ಸುರಪುರ: ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲಾ ಘಟಕ ಮತ್ತು ಶ್ರೀ ಶ್ರೀ ರೂರಲ್ ಡೆವಲಪ್ಮೆಂಟ್ ಪ್ರೋಗ್ರಾಮ್(ಎಸ್.ಎಸ್.ಆರ್.ಡಿ.ಪಿ) ವತಿಯಿಂದ ಯುವಕ/ಯುವತಿಯರಿಗಾಗಿ ಕೌಶಲ್ಯಾಭಿವೃಧ್ಧಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಆರ್ಟ್ ಆಫ್ ಲಿವಿಂಗ್ ಜಿಲ್ಲಾ ಸಂಯೋಜಕಿ ಶಿಲ್ಪಾ ಆವಂಟಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ,ಯಾದಗಿರಿ ಜಿಲ್ಲೆ ಸೇರಿದಂತೆ ಕರ್ನಾಟಕದ ಯುವಕ/ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ತರಬೇತಿಯಲ್ಲಿ ಭಾಗವಹಿಸಿ ತಮ್ಮ ಜೀವನವನ್ನು ಆರ್ಥಿಕವಾಗಿ,ಸಾಮಾಜಿಕವಾಗಿ,ಮಾನಸಿಕವಾಗಿ,ಸಮಾಜದ ಹಿತಕ್ಕಾಗಿ ಪ್ರೇರಣೆಯಾಗಲು ಇದೊಂದು ಉತ್ತಮವಾದ ಸುವರ್ಣಾವಕಾಶವಾಗಿದ್ದು ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.
ಕೌಶಲ್ಯಾಭಿವೃಧ್ಧಿಯಲ್ಲಿ ಸೋಲಾರ್ ಮತ್ತು ಎಲೆಕ್ಟ್ರೀಕಲ್ ಟ್ರೈನಿಂಗ್,ಮೊಬೈಲ್ ರಿಪೇರಿ,ಡ್ರೋಣ್ ಟ್ರೈನಿಂಗ್,ಕಂಪ್ಯೂಟರ್ ಟ್ರೈನಿಂಗ್,ಮಾಡರ್ನ್ ಕಾರ್ಪೆಂಟ್ರ್ ಟ್ರೈನಿಂಗ್,ಬ್ರಿಡ್ಜ್ ಪ್ರೋಗ್ರಾಮ್,ಡಿ.ಜಿ.ಮೆಕ್ಯಾನಿಕಲ್ ಪ್ರೋಗ್ರಾಮ್,3ಡಿ ಡಿಜಿಟಲ್ ಪ್ರಿಂಟಿಂಗ್ ಮುಂತಾದ ಸುಮಾರು 30ಕ್ಕೂ ಹೆಚ್ಚು ತರಬೇತಿ ಕಾರ್ಯಕ್ರಮಗಳು ಹೊಂದಿವೆ,ತರಬೇತಿ ಪೂರ್ಣಗೊಂಡ ನಂತರ ಪ್ರಮಾಣ ಪತ್ರವನ್ನು ಮತ್ತು ಉದ್ಯೋಗವನ್ನು ನೀಡಲಾಗುತ್ತದೆ ಅಥವಾ ಸ್ವಂತ ಉದ್ಯೋಗವನ್ನು ಕೈಗೊಳ್ಳಬಹುದು,ಎಲ್ಲಾ ತರಬೇತಿ ಕಾರ್ಯಕ್ರಮಗಳು ಊಟ ವಸತಿಯೊಂದಿಗೆ ಲಭ್ಯವಿದೆ ಎಂದು ತಿಳಿಸಿದರು.
ತರಬೇತಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಇಂಟನ್ರ್ಯಾಷನಲ್ ಸೆಂಟರ್,21ನೇ ಕಿ.ಮೀ,ಕನಕಪುರ ರೋಡ್ ಉದಯಪುರ ಬೆಂಗಳೂರ ಇಲ್ಲಿ ನಡೆಯಲಿದೆ.ಆಸಕ್ತರು ಮೋ:7337798811 ಸಂಪರ್ಕಿಸಬಹುದು ಎಂದು ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಸಂಯೋಜಕಿ ಶಿಲ್ಪಾ ಆವಂಟಿಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…