ಸಮಾಜದ ಸಮತೋಲನ ಕಾಪಾಡುವ ಶಕ್ತಿ ಚಿತ್ರಕಲೆಗಿದೆ

0
18

ಕಲಬುರಗಿ: ದೃಶ್ಯಕಲೆಯು ಅತ್ಯಂತ ಪರಿಣಾಮಕಾರಿಯಾದ ಮಾಧ್ಯಮವಾಗಿದ್ದು, ಇದು ಮನುಷ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಸಮಾಜದಲ್ಲಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ, ಅವುಗಳಿಗೆ ಪರಿಹಾರವನ್ನು ಸೂಚಿಸಿ ಸಮಾಜದ ಸಮತೋಲನ ಸ್ಥಿತಿಯನ್ನು ಕಾಪಾಡುವ ಶಕ್ತಿ ದೃಶ್ಯಕಲೆಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಅಂತಾರಾಷ್ಟ್ರೀಯ ಖ್ಯಾತ ಚಿತ್ರ ಕಲಾವಿದ ಪ್ರೊ.ವಿ.ಜಿ.ಅಂದಾನಿ ಅಭಿಪ್ರಾಯಪಟ್ಟರು.

ನಗರದ ಜಗತ್ ವೃತ್ತದ ಸಮೀಪವಿರುವ ‘ಎಂ.ಎಂ.ಕೆ. ವಿಜ್ಯೂಲ್ ಆರ್ಟ್’ ಕಾಲೇಜಿನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಜರುಗಿದ ‘ವಿಶ್ವ ದೃಶ್ಯಕಲಾ ದಿನಾಚರಣೆ’ಯಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಚಿತ್ರಕಲೆಯು ಘಟನೆ, ಸಂದರ್ಭದ ನೈಜತೆಯನ್ನು ಕಟ್ಟಿಗೆ ಕಟ್ಟುವ ಹಾಗೆ ನೀಡುತ್ತದೆ. ಇದು ಶಾಶ್ವತವಾದ ದಾಖಲೆಯಾಗಿದೆ. ‘ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ’ ಎಂಬ ಮಾತು ಚಿತ್ರಕಲೆಯ ಮಹತ್ವವನ್ನು ಸಾರುತ್ತದೆ. ಚಿತ್ರ ಕಲಾವಿದರಲ್ಲಿರುವ ಕಲ್ಪನಾ ಶಕ್ತಿ ಅದ್ಭುತವಾಗಿದೆ. ಇಂದಿನ ಯಾಂತ್ರಿಕೃತ ಬದುಕಿನಲ್ಲಿ ಸಂಬಂಧಗಳ ಹುಡುಕಾಟ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕಲೆಯೆಂಬುದು ಜೀವಂತಿಕೆಯನ್ನು ಒದಗಿಸಿಕೊಡುತ್ತದೆ. ಕಲೆಯು ಮುಂದಿನ ಪೀಳಿಗೆಯಲ್ಲಿ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತದೆ. ಜಾತಿ, ಧರ್ಮ, ವ್ಯಾಪ್ತಿ, ಪ್ರದೇಶಗಳನ್ನು ಮೀರಿದ್ದಾಗಿದ್ದು, ಮೌನ ಭಾಷೆಯಾಗಿದೆ. ಲಿಯೋನಾರ್ಡೋ ಡ ವಿನ್ಸಿ ಅವರ ಕೊಡುಗೆ ಅನನ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ, ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ, ಸಂಘಟನಾ ಕಾರ್ಯದರ್ಶಿ ಸಾಯಬಣ್ಣ ಹೋಳ್ಕರ್, ಕಾಲೇಜಿನ ಗೌತಮ ವಿ.ಅಂದಾನಿ, ರೇಖಾ ಕುಲಕರ್ಣಿ, ಹಣಮಂತ ಮಂತೆಟ್ಟಿ, ಯಮನಪ್ಪ ಚೌಧರಿ, ಮಹೇಶ್ವರ ಶಿಲಾರ, ಕಿಶೋರ ಮೈಸೂರ ಸೇರಿದಂತೆ ಮತ್ತಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here