ಕಲಬುರಗಿ: ನಗರದ ದೃಶ್ಯಬೆಳಕು ಸಾಂಸ್ಕøತಿಕ ಸಂಸ್ಥೆ ಮತ್ತು ವಿ. ಬಿ. ಬಿರಾದಾರ್ ಕಲಾ ಪ್ರತಿμÁ್ಠನ ಇವುಗಳ ಸಂಯುಕ್ತಾಶ್ರಯದಲ್ಲಿ ಜಗತ್ತಿನ ಪ್ರಸಿದ್ಧ ಚಿತ್ರಕಲಾವಿದ, ಶಿಲ್ಪಕಲಾವಿದ, ಬರಹಗಾರ ಹಾಗೂ ಸಂಶೋಧಕರಾಗಿದ್ದ ಲಿಯೋನಾರ್ಡೊ ಡಾ. ವಿಂಚಿಯ ಜನ್ಮದಿನದ ಅಂಗವಾಗಿ ವಿಶ್ವ ದೃಶ್ಯಕಲಾ ದಿನಾಚರಣೆಯನ್ನು ವಿನೂತನವಾಗಿ ಆಚÀರಿಸುವ ಉದ್ದೇಶದಿಂದ 15 ಏಪ್ರಿಲ್ ರಂದು ನಗರದ ನಗರದ ರಾಮ ಮಂದಿರದ ಹಿಂದುಗಡೆ ಇರುವ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಹಿರಿಯ ಚಿತ್ರಕಲಾವಿದ ವಿ. ಬಿ ಬಿರಾದಾರ್ ಅವರು ರಚಿಸಿದ ನಿಸರ್ಗ ಚಿತ್ರಗಳ ಪ್ರದರ್ಶನ ಮತ್ತು ಹಿರಿಯ ಚಿತ್ರಕಲಾವಿದ ಬಸವರಾಜ ಎಲ್. ಜಾನೆ ಅವರಿಂದ ಕಲಾ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದೆ.
15 ಸಾಯಂಕಾಲ 4.00 ಗಂಟೆಗ್ಗೆ ನಿಸರ್ಗ ಚಿತ್ರಗಳ ಪ್ರದರ್ಶನವನ್ನು ಹಿರಿಯ ಚಿತ್ರಕಲಾವಿದ ಬಸವರಾಜ ರೇ. ಉಪ್ಪಿನ ರವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಬಿ. ಎಚ್. ನಿರಗುಡಿ ಅವರು ಭಾಗವಹಿಸುವರು.
ನಗರದ ಹಿರಿಯ ಚಿತ್ರಕಲಾವಿದ ನಾಡೋಜ ಡಾ. ಜೆ. ಎಸ್. ಖಂಡೇರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವವರು. ಚಿತ್ರಕಲಾವಿದ ವಿ. ಬಿ ಬಿರಾದಾರ್ ಅವರು ಜಲವರ್ಣದಲ್ಲಿ ರಚಿಸಿದ ಸುಮಾರು 35ಕ್ಕೂ ಹೆಚ್ಚು ನಿಸರ್ಗ ಚಿತ್ರಗಳು ದಿನಾಂಕ 15 ರಿಂದ 21ರ ವರೆಗೆ ಬೆಳಿಗ್ಗೆ 11:00 ರಿಂದ ಸಂಜೆ 7:00ರ ವರೆಗೆ ಪ್ರದರ್ಶನಗೊಳ್ಳಲಿವೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…