ಸುರಪುರ: ದೇಶದಲ್ಲಿ ಇಂದು ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ದೀನ ದಲಿತ ಶ್ರಮಿಕರನ್ನು ನಿರ್ನಾಮ ಮಾಡುತ್ತಿದೆ ಎಂದು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಕೆ.ನೀಲಾ ಆಕ್ರೋಶ ವ್ಯಕ್ತಪಡಿಸಿದರು.
ನಗರದ ರಂಗಂಪೇಟೆಯ ಶಾದಿ ಮಹಲ್ನಲ್ಲಿ ಸಿಪಿಐ(ಎಂ) ವತಿಯಿಂದ ಸಂವಿಧಾನ ಸಂರಕ್ಷಿಸಿ ದೇಶ ಉಳಿಸಿ ಎನ್ನುವ ಘೋಷ ವಾಕ್ಯದೊಂದಿಗೆ ಬಿಜೆಪಿ ಪಕ್ಷವನ್ನು ಸೋಲಿಸಿ ಎನ್ನುವ ಕರೆಯೊಂದಿಗೆ ನಡೆದ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ,ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ,ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತಾಗಿದೆ,ರೈತರ ಬೇಡಿಕೆಗಳು ಈಡೇರಿಸುತ್ತಿಲ್ಲ,ಆತ್ಮಹತ್ಯೆಗಳ ಸರಣಿ ಮುಂದುವರೆದಿದೆ,ಆದರೆ ಪ್ರಧಾನಮಂತ್ರಿಯವರು ಮಾತ್ರ ದೇಶವನ್ನು ಉದ್ಧಾರ ಮಾಡಿದ್ದೇವೆ ಎಂದು ಭಾಷಣ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಣಿಪುರದಲ್ಲಿ ಮಹಿಳೆಯರ ಮೇಲೆ ಘೋರ ಕೃತ್ಯಗಳು ನಡೆಯುತ್ತವೆ,ಬಿಲ್ಕಿಸ್ ಬಾನು ಪ್ರಕರಣದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಚಾರ,ಅವರ ಕುಟುಂಬದವರ ಕೊಲೆ ನಡೆದಿವೆ ಇಂತಹ ಘಟನೆಗಳನ್ನು ತಡೆಯುವಲ್ಲಿ ಬಿಜೆಪಿ ಸರಕಾರ ಸಂಪೂರ್ಣವಾಗಿ ಸೋತಿದೆ,ಆದ್ದರಿಂದ ಈಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಎಲ್ಲರು ಸೋಲಿಸಲೆಬೇಕು ಎಂದು ಕರೆ ನೀಡಿದರು.
ಸಿಪಿಐ (ಎಂ) ಜಿಲ್ಲಾ ಮುಖಂಡ ದವಲಸಾಬ್ ನದಾಫ್ ಮಾತನಾಡಿ,ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿಎಎ ಜಾರಿಗೊಳಿಸಿ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಹೊರಟಿದ್ದಾರೆ,ಹಿಂದು ಮುಸ್ಲೀಂ ಎನ್ನದೆ ಭಾವೈಕ್ಯತೆ ಒಬ್ಬರಿಗೊಬ್ಬರು ಅಣ್ಣ ತಮ್ಮಂದಿರಂತೆ ಜೀವನ ನಡೆಸುತ್ತಿರುವವರಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಚನ್ನಪ್ಪ ಆನೆಗುಂದಿ ಮಾತನಾಡಿ,2014 ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿದೇಶ ದಿಂದ ಕಪ್ಪು ಹಣ ತಂದು ಪ್ರತಿ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದರು,ಯುವ ಜನರಿಗಾಗಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದರು ಉದ್ಯೋಗವನ್ನು ಕೊಡಲಿಲ್ಲ,ಎಮ್.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಿ ರೈತರಿಗೆ ಬೆಂಬಲ ಬೆಲೆ ನೀಡಿ 2022ಕ್ಕೆ ರೈತರನ್ನು ಎರಡು ಪಟ್ಟು ಶ್ರೀಮಂತರನ್ನಾಗಿ ಮಾಡುತ್ತೇನೆಂದು ಹೇಳಿದ್ದರು ಆದರೆ ಇದ್ಯಾವುದು ಇಡೇರಿಸಿಲ್ಲ,ಇಂತಹ ಸರಕಾರ ನಮಗೆ ಬೇಡ ನಮಗೆ ರೈತ ಕಾರ್ಮಿಕರ ಏಳಿಗೆಗೆ ಶ್ರಮಿಸುವ ಸರಕಾರ ಬೇಕಿದೆ,ಅದಕ್ಕಾಗಿ ಬಿಜೆಪಿಯನ್ನು ಸೋಲಿಸಲೆಬೇಕು ಎಂದರು.
ವೇದಿಕೆಯಲ್ಲಿ ಸಿಪಿಐ (ಎಂ) ಜಿಲ್ಲಾ ಮುಖಂಡರಾದ ಎಸ್.ಎಮ್.ಸಾಗರ,ಜೈಲಾಲ ತೋಟದಮನಿ,ಕಪ್ರಾರೈ ಸಂಘದ ತಾ.ಅಧ್ಯಕ್ಷ ಧರ್ಮಣ್ಣ ದೊರೆ,ಕೂಲಿಕಾರರ ಸಂಘದ ರಾಜ್ಯ ಸಮಿತಿ ಮುಖಂಡರಾದ ಮಲ್ಲಮ್ಮ ಕೊಡ್ಲಿ ಸೇರಿದಂತೆ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…