ಬಿಸಿ ಬಿಸಿ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಸಿದ ದಾಸಿಮಯ್ಯ

ಕಲಬುರಗಿ: ದೇವರ ದಾಸಿಮಯ್ಯ ಅವರು ನೇಯ್ಗೆ ಕಾಯಕ ಮಾಡುವದರ ಜೊತೆಗೆ, ಮೌಢ್ಯತೆ, ಕಂದಾಚಾರ, ಅಂದಶೃದ್ಧೆ, ಜಾತಿಯತೆ, ಶೋಷಣೆ, ಅನ್ಯಾಯದಂತಹ ಪಿಡುಗುಗಳಿಂದ ತೂತು ಬಿದ್ದ ಸಮಾಜವನ್ನು ತಮ್ಮ ವಚನಗಳ ಮೂಲಕ ನೇಯುವ ಕಾರ್ಯ ಮಾಡಿ, ಸಮ-ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಟ ಶರಣರಾಗಿದ್ದಾರೆಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ.ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಜರುಗಿದ ‘ಶರಣ ದೇವರ ದಾಸಿಮಯ್ಯನವರ 1045ನೇ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಶರಣ ಚಿಂತಕ ಬಸವರಾಜ ಎಸ್.ಕಂಟೆಪ್ಪಗೋಳ ಮಾತನಾಡಿ, ನೆಮ್ಮದಿ, ಸಮೃದ್ಧಯುತ ಜೀವನ ನಿರ್ಮಾಣಕ್ಕೆ ಅತ್ಯಂತ ಅವಶ್ಯಕವಾದ, ಸಮಾಜದಲ್ಲಿ ಒಂದು ಅಮೂಲಾಗ್ರಹವಾದ ಬದಲಾವಣೆಗೆ ಕಾರಣವಾದ ‘ವಚನ ಚಳುವಳಿ’ಗೆ ಪ್ರಮುಖ ಕೊಡುಗೆಯನ್ನು ನೀಡಿದ್ದಾರೆ. ‘ರಾಮನಾಥ’ ಎಂಬ ಅಂಕಿತ ನಾಮದೊಂದಿಗೆ ಅನೇಕ ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಸಿಬ್ಬಂದಿ ಸಾನಿಯಾ ಶೇಖ್, ಮುಖಂಡ ಮೆಹಬೂಬ ಪಟೇಲ್ ಜಂಬಗಿ, ಪ್ರಮುಖರಾದ ದಾದಾಪೀರ್ ಕಡಣಿ, ಮಕ್ಬೂಲ್ ಪಟೇಲ್ ಮಕಾಶಿ,ಅಮೀನ ಪಟೇಲ್ ಬಿರಾದಾರ, ದಸ್ತಗೀರ ಪಟೇಲ್ ಮೋಕಾಶಿ, ಪರವಿಲ್, ಜಗನಾಥ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

2 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

3 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

3 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

4 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

4 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

4 hours ago