ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

0
850

ಕಲಬುರಗಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಮೆರವಣಿಗೆ ವೇಳೆ ಯುವಕ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ನಗರದ ಜೇವರ್ಗಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಅಶೋಕ್ ನಗರ ಬಡಾವಣೆಯ ನಿವಾಸಿ ಆಕಾಶ್ (19) ಹತ್ಯೆಯಾದ ದುದೈವಿ ಎಂದು ಗುರುತಿಸಲಾಗಿದೆ. ಡಾ ಅಂಬೇಡ್ಕರ್ ಜಯಂತ್ಯೋತ್ಸವ ಮೆರವಣಿಗೆ ವೇಳೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Contact Your\'s Advertisement; 9902492681

ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪ್ರಾಥಮಿಕ ವರದಿಯ ಪ್ರಕಾರ ಸ್ನೇಹಿತರ ಮಧ್ಯೆ ಜಗಳವಾಗಿ ಆಕಾಶ ತಂದೆ ಆಂಜನೇಯ (26) ವರ್ಷ ವ್ಯಕ್ತಿ ಮೃತಪಟ್ಟಿದ್ದು, ಪ್ರಕರಣ ದಾಖಲಾಗುತ್ತಿದ್ದು, ಪ್ರಕರಣ ದಾಖಲಾದ ನಂತರ ಮಾಹಿತಿ ನೀಡಲಾಗುವುದು ಎಂದು ನಗರ ಪೋಲೀಸ್ ಆಯುಕ್ತರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಶೋಕ್ ನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here