ಬಿಸಿ ಬಿಸಿ ಸುದ್ದಿ

ಮತದಾರರಿಗೆ ಮೋದಿಯೇ ಗ್ಯಾರಂಟಿ: ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್

ಕಲಬುರಗಿ: ಕಾಂಗ್ರೆಸ್ಸಿನ ಗ್ಯಾರಂಟಿಗಳಿಂದಾಗಿ ಜನ ಈಗಾಗಲೇ ಮೋಸ ಹೋಗಿದ್ದು ದೇಶಕ್ಕೆ ಮೋದಿ ಅವರದೇ ಗ್ಯಾರಂಟಿ ಖಚಿತ ಎಂದು ಮಾಜಿ Enquiry ದತ್ತಾತ್ರೇಯ ಪಾಟೀಲ್ ರೇವೂರ್ ಹೇಳಿದರು.

ಕಲಬುರಗಿಯಲ್ಲಿ ಗುರುವಾರ ನಡೆದ ದಕ್ಷಿಣ ಮಂಡಲ ಪಟ್ಟಣ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ಸಿನ ಸುಳ್ಳು ಗ್ಯಾರಂಟಿಯಿಂದ ದೊಡ್ಡ ಮೋಸವಾಗಿದ್ದು ಇದನ್ನು ಮನೆ ಮನೆಗೆ ತಿಳಿಸಬೇಕಾಗಿದೆ ಕಳೆದ ಬಾರಿ ಗ್ಯಾರಂಟಿಯ ಹೆಸರು ಹೇಳಿ ಜನರನ್ನು ಕಾಂಗ್ರೆಸ್ ಮರಳು ಮಾಡಿದೆ ಈ ಬಾರಿ ಸತ್ಯ ಅರಿವಾಗಿದ್ದು ಎಲ್ಲರಲ್ಲೂ ಬಿಜೆಪಿ ಕಡೆ ಒಲವು ಹೆಚ್ಚಾಗಿದೆ. ಕೇಂದ್ರ ಸರಕಾರ ನೀಡುತ್ತಿದ್ದ ಕೃಷಿ ಸನ್ಮಾನ್ಯಧಿಯನ್ನು ನಿಲ್ಲಿಸಲಾಗಿದೆ ಬಿಎಸ್ ಯಡಿಯೂರಪ್ಪ ಅವರು 6,000 ಕ್ಕೆ ಮತ್ತೆ 4000 ಸೇರಿಸಿ 10,000 ನೀಡುತ್ತಿದ್ದ ಹಣ ಈಗ ಬಂದ್ ಮಾಡಲಾಗಿದೆ. ಗ್ಯಾರಂಟಿ ಎಂದು ಹೇಳಿ ಒಂದು ಕಡೆಯಿಂದ ಕಿತ್ತುಕೊಂಡು ಇನ್ನೊಂದು ಕಡೆಗೆ ಕೊಡುವ ಕಾಂಗ್ರೆಸ್ಸಿನ ಆಡಳಿತ ಎಲ್ಲರಿಗೂ ಗೊತ್ತಾಗಿದೆ. ಮದ್ಯ ದರ ಹೆಚ್ಚಳ ಮಾಡಿ ಹಣ ಸಂಗ್ರಹಿಸಲು ಸರಕಾರ ಮುಂದಾಗಿದೆ. ಬಿಜೆಪಿಯ ಭದ್ರ ಕೋಟೆ ಕಲ್ಬುರ್ಗಿ ದಕ್ಷಿಣ ಮತಕ್ಷೇತ್ರ ಎಂದು ಮತ್ತೊಮ್ಮೆ ಸಾಬೀತು ಮಾಡುವ ಚುನಾವಣೆ ಇದಾಗಿದ್ದು ದಿವಂಗತ ಚಂದ್ರಶೇಖರ್ ಪಾಟೀಲ ರೇವೂರ್ ಕನಸು ಸಾಕಾರಗೊಳಿಸಲು ಬಿಜೆಪಿಗೆ ಮತ ಚಲಾಯಿಸಬೇಕು ಎಂದು ಕರೆ ನೀಡಿದರು.

ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾದ ಅವಧಿಯಿಂದ ಪ್ರಧಾನಿ ತನಕ ಕಲ್ಬುರ್ಗಿಯ ಜೊತೆ ನಿಕಟ ನಂಟು ಹೊಂದಿದ್ದು ಈ ಭಾಗದ ಜನರ ಮೇಲೆ ಅಪಾರವಾದ ಪ್ರೀತಿ ವಿಶ್ವಾಸವನ್ನು ಇಟ್ಟುಕೊಂಡು ಅಭಿವೃದ್ಧಿ ಕೆಲಸಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಮೆಗಾ ಜವಳಿ ಪಾರ್ಕ್,ಬೆಂಗಳೂರಿಗೆ ರೈಲು,ಹುಮ್ನಾಬಾದ್- ರಾಮ ಮಂದಿರ ತನಕ ಸರ್ವಿಸ್ ರಸ್ತೆ, ರೈಲು ನಿಲ್ದಾಣ ಅಭಿವೃದ್ಧಿ ಹೀಗೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಭಾರತವು ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು, ಅಭಿವೃದ್ಧಿ ಹೊಂದಿದ ಭಾರತವನ್ನು ಕಾಣಲು ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಮತದಾರರು ಈ ಬಾರಿ ಕಮಲದ ಗುರುತಿಗೆ ಮತ ಹಾಕಲು ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

emedialine

Recent Posts

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

1 hour ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

1 hour ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

1 hour ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

2 hours ago

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಿಕ್ಕಾಗ ಸಾಧನೆ ಸಾಧ್ಯ

ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…

3 hours ago

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…

3 hours ago