ಪಿಯುಸಿ ಕನ್ನಡ ಅಂಕವೀರರಿಗೆ ಸತ್ಕಾರ ಏ.21 ರಂದು

0
585

ಕಲಬುರಗಿ: ಪ್ರಸಕ್ತ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭವನ್ನು ಏಪ್ರೀಲ್ 21 ರಂದು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಪ್ರತಿಭಾವಂತರಾದ ಇಂದಿನ ಮಕ್ಕಳಿಗೆ ಇಂಥ ಸನ್ಮಾನದ ಕಾರ್ಯಕ್ರಮಗಳು ಮಾತೃಭಾಷಾಭಿಮಾನ ಹೆಚ್ಚಿಸುತ್ತದೆ. ಹಾಗಾಗಿ, ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಕನ್ನಡದಲ್ಲಿ 95 ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ್ ಅಂಡಗಿ-ಮೊ. 99864 20656 ಹಾಗೂ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ-ಮೊ. 98803 49025 ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಯಿಸಲು ಕೋರಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here