ಡಾ. ಅಂಬೇಡ್ಕರ್ ಚಿಂತನೆಗಳು ಸದಾ ಪ್ರಸ್ತುತ: ತೇಗಲತಿಪ್ಪಿ ಅಭಿಮತ

0
73

ಕಲಬುರಗಿ: ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಟ್ಟ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ ಆದರ್ಶಗಳು ಸದಾ ಕಾಲ ಪ್ರಸ್ತುತವಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ದಮನಿತರಿಗೆ ಶಿಕ್ಷಣದ ಮೂಲಕ ಜಾಗೃತಿ ಮೂಡಿಸಿ ಅದರ ಮಹತ್ವವನ್ನು ತಿಳಿಸಿಕೊಟ್ಟ ಜಗತ್ತಿನ ಏಕೈಕ ಹೋರಾಟಗಾರ-ಚಿಂತಕ ಡಾ. ಅಂಬೇಡ್ಕರ್ ರು ಪ್ರಮುಖರು. ಮಹಿಳೆಯರಿಗೆ ಸಮಾನ ಅವಕಾಶಗಳು ನಮ್ಮ ಸಂವಿಧಾನದ ಮೂಲಕ ಕಲ್ಪಿಸಿ ಸಮ ಸಮಾಜ ನಿರ್ಮಾತೃಗಳಾಗಿದ್ದರು. ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತೆ ಮೌಲ್ಯಗಳೊಂದಿಗೆ ಮಾದರಿ ಸಂವಿಧಾನ ಕೊಟ್ಟಿದ್ದಾರೆ. ಎಲ್ಲಾ ಜಾತಿ-ಧರ್ಮದವರು ಡಾ. ಅಂಬೇಡ್ಕರ್ ರವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಡಿ ಬಡಿಗೇರ, ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಎಸ್ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ರಂಗನಟ ವಿಶ್ವರಾಜ್ ಪಾಟೀಲ, ಶಕುಂತಲಾ ಪಾಟೀಲ ಜಾವಳಿ, ಜ್ಯೋತಿ ಕೋಟನೂರ, ಮಾಲಾ ಕಣ್ಣಿ, ಸಂತೋಷ ಕುಡಳ್ಳಿ, ಸುರೇಶ ಲೇಂಗಟಿ, ಮಂಜುನಾಥ ಕಂಬಾಳಿಮಠ, ರಾಜೇಂದ್ರ ಮಾಡಬೂಳ, ಧರ್ಮರಾಜ ಜವಳಿ, ಮಲ್ಲಿನಾಥ ಸಂಗಶೆಟ್ಟಿ, ಹಣಮಂತರಪ್ರಭು, ರೇವಣಸಿದ್ದಪ್ಪ ಜೀವಣಗಿ, ಎಚ್ ಎಸ ಬರಗಾಲಿ, ವಿಶ್ವನಾಥ ತೊಟ್ನಲ್ಳಿ, ವಿನೋದಕುಮಾರ ಜೇನವೇರಿ, ಶಿವಲಿಂಗಪ್ಪ ಅಷ್ಟಗಿ, ಚನ್ನಮಲ್ಲಯ್ಯ ಹಿರೇಮಠ, ಎಸ್ ಕೆ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here