ಕಲಬುರಗಿ: ನಮ್ಮ ಬದುಕಿಗೆ ಸ್ಪೂರ್ತಿ ಕೊಡುವ ಉದ್ದೇಶದಿಂದ ದಿನಕ್ಕೊಂದು ಶುಭಾಷಿತಗಳನ್ನು ಸಮಾಜಕ್ಕೆ ಕೊಡುತ್ತ ಬರುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ರವೀಂದ್ರಕುಮಾರ ಭಂಟನಳ್ಳಿ ಅವರ ಸಂಗ್ರಹಿತ ರವಿ ಕಿರಣ ಶುಭಾಷಿತಗಳ ಪುಸ್ತಕ ಬಿಡುಗಡೆ ಸಮಾರಂಭವನ್ನು ಏ.13 ರ ಬೆಳಗ್ಗೆ 10.45 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಹಾಗೂ ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.
ಒಂದು ಪುಸ್ತಕ ಓದುವುದರಿಂದ ನಮ್ಮ ಜೀವನ ಪರಿವರ್ತನೆಯಾಗುತ್ತವೆ. ಸಣ್ಣ ಸಣ್ಣ ಸ್ಪೂರ್ತಿದಾಯಕ ವಿಚಾರಗಳನ್ನೊಳಗೊಂಡಿರುವ ಈ ರವಿ ಕಿರಣ ಶುಭಾಷಿತಗಳ ಸಂಗ್ರಹಿತ ಪುಸ್ತಕದಿಂದ ಉತ್ತಮ ಜ್ಞಾನ ಮತ್ತು ಬದುಕಿನಲ್ಲಿ ಆತ್ಮಸ್ಥೈರ್ಯ ತುಂಬಿಕೊಳ್ಳಬಹುದಾಗಿದೆ ಎಂದು ಅವರು ವಿವರಿಸಿದ್ದಾರೆ.
ಮಾಜಿ ಬಾಹ್ಯಕಾಶ ವಿಜ್ಞಾನಿ-ಪುಸ್ತಕ ದಾಸೋಹಿಗಳಾದ ಪ್ರೊ. ಬಿ.ಎ.ಪಾಟೀಲ ಮಹಾಗಾಂವ ಅವರ ನೇತೃತ್ವದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದು, ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ, ಕೃತಿ ಸಂಪಾದಕ ರವೀಂದ್ರಕುಮಾರ ಭಂಟನಳ್ಳಿ ಅವರು ಸೇರಿದಂತೆ ಅನೇಕರು ಉಪಸ್ಥಿತರಿರುವರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…