಟಕ ರಂಗ; ಎಸ್‍ಯುಸಿಐ ಪಕ್ಷದಿಂದ ಎಸ್.ಎಂ.ಶರ್ಮಾ ಸ್ಪರ್ಧೆ

ವಾಡಿ: ಸ್ವಾತಂತ್ರ್ಯಾ ನಂತರದ ಸರ್ಕಾರಗಳ ಆಡಳಿತ ಸೌಧಗಳಾದ ವಿಧಾನಸಭೆ ಮತ್ತು ಲೋಕಸಭೆಗಳು ಬಂಡವಾಳಿಗರ ನಾಟಕರಂಗಗಾಳಾಗಿ ಪರಿವರ್ತನೆಯಾಗಿವೆ. ರಾಜಕೀಯ ಎಂಬುದು ಶೋಷಕರ ಕೈಗೊಂಬೆಯಾಗಿದೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ) ಕಮ್ಯುನಿಸ್ಟ್ ಪಕ್ಷದ ರಾಜ್ಯ ಸೆಕ್ರೆಟೇರಿಯೇಟ್ ಸದಸ್ಯ ಕಾಮ್ರೇಡ್ ಎಂ.ಶಶಿಧರ್ ಆರೋಪಿಸಿದರು.

ಕಲಬುರಗಿ ಲೋಕಸಭೆ ಸಭೆ ಚುನಾವಣೆಯ ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಕಾಮ್ರೇಡ್ ಎಸ್.ಎಂ.ಶರ್ಮಾ ಪರ ಪ್ರಚಾರ ನಿಮಿತ್ತ ಮಂಗಳವಾರ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಏಳು ದಶಕಗಳ ಕಾಲ ಕಾಂಗ್ರೆಸ್ ಆಡಳಿತ ನಡೆಸಿ ಟಾಟಾ, ಬಿರ್ಲಾ, ಅಂಬಾನಿಗಳ ಪಾದ ಸೇವೆ ಮಾಡಿದರೆ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅದಾನಿ ಎಂಬ ಮಹಾ ಶೋಷಕನಿಗೆ ಸರ್ಕಾರಿ ಸಂಸ್ಥೆಗಳನ್ನು ಒತ್ತೆಯಿಟ್ಟಿದೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತ ಸಮಸ್ಯೆಗಳನ್ನು ಜೀವಂತವಾಗಿಟ್ಟು ದೇಶದ ಜನರ ಬದುಕು ಮೂರಾಬಟ್ಟೆ ಮಾಡಿದೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಮತ್ತು ಬಿಜೆಪಿ ಸರ್ಕಾರದ ಅಚ್ಚೇ ದಿನಗಳ ಭ್ರಮೆಗಳು ಜನರನ್ನು ಮತ್ತಷ್ಟು ಪಾತಾಳಕ್ಕೆ ತುಳಿದು ಹಾಕಿವೆ. ಜನರ ಮತವನ್ನು ಕೋಮುವಾದದ ಮೂಲಕ ಧ್ರುವೀಕರಣ ಮಾಡಲು ಮಂದಿರ, ಮಸೀದಿ, ಬಾವುಟ, ಸಿಎಎ ಮುಂತಾದ ಬಗೆಬಗೆಯ ದಾರಿಗಳನ್ನು ಬಿಜೆಪಿ ಹುಡುಕುತ್ತಿದೆ. ಚುನಾವಣಾ ಆಯೋಗವನ್ನೇ ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಕಾನೂನಿಗೆ ತಿದ್ದುಪಡಿ ತಂದಿದೆ ಎಂದು ಗಂಭೀರ ಆರೋಪ ಮಾಡಿದ ಶಶಿಧರ್, ಪ್ರಸಕ್ತವಾಗಿ ನಡೆಯುತ್ತಿರುವ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ ಹಾಗೂ ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಪ್ರಸಕ್ತ ಹದಗೆಟ್ಟ ಸಾಮಾಜಿಕ ವ್ಯವಸ್ಥೆ ಸರಿಪಡಿಸಲು ಚುನಾವಣೆಗಳು ಪರಿಹಾರವಲ್ಲ. ಸಮಾಜವಾದವೇ ಇದಕ್ಕೆ ನೈಜ ಪರಿಹಾರ. ಪರಿಣಾಮ ಉದಾತ್ತ ಚಿಂತನೆಗಳನ್ನು ಎತ್ತಿ ಹಿಡಿದಿರುವ ಎಸ್‍ಯುಸಿಐ ಪಕ್ಷದ ಅಭ್ಯರ್ಥಿಯನ್ನು ಜನರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಎಸ್‍ಯುಸಿಐ ಅಭ್ಯರ್ಥಿ ಕಾಮ್ರೇಡ್ ಎಸ್.ಎಂ.ಶರ್ಮಾ ಮಾತನಾಡಿ, ಚುನಾವಣೆಗಳು ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬ ಎನ್ನಲಾಗುತ್ತದೆ. ಆದರೆ ಈ ಹಬ್ಬವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮತದಾರರಿಗೆ ಹಣ ಹೆಂಡ ಹಂಚುವ ಮೂಲಕ ಆಚರಿಸುತ್ತಿವೆ. ಹಿಂದೆ ಮಾಡಿದ ಅಭಿವೃದ್ಧಿ ಕುರಿತು ಅಥವ ಮುಂದೆ ಮಾಡುವ ಜನಪರ ಕೆಲಸಗಳ ಬಗ್ಗೆ ತುಟಿಬಿಚ್ಚಲ್ಲ. ಧರ್ಮ, ದೇವರು, ವಿಶ್ವಗುರು, ಪಾಕೀಸ್ತಾನ, ಮುಸಲ್ಮಾನರು, ಭಯೋತ್ಪಾದಕರು, ಗಡಿ ಯುದ್ಧಗಳನ್ನು ಮುನ್ನೆಲೆಗೆ ತಂದು ಜನರನ್ನು ದಿಕ್ಕುತಪ್ಪಿಸಲು ಇಲ್ಲಸಲ್ಲದ ನಾಟಕಗಳನ್ನು ಮಾಡುತ್ತಾರೆ ಎಂದು ದೂರಿದರು. ಜನರು ಮತಗಳನ್ನು ಬಂವಾಳಿಗರ ಪಕ್ಷಗಳಿಗೆ ಮಾರಿಕೊಳ್ಳದೆ ಪ್ರಾಮಾಣಿಕರಿಗೆ ನೀಡಲು ಮನಸ್ಸು ಮಾಡಿದರೆ ದೇಶದಲ್ಲಿ ಎಸ್‍ಯುಸಿಐ ಅಭ್ಯರ್ಥಿಗಳು ಗೆಲ್ಲುವುದು ಗ್ಯಾರಂಟಿ ಎಂದರು.

ಎಸ್‍ಯುಸಿಐ ಪಕ್ಷದ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ, ಸದಸ್ಯರಾದ ಶರಣು ಹೇರೂರ, ಗೌತಮ ಪರ್ತೂರಕರ, ವೆಂಕಟೇಶ ದೇವದುರ್ಗಾ ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420