ಕಲಬುರಗಿ: 2024 ರ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ “21 ಅಂಶಗಳ ಬೇಡಿಕೆ”ಗಳನ್ನು ಈಡೇರಿಸುವ ಪಕ್ಷ ಮತ್ತು ವ್ಯಕ್ತಿಯನ್ನು ಬೆಂಬಲ ನೀಡಬೇಕೆಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು.
ಲೋಕಸಭೆಯ ಚುನಾವಣಾ ಪ್ರಣಾಳಿಕೆಯಲ್ಲಿ ಬಡತನ, ನಿರುದ್ಯೋಗ ಮತ್ತು ವಲಸೆಯನ್ನು ನಿಯಂತ್ರಣ ಮಾಡುವ ಜೊತೆಗೆ ಕಲಬುರಗಿ ಜಿಲ್ಲೆಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿ ಮಾಡುವ ವ್ಯಕ್ತಿ ಮತ್ತು ಪಕ್ಷವನ್ನು ಜಿಲ್ಲೆಯ ಪ್ರಬುದ್ಧ ಮತದಾರರು ಆಯ್ಕೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಸಹಕಾರ ಮಾಡಬೇಕೆಂದು ಮತ್ತು ಕಲ್ಯಾಣ ನಾಡು ವಿಕಾಸ ವೇದಿಕೆಯ 21 ಅಂಶಗಳ ಕಾರ್ಯಕ್ರಮವನ್ನು ಜಾರಿತೆ ತರುವ ಪಕ್ಷ ಮತ್ತು ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಜೊತೆಗೆ ಬಿಜೆಪಿ ಮತ್ತು ಕಾಂಗ್ರೆಸ ಪಕ್ಷಗಳು ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ ಮಾಡಿದ “21 ಅಂಶಗಳ ಬೇಡಿಕೆ”ಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಣ್ಣ ಎಸ್. ನಡಗೇರಿ, ಜಿಲ್ಲಾಧ್ಯಕ್ಷರಾದ ಬಾಬು ಮದನಕರ, ಸಂಘಟಕರಾದ, ಜೈಭೀಮ ಆಲಗೂಡ್, ಅವಿನಾಶ ಕಪನೂರ, ಮೋಹನ ಸಾಗರ, ಪ್ರವೀಣ ಖೇಮನ ಹಾಗೂ ಇತರರು ಇದ್ದರು .
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…