ಮಣ್ಣು ಪರೀಕ್ಷಿಸಿ, ಆರೋಗ್ಯ ಕಾಪಾಡಿ

0
8
ಸಂದರ್ಭಿಕ ಚಿತ್ರ

ಕಲಬುರಗಿ; ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಇರುವ ಮಣ್ಣು ಮತ್ತು ನೀರು ಪರೀಕ್ಷೆ ಕೇಂದ್ರದ ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಕೃಷಿ ವಿಜ್ಞಾನ ಕೇಂದ್ರವು ಸಲಹೆ ನೀಡಿದೆ. ಈ ಸಂಬಂಧ ಪ್ರಕಟಣೆ ನೀಡಿರುವ ಕೇಂದ್ರವು ಜಿಲ್ಲೆಯಲ್ಲಿ ಏಕ ಬೆಳೆ ಪದ್ದತಿ ಅನುಸರಿಸುವುದರಿಂದ ಮತ್ತು ಅವೈಜ್ಞಾನಿಕವಾಗಿ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನಲ್ಲಿ ಹಲವು ಪೋಷಕಾಂಶಗಳ ಕೊರತೆ ಕಾಣಿಸುವುದರೊಂದಿಗೆ ಬೆಳೆಗಳ ಇಳುವರಿ ಕುಂಠಿತವಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ ಇಲ್ಲಿಯವರೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಅಂದಾಜು ಎರಡು ಸಾವಿರಕ್ಕಿಂತಲೂ ಹೆಚ್ಚು ಮಣ್ಣು ಮತ್ತು ನೀರಿನ ಮಾದರಿಗಳ ಪರೀಕ್ಷೆ ಮಾಡಿ ಫಲಿತಾಂಶದ ಆಧಾರದ ಮೇಲೆ ಹೆಚ್ಚಿನ ಇಳುವರಿಗಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ರೈತರಿಗೆ ಮಣ್ಣು ಆರೋಗ್ಯ ಚೀಟಿ ನೀಡುವ ಮೂಲಕ ತಿಳಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಬೆಳೆಯಲಾಗುವ ಹಲವು ಬೆಳೆಗಳಲ್ಲಿ ಪ್ರಧಾನ ಮತ್ತು ಲಘು ಪೋಷಕಾಂಶಗಳ ಕೊರತೆ ಕಂಡುಬಂದಿದೆ. ಹೆಚ್ಚು ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಹಾಗೂ ಸಾವಯವ ಗೊಬ್ಬರಗಳ (ತಿಪ್ಪೆಗೊಬ್ಬರ, ಎರೆಗೊಬ್ಬರ, ಕಾಂಪೋಷ್ಟ, ಹಸಿರೆಲೆಗೊಬ್ಬರ ಇತ್ಯಾದಿ) ಲಭ್ಯತೆ ಮತ್ತು ಕಡಿಮೆ ಬಳಕೆಯಿಂದಾಗಿ ಮಣ್ಣಿನ ಫಲವತ್ತತೆ ಕ್ರಮೇಣ ಕ್ಷೀಣಿಸುತ್ತಿದೆ. ಆದ್ದರಿಂದ ರೈತರು ತಮ್ಮ ಜಮೀನಿನ ಮಣ್ಣು ಮತ್ತು ನೀರಿನ ಮಾದರಿಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಪರೀಕ್ಷೆಯ ವರದಿ ಆಧಾರದ ಮೇಲೆ ಬೆಳೆ ಆಯ್ಕೆ ಮತ್ತು ಬೆಳೆಗಳ ಅವಶ್ಯಕತೆಗೆ ತಕ್ಕಂತೆ ರಸಗೊಬ್ಬರಗಳ ಪ್ರಮಾಣವನ್ನು ನಿರ್ಧರಿಸಬಹುದು.

Contact Your\'s Advertisement; 9902492681

ಅಲ್ಲದೇ ಬೆಳೆಗಳಿಗೆ ಸಮತೋಲನ ಗೊಬ್ಬರಗಳನ್ನು ಬಳಸುವುದರಿಂದ ಉತ್ತಮ ಇಳುವರಿಯ ಜೊತೆಗೆ ಮಣ್ಣಿನ ಆರೋಗ್ಯವನ್ನು ನಿರಂತರವಾಗಿ ಕಾಪಾಡಿಕೊಂಡು ಹೋಗಲು ಸಾಧ್ಯವಾಗುತ್ತದೆ. ಒಂದು ವೇಳೆ ಸಮಸ್ಯಾತ್ಮಕ ಜಮೀನಿದ್ದರೆ ನಿಯಂತ್ರಣ ಕ್ರಮಗಳು ಜೊತೆಗೆ ಸೂಕ್ತ ಪೋಷಕಾಂಶಗಳ ಶಿಫಾರಸ್ಸು ಮಾಹಿತಿಗಳನ್ನು ಮಣು ್ಣಆರೋಗ್ಯ ಚೀಟಿ ರೂಪದಲ್ಲಿ ರೈತರಿಗೆ ವಿತರಣೆ ಮಾಡಲಾಗುವುದು. ಇದಲ್ಲದೆ ನೀರಾವರಿ ಕೃಷಿಯಲ್ಲಿ ನೀರಿನ ಗುಣಮಟ್ಟ ಪ್ರಮುಖವಾಗಿದೆ. ಹೀಗಾಗಿ ಜಮೀನಿಗೆ ಬಳಸುವ ಬೋರವೆಲ್ ಅಥವಾ ಬಾವಿಯ ನೀರನ್ನು ಒಂದು ಬಾರಿಯಾದರೂ ಪರೀಕ್ಷಿಸಿ ಸುಧಾರಣಾ ಕ್ರಮಗಳನ್ನು ಅನುಸರಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು.

ರಾಸಾಯನಿಕ ಗೊಬ್ಬರಗಳ ಬೆಲೆ ಅಧಿಕವಾಗಿರುವ ಇಂದಿನ ದಿನಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಮಾಡಿ ಅಗತ್ಯವಿದ್ದಷ್ಟು ಗೊಬ್ಬರಗಳನ್ನು ಕೊಡುವುದರಿಂದ ಇಳುವರಿ ಜೊತೆಗೆ ಕಡಿಮೆ ಖರ್ಚಿನ ಬೇಸಾಯವನ್ನು ಕೈಗೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳವುದಲ್ಲದೇ ಮಣ್ಣಿನ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದಲೂ ಸಹ ಲಾಭದಾಯಕವಾಗಿದೆ.

ಜಿಲ್ಲೆಯ ರೈತ ಬಾಂಧವರು ಕೃಷಿ ವಿಜ್ಞಾನ ಕೇಂದ್ರÀÀದ ಮಣ್ಣು ಮತ್ತು ನೀರು ಪರೀಕ್ಷÁ ಕೇಂದ್ರದ ಪ್ರಯೋಜನ ಪಡೆದುಕೊಂಡು ತಮ್ಮ ಜಮೀನಿನ ಫಲವತ್ತೆಯನ್ನು ರಕ್ಷಿಸಿ ಕೃಷಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯ ಮಣ್ಣು ವಿಜ್ಞಾನಿ ಡಾ. ಶ್ರೀನಿವಾಸ ಬಿ.ವಿರವರನ್ನು ಮೊಬೈಲ್ ಸಂಖ್ಯೆ 9480519313 ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here