ಮಕ್ಕಳು ಒಳ್ಳೆಯ ಸಂಸ್ಕಾರ ರೂಢಿಸಿಕೊಂಡರೆ ಸಾಧನೆ ನಿಶ್ಚಿತ

ಕಲಬುರಗಿ; ಶಿಕ್ಷಣದ ಜತೆಗೇ ಮಕ್ಕಳು ಒಳ್ಳೆಯ ಸಂಸ್ಕಾರ ರೂಢಿಸಿಕೊಂಡರೆ ನಿಶ್ಚಿತವಾಗಿ ಸಾಧನೆ ಮಾಡಬಹುದಾಗಿದೆ ಎಂದು ಹಿರಿಯ ಪತ್ರಕರ್ತ ಶಂಕರ ಕೊಡ್ಲಾ ಹೇಳಿದರು.

ರವಿವಾರ ಇಲ್ಲಿನ ರಂಗಾಯಣ ಪ್ರಸಕ್ತವಾಗಿ ಹಮ್ಮಿಕೊಂಡಿರುವ ಚಿಣ್ಣರ ಮೇಳದ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಡೊಳ್ಳು ಬಾರಿಸುವ‌ ಮೂಲಕ ಉದ್ಘಾಟಿಸಿ ಮಾತನಾಡಿದರು.‌

ಈಗಂತು‌‌ ಮಕ್ಕಳನ್ನು ಪಾಲಕರು ಅತಿ ಹೆಚ್ವಿನ‌ ಮುತುವರ್ಜಿ ವಹಿಸಿ ಬೆಳೆಸುತ್ತಿದ್ದಾರೆ.‌ಅದೇ ತೆರನಾಗಿ ಮಕ್ಕಳು ತಂದೆ ತಾಯಿಯಲ್ಲೇ ದೇವರನ್ನು ಕಾಣಿ. ಹೀಗಾಗಿ ಶಿಕ್ಷಣ ಜತೆಗೆ ವಿನಯ ಹಾಗೂ ಹಿರಿಯರ ಬಗ್ಗೆ ಗೌರವ ಗುಣ ಹೊಂದುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ತಂದೆ ತಾಯಿಯನ್ನು ದಿನಾಲು ಅವರಿಗೆ ನಮಸ್ಕರಿಸಿ ದಿನದ ಕೆಲಸಗಳನ್ನು ಆರಂಭಿಸಿದರೆ ಸಂಸ್ಕಾರ ಬೆಳೆದು ಸರ್ವಾಂಗೀಣ ಅಭಿವೃದ್ಧಿ ಗೆ ಪೂರಕವಾಗುತ್ತದೆ ಎಂದು ಕೊಡ್ಲಾ ವಿವರಿಸಿದರು.

ಸಾಹಿತಿ ಚಂದ್ರಕಲಾ ಬಿದರಿ ಮಾತನಾಡಿ, ಮಕ್ಕಳಲ್ಲಿ ಅಗಾಧವಾದ ಕಲಿಕಾ ಶಕ್ತಿ ಇರುತ್ತದೆ. ಅದಕ್ಕೆ ಸರಿಯಾದ ಮಾರ್ಗ ದರ್ಶನ ದೊರೆತರೆ ಅವರಲ್ಲಿ ಅಡಗಿದೆ ಪ್ರತಿಭೆ ಹೊರ ಬರಲು ಸಹಾಯವಾಗುತ್ತದೆ. ಇಂಥ ಚಿಣ್ಣರ ಮೇಳಗಳು ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತವೆ. ರಜಾ ದಿನಗಳಲ್ಲಿ ಆಯೋಜಿಸಲ್ಪಟ್ಟ ಶಿಬಿರಗಳು ಮಕ್ಕಳಿಗೆ ಹೊಸ ಸಾಧ್ಯತೆಗಳನ್ನು ಹೊಸ ಚೈತನ್ಯ ತುಂಬುತ್ತದೆ. ಪ್ರಮುಖವಾಗಿ ಅವರ ಸವಾ೯ಂಗೀಣ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಮಕ್ಕಳು ಶಿಬಿರದ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕಲಬುರಗಿ ರಂಗಾಯಣ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮಕ್ಕಳ ಸಾಹಿತಿ ಎ.ಕೆ.‌ರಾಮೇಶ್ವರ ಅಧ್ಯಕ್ಷತೆ ವಹಿಸಿ, ಇಂತಹ ಶಿಬಿರಗಳು ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚುತ್ತದೆ. ಈಗಂತು ರಜಾ ದಿನಗಳಲ್ಲಿ ಮೊಬೈಲ್ ಗೆ ಹೆಚ್ಚು ಹೊಂದಾಣಿಕೆಯಾಗುತ್ತಿರುವುದರಿಂದ ಇಂತಹ ಶಿಬಿರಗಳು ಮಕ್ಕಳಲ್ಲಿ ಪ್ರತಿಭೆಯನ್ನು ಹೊರ ಸೂಸುತ್ತವೆಯಲ್ಲದೇ ಆತ್ಮ ವಿಶ್ವಾಸ ಹೆಚ್ಚಿಸುತ್ತದೆ ಎಂದು ವಿವರಣೆ ನೀಡಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.

ರಂಗಾಯಣದ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಪ್ರಾಸ್ತಾವಿಕವಾಗಿ ಮಾತನಾಡಿ, ರಂಗಾಯಣದ ಈ ಶಿಬಿರ ಮಕ್ಕಳಲ್ಲಿ ಹುದುಗಿರುವ ಕಲೆಯನ್ನು ಹೊರ ತೆಗೆದು ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು. ‌

ಬೇಸಿಗೆ ರಂಗ ತರಬೇತಿ ಶಿಬಿರದ ನಿರ್ದೇಶಕರಾದ ಕಲ್ಯಾಣಿ ಭಜಂತ್ರಿ ಸ್ವಾಗತಿಸಿದರು. ಶಿಬಿರದ ಸಂಪನ್ಮೂಲಗಳ ವ್ಯಕ್ತಿಗಳಾದ ರಾಜಕುಮಾರ ಎನ್.ಕೆ, ಶಾಂತಲಿಂಗಯ್ಯ ಎಸ್. ಮಠಪತಿ, ಸಿದ್ಧಾರ್ಥ ಕಟ್ಟಿಮನಿ, ಹಣಮಂತ ಭಜಂತ್ರಿ, ಉದಯಕುಮಾರ್ ಪುಲಾರೆ, ಭಾಗ್ಯಶ್ರೀ ಪಾಳಾ, ಗಂಗೋತ್ರಿ ಮಠಪತಿ, ಸುಹಾಸಿನಿ ಪುಲಾರೆ ಹಾಗೂ ಪದ್ಮಾ ಸೇರಿದಂತೆ ಮುಂತಾದವರಿದ್ದರು. ‌ಶಿಬಿರದ ಉದ್ಘಾಟನಾ ನಂತರ ಸಿದ್ಧರಾಮ ಕಾರಣಿಕ ರಚಿತ ಮಿಸೆಸ್ ಅಂಬೇಡ್ಕರ್ ನಾಟಕ ಪ್ರದರ್ಶನ ನಡೆಯಿತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 seconds ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420