ಬಿಸಿ ಬಿಸಿ ಸುದ್ದಿ

ಸಾಮೂಹಿಕ ವಚನ ಪಾರಾಯಣ ಆರಂಭ

ಭಾಲ್ಕಿ; ವಚನ ಜಾತ್ರೆ 2024 ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿ ಉತ್ಸವ ಹಾಗೂ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ 25 ನೆಯ ಸ್ಮರಣೋತ್ಸವ ನಿಮಿತ್ಯ ಪೂಜ್ಯ ಶ್ರೀ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನಿಧ್ಯದಲ್ಲಿ ಬೀದರ ಅನುಭವಮಂಟಪ ಸಂಸ್ಕøತಿ ವಿದ್ಯಾಲಯದ ಮಕ್ಕಳು ದೀಪ ಬೆಳಗಿಸಿ ಸಾಮೂಹಿಕ ವಚನ ಪಾರಾಯಣಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳು ಅಕ್ಕನ ಯೋಗಾಂಗ ತ್ರಿವಿಧಿಯನ್ನು ಹೇಳಿದರು.

ಸಾನಿಧ್ಯವಹಿಸಿದ ಪೂಜ್ಯರು ವಚನಗಳು ಬಸವಾದಿ ಶರಣರು ನೀಡಿರುವ ಅಮೂಲ್ಯ ಕೊಡುಗೆ. ವಚನಗಳ ಪಾರಾಯಣದಿಂದ ನಮ್ಮ ಜೀವನದಲ್ಲಿ ಬಸವತತ್ವದ ನಿಜಾಚರಣೆ ಬರುತ್ತದೆ. ಶರಣರು ಬೋಧಿಸಿದ ಮೌಲ್ಯಗಳನ್ನು ನಡೆಯಲ್ಲಿ ತರಲು ನಮಗೆ ಒಂದು ಆತ್ಮಬಲ ದೊರೆಯುತ್ತದೆ. ಶರಣರು ತಮ್ಮ ಪ್ರಾಣ ಬಲಿದಾನ ಮಾಡಿ ವಚನಗಳ ರಕ್ಷಣೆ ಮಾಡಿದರು. ನಾವು ಅವುಗಳನ್ನು ಪಾರಾಯಣ, ಅಧ್ಯಯನ, ಅನುಷ್ಠಾನ ಮಾಡುವ ಮೂಲಕ ಶರಣ ಮಾರ್ಗವನ್ನು ಅನುಸರಿಸಬೇಕು. ಅಂದಾಗ ನಮ್ಮ ಜೀವನ ಸುಖಿಯಾಗುತ್ತದೆ ಎಂದು ಆಶೀರ್ವಚನ ನೀಡಿದರು. ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು, ಪೂಜ್ಯ ಶ್ರೀ ಶಿವಾನಂದ ಸ್ವಾಮಿಗಳು, ಪೂಜ್ಯ ಶ್ರೀ ಬಸವಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಬಸವೇಶ್ವರಿ ತಾಯಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಬೀದರ ಶರಣೆ ಸುವರ್ಣಾ ಚಿಮಕೋಡೆ, ಶರಣಪ್ಪ ಚಿಮಕೋಡೆ, ಸಂಗ್ರಾಮಪ್ಪ ಇಂಗಳೆ, ಪಾರಾಯಣ ಸೇವಾ ಸಮಿತಿ ಅಧ್ಯಕ್ಷೆ ಪಾರ್ವತಿ ಡೋಣಗಾಪೂರೆ, ಪ್ರವಚನ ಸೇವಾ ಸಮಿತಿಯ ಅಧ್ಯಕ್ಷ ಗಣಪತಿ ಬಾವುಗೆ, ಮಲ್ಲಮ್ಮ ನಾಗನಕೇರೆ ಉಪಸ್ತಿತರಿದ್ದರು. ಶರಣೆ ಪಾರ್ವತಿ ಧೂಮ್ಮನಸೂರೆ ಅವರಿಂದ ಧರ್ಮಗುರು ಬಸವಣ್ಣನವರ ಪೂಜೆ ನೆರವೇರಿಯಿತು. ಧೂಮ್ಮಸೂರೆ ದಂಪತಿಗಳಿಂದ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಯಿತು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago