ಬಿಜೆಪಿ ಪ್ರಣಾಳಿಕೆಯ ಗ್ಯಾರಂಟಿಗಳಿಗೆ ವಾರೆಂಟಿ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

0
28

ಕಲಬುರಗಿ: ಬಿಜೆಪಿ ಪ್ರಣಾಳಿಕೆ ಘೋಷಣೆಗಳ ಪುಸ್ತಕದಂತಿದ್ದು ಮೋದಿ ಫೋಟೋ ಅಲ್ಬಮ್ ತರ ಇದೆ. ಅವರ ಪಿಕ್ ನಿಕ್ ನ ವಿಭಿನ್ನ ಫೋಟೋಗಳು ಬಿಟ್ಟರೆ ಯುವಕರಿಗೆ,‌ಮಹಿಳೆಯರಿಗೆ, ರೈತರಿಗೆ, ಬಡವರಿಗೆ, ಶ್ರಮಿಕರಿಗೆ, ನಿರ್ಗತಿಕರಿಗೆ ಉಪಯೋಗವಾಗುವಂತ ಯಾವುದೇ ಅಂಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ದಾಳಿ‌ ನಡೆಸಿದರು.

ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಬಿಜೆಪಿ ಪ್ರಣಾಳಿಕೆ ಈ ಹಿಂದಿನ ಅಚ್ಚೇದಿನ್ ನಿಂದ ಹಿಡಿದು ಈಗಿನ ಮೋದಿ ಕೀ ಗ್ಯಾರಂಟಿ ವರೆಗೆ ಬಂದಿದೆ. ಈ ಹಿಂದಿನ ಹತ್ತು ವರ್ಷಗಳ ಗ್ಯಾರಂಟಿಗಳು ಯಾರ ಗ್ಯಾರಂಟಿಗಳಾಗಿದ್ದವು? ಅವರದೇ ಗ್ಯಾರಂಟಿಗಳಾದ ಅಚ್ಛೇ ದಿನ್, ಸ್ಕಿಲ್ ಇಂಡಿಯಾ, ಮೇಕ್ ಇನ್‌ ಇಂಡಿಯಾ, 100 ಸ್ಮಾರ್ಟ್ ಸಿಟಿಗಳು, 2 ಕೋಟಿ ಉದ್ಯೋಗ ಸೃಷ್ಟಿಯ ಗ್ಯಾರಂಟಿಗಳು ಏನಾದವು? ಯಾವ ಗ್ಯಾರಂಟಿಗಳು ಅನುಷ್ಠಾನಗೊಂಡಿವೆ? ಅವರ ಗ್ಯಾರಂಟಿಗಳಿಗೆ ವಾರೆಂಟಿಯೇ ಇಲ್ಲ.ಹಾಗಾಗಿ, ಜನರು ಅವರ ಗ್ಯಾರಂಟಿಗಳನ್ನು ನಂಬುವುದಿಲ್ಲ. ನಮ್ಮ ಸರ್ಕಾರದ ಗ್ಯಾರಂಟಿಗಳನ್ನೇ ಅವರು ಕಾಪಿ‌ ಮಾಡಿಕೊಂಡಿದ್ದಾರೆ. ಯಾಕೆಂದರೆ ನಮ್ಮ ಗ್ಯಾರಂಟಿಗಳಿಗೆ ಖರ್ಗೆ ಸಾಹೇಬರ, ಸಿದ್ದರಾಮಯ್ಯನವರ ಹಾಗೂ ಡಿಕೆ ಶಿವಕುಮಾರ ಅವರ ಸಾಕ್ಷಿ ಇದೆ ಎಂದರು.

ಯುವಕರ ಬಗ್ಗೆ ಮೋದಿಯ ILO ಗ್ಯಾರಂಟಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಾಯಿದೆ ತರಲಾಗುವುದು ಎಂದಿದೆ. ಅವರದೇ ಪಕ್ಷ ಇಲ್ಲಿ ಅಧಿಕಾರದಲ್ಲಿದ್ದಾಗ ಪರೀಕ್ಷೆಗಳಲ್ಲಿ ಅವಾಂತರ ನಡೆದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಪರೀಕ್ಷೆಗಳ ಅಕ್ರಮ ತಡೆಗೆ ಬಿಲ್ ಪಾಸ್ ಮಾಡಿ ಅದನ್ನು ರಾಜ್ಯಪಾಲರ ಸಹಿಗೆ ಕಳಿಸಲಾಗುತ್ತು. ಆದರೆ, ಬಿಲ್ ವಾಪಸ್ ಬಂದಿದೆ ಎಂದರು.

ಕೇಂದ್ರದ ಅಂಕಿ ಅಂಶಗಳ ಪ್ರಕಾರ, ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಕೇಂದ್ರದ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ 9.64 ಲಕ್ಷ ಹುದ್ದೆಗಳು ಹಣಕಾಸು ಇಲಾಖೆಯಲ್ಲಿ, 3 ಲಕ್ಷ ಹುದ್ದೆಗಳು ರೇಲ್ವೆ ಇಲಾಖೆಯಲ್ಲಿ, 2.2 ಲಕ್ಷ ಹುದ್ದೆಗಳು ಸೇನೆಯ ಸಿವಿಲ್ ವಿಭಾಗದಲ್ಲಿ, 1.20 ಲಕ್ಷ ಹುದ್ದೆಗಳು ಅಂಚೆ ಇಲಾಖೆಯಲಿ, 74,000 ಹುದ್ದೆಗಳು ಕಂದಾಯ ಇಲಾಖೆಯಲ್ಲಿ ಖಾಲಿ ಇವೆ. ಈ ಎಲ್ಲ ಹುದ್ದೆ ತುಂಬಲು ಯಾವ ಕ್ರಮ ಕೈಗೊಳ್ಳಲಾಗುವುದು ಎನ್ನುವ ಕುರಿತು ಬಿಜೆಪಿ ಪ್ರಣಾಳಿಕೆಯಲ್ಲಿ ಇಲ್ಲ. I ವರದಿ ಪ್ರಕಾರ 83% ಯುವಕರು ನಿರುದ್ಯೋಗಿಗಳಾಗಿದ್ದಾರೆ. ಲೋಕನೀತಿ ಸರ್ವೆ ಪ್ರಕಾರ, 79% ಯುವಕರಿಗೆ ಉದ್ಯೋಗ ಅವಕಾಶಗಳು ಸಿಗುತ್ತಿಲ್ಲ. ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದರು.

ಬಿಜೆಪಿಯವರು ಸ್ಕಿಲ್ ಇಂಡಿಯಾ ಯೋಜನೆಯಡಿಯಲ್ಲಿ 2022 ರ ಒಳಗಾಗಿ 40 ಕೋಟಿ ಯುವಕರಿಗೆ ತರಬೇತಿ ನೀಡುವುದಾಗಿ ಹೇಳಿದ್ದು ಈ ಗುರಿಯಲ್ಲಿ ಇದೂವರೆಗೆ ಕೇವಲ 3.51% (1.40 ಕೋಟಿ ) ಜನರಿಗೆ ತರಬೇತಿ ನೀಡಿದ್ದಾರೆ ಹೊರತು ಉದ್ಯೋಗ ನೀಡಿಲ್ಲ. ಈ 3.51% ರಲ್ಲಿ 80% ಯುವಕರಿಗೆ ಉದ್ಯೋಗ ಸಿಕ್ಕಿಲ್ಲ 20% ಯುವಕರು ಈ ಯೋಜನೆ ಉಪಯೋಗ ಇಲ್ಲ ಎಂದು ಬಿಟ್ಟು ಹೋಗಿದ್ದಾರೆ ಎಂದು ಅಂಕಿ ಅಂಶ ನೀಡಿ ವಿವರಿಸಿದರು.

ಕಳೆದ ಸಲ ಬಂದಾಗ ಮೈಸೂರು, ಹಂಪಿ ಅಂಜನಾದ್ರಿ ಅಭಿವೃದ್ದಿ ಮಾಡುವುದಾಗಿ ಮೋದಿ ಹೇಳಿದ್ದರು ಅವೆಲ್ಲ ಏನಾಯ್ತು?. ಈಗ ಮತ್ತೆ ನಿನ್ನೆ ಅದೇ ಮಾತನ್ನೇ ಹೇಳಿದ್ದಾರೆ ಎಂದ ಖರ್ಗೆ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾಗಿದ್ದ ಬರ ಪರಿಹಾರ, ತೆರಿಗೆ ಪರಿಹಾರ ಕುರಿತು ಮಾತೇ ಆಡಿಲ್ಲ. ದೇವೇಗೌಡ, ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಪಕ್ಕ ಕೂಡಿಸಿಕೊಂಡು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಚಾರ ಬಗ್ಗೆ ಮಾತನಾಡುತ್ತಾರೆ. ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದ್ದಾರೆ ಎಂದು ತಾನೆ ಅವರನ್ನು ಸಿಎಂ ಸ್ಥಾನದಿಂದ‌ ಇಳಿಸಿದ್ದು ? ಯಡಿಯೂರಪ್ಪ ವಿಜಯೇಂದ್ರ ಅವರದ್ದು ಕುಟುಂಬ ರಾಜಕಾರಣವಲ್ಲವೇ? ಎಂದು ಪ್ರಶ್ನಿಸಿದರು.

ಮಹಿಳೆಯರಿಗೆ ಅನುಕೂಲವಾಗಲೆಂದು ನಮ್ಮ ಸರ್ಕಾರ ಶಕ್ತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿಯ ಮಿತ್ರ ಪಕ್ಷ ಜೆಡಿಎಸ್ ನ‌ ಕುಮಾರಸ್ವಾಮಿ‌ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹಗುರವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಮೋದಿ, ವಿಜಯೇಂದ್ರ, ಅಶೋಕ ಸ್ಪಷ್ಟಿಕರಣ‌ ನೀಡಿಲಿ. ” ಕುಮಾರಸ್ವಾಮಿ ವೆಸ್ಟ ಎಂಡ್ ನಲ್ಲಿ ಹಾಗೂ ತೋಟದ ಮನೆಯಲ್ಲಿ ಇದ್ದರೆ ಜನರ ಕಷ್ಟ ಅರ್ಥವಾಗುವುದಿಲ್ಲ. ಹೊರಗಡೆ ಬಂದು ನೋಡಲಿ” ಎಂದು ತಿರುಗೇಟು ನೀಡಿದರು.

ಯುಪಿಎ ಸರ್ಕಾರ ಇದ್ದಾಗ 34% ಮಹಿಳೆಯರು ಉದ್ಯೋಗ ದಲ್ಲಿ ತೊಡಗಿಸಿಕೊಂಡಿದ್ದರೆ, ಈಗ ಕೇವಲ 24% ಮಹಿಳೆಯರು ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಮಹಿಳೆಯರು ಹೆಚ್ಚು ತೊಡಗಿಸಿಕೊಂಡಿದ್ದಾರೆ. ಅದಕ್ಕಾಗಿಯೇ, ರಾಜ್ಯದಲಿ ಇದೂವರೆಗೆ 4000 ಕೂಸಿನ ಮನೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು‌ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ನೀಡಿರುವ ಅವಹೇಳನಕಾರಿ ಹೇಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಇನ್ನೂ ಚಾತುರ್ವರ್ಣದಲ್ಲಿದ್ದಾರೆ. ಮಹಿಳೆಯರು ಮುಖ್ಯವಾಹಿನಿಗೆ ಬರುವುದು ಅವರಿಗೆ ಇಷ್ಟವಿಲ್ಲ.

ಅಬ್ ಕೀ ಬಾರ್ ಚಾರ್ ಸೌ ಪಾರ್ ಅಲ್ಲ ಅಬ್ ಕೀ ಬಾರ್ ಬಿಜೆಪಿ ಸಂಸತ್ ಕೇ ಬಹಾರ್ ಆಗುತ್ತದೆ ಎಂದು ಸಚಿವ, ಕರ್ನಾಟಕದಿಂದ ನೂರು ಕೋಟಿ‌ಹಣ ದೇಶದ‌ ಚುನಾವಣೆಗೆ ಬಳಕೆಯಾಗುತ್ತಿದೆ ಎಂದು ಪ್ರಧಾನಿ‌ ಹೇಳಿರುವುದು ಹಾಸ್ಯಾಸ್ಪದ. ” ಕೇಂದ್ರದ ತನಿಖಾ‌ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಅವರಿಂದ ತನಿಖೆ‌ ನಡೆಸಲಿ ” ಎಂದು ಸವಾಲು ಹಾಕಿದರು.

ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಪಕ್ಷ ಸೇರ್ಪಡೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಗುತ್ತೇದಾರ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಬಂದಿದ್ದಾರೆ. ಆದರೆ, ಅಂತಹ ಯಾವುದೇ ಪ್ರಸ್ತಾವನೆ ಸಧ್ಯ ಪಕ್ಷದ ಮುಂದಿಲ್ಲ. ಆದರೂ ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಮ್ಮ ಕುಟುಂಬ ಬದ್ಧವಾಗಿರುತ್ತದೆ ಎಂದರು.

ವೇದಿಕೆಯ ಮೇಲೆ ಜಗದೇವ ಗುತ್ತೇದಾರ, ರಾಜಗೋಪಾಲರೆಡ್ಡಿ, ಡಾ ಕಿರಣ್ ದೇಶಮುಖ್, ಪ್ರವೀಣ್ ಹರವಾಳ, ಅರವಿಂದ ಚವ್ಹಾಣ, ಶಿವು ಹೊನಗುಂಟಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here