ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಏಪ್ರಿಲ್ 12 ರಿಂದ 19ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ 22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕರು ವಿನಾಕಾರಣ ಡಿ.ಸಿ. ಕಚೇರಿ ಸುತ್ತ ಓಡಾಟ ಮಾಡಬಾರದು ಮತ್ತು ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಸರಕಾರಿ ಕಚೇರಿಯಲ್ಲಿ ಅಗತ್ಯ ಕೆಲಸವಿದ್ದರೆ ಮಾತ್ರ ಬೆಳಿಗ್ಗೆ 11 ಗಂಟೆಗಿಂತ ಮುಂಚೆ ಮತ್ತು ಮಧ್ಯಾಹ್ನ 3 ಗಂಟೆಯ ನಂತರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಯಾವುದೇ ವ್ಯಕ್ತಿಯು ಅನುಮಾನಾಸ್ಪದವಾಗಿ ಓಡಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿರುವ ಡಿ.ಸಿ ಅವರು, ಸಾರ್ವಜನಿಕರು ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…
ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು…