ಬಿಸಿ ಬಿಸಿ ಸುದ್ದಿ

ರೈತರ ಆದಾಯ ದ್ವಿಗುಣ ಮಾಡೋದಾಗಿ ಬಿಜೆಪಿ ಸುಳ್ಳು ಹೇಳಿದೆ; ಶಾಸಕ ಡಾ. ಅಜಯ್‌ ಸಿಂಗ್‌

ಕಲಬುರಗಿ; ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಮಂಗಳವಾರ ಜೇವರ್ಗಿ ಅಸೆಂಬ್ಲಿ ಕ್ಷೇತ್ರದಡಿ ಬರುವ ಜೇವಗ್ರಿ ಹಾಗೂ ಯಡ್ರಾಮಿ ತಾಲೂಕುಗಳ ಹೋಬಳಿ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸಿ ಮತ ಯಾಚಿಸಲಾಯ್ತು.

ಕೆಕೆಆರ್‌ಬಿಡಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ನಡೆದ ಜೇವರ್ಗಿ ಮತಯಾಚನೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಜೇವರ್ಗಿ ತಾಲೂಕಿನ ಜೇವರ್ಗಿ, ಚಿಗರಳ್ಳಿ, ಯಡ್ರಾಮಿ ತಾಲೂಕಿನ ಇಜೇರಿಯಲ್ಲಿ ಬಹಿರಂಗ ಸಮಾವೇಶಗಳಲ್ಲಿ ಕಿಕ್ಕಿರಿದು ಜನ ಸೇರಿತ್ತು, ರಾಧಾಕೃಷ್ಣ ಹಾಗೂ ನಾಯಕರ ತಂಡ ಹೋದಲ್ಲೆಲ್ಲಾ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳುತ್ತಿದ್ದ ನೋಟಗಳು ಕಂಡವು.

ಜೇವರ್ಗಿ, ಚಿಗರಳ್ಳಿ ಹಾಗೂ ಇಜೇರಿಯ ಸಭೆಗಳಲ್ಲಿ ಮಾನಾಡಿದ ಶಾಸಕರಾದ ಡಾ. ಅಜಯ್‌ ಸಿಂಗ್‌ ಅವರು ಈ ಬಾರಿ ಜೇವರ್ಗಿಯಿಂದ ಹೆಚ್ಚಿನ ಬಹುಮತ ಕೊಡುವ ಮೂಲಕ ಕಾಗ್ರೆಸ್‌ ಪಕ್ಷದ ಜಯಭೇರಿಗೆ, ರಾಧಾಕೃಷ್ಣರ ಗೆಲುವಿಗೆ ಶ್ರಮಿಸೋದಾಗಿ ನುಡಿದರು.

ಕಳೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ‌ ಖರ್ಗೆ ಅವರಿಗೆ ಆದ ಸೋಲು ಅವರ ವೈಯಕ್ತಿಕ‌ ಸೋಲಲ್ಲ ಅದು ಅಭಿವೃದ್ದಿಗೆ ಆದ ಹಿನ್ನೆಡೆಯಾಗಿದೆ. ಸಂಸದರಾಗಿ ಆಯ್ಕೆಯಾದ ಉಮೇಶ ಜಾಧವ್ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ. ಈ ಸಲ ಹಾಗಾಗಬಾರದು. ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಗೆಲ್ಲಿಸುವ ಮೂಲಕ ಕಲಬುರಗಿಯ ಸಮಗ್ರ ಅಭಿವೃದ್ದಿಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪ್ರತಿ ಮಹಿಳೆಯರಿಗೆ ವಾರ್ಷಿಕ ರೂ 1 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ ಡಾ ಅಜಯ್ ಸಿಂಗ್ ಜಿಲ್ಲೆಯ ಅಭಿವೃದ್ದಿಗೆ ಪಣತೊಟ್ಟು ಕೆಲಸ ಧರಂ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಂತೆ ರಾಧಾಕೃಷ್ಣ ಅವರು ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ” ಜೇವರ್ಗಿ ಮತಕ್ಷೇದಿಂದ ಕನಿಷ್ಠ 10,000-15,000 ಸಾವಿರ ಮತಗಳ ಲೀಡ್ ಕೊಡುತ್ತೇವೆ ಎಂದು ಡಾ. ಅಜಯ್‌ ಸಿಂಗ್‌ ಹೇಳಿದರು.

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದ ಮೋದಿ ಯಾವ ಆದಾಯ ದುಪ್ಪಟ್ಟು ಮಾಡಿಲ್ಲ. ಬಿಜೆಪಿಯವರು ಅವರು ಹೇಳಿದ್ದೆಲ್ಲ ಬರೀ ಸುಳ್ಳು ಎಂದರು.

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಆರ್ಥಿಕ‌ ಅಸಮಾನತೆ, ನಿರುದ್ಯೋಗ, ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಕಷ್ಟ ಅರಿತುಕೊಂಡೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ಆರ್ಥಿಕ ಸಬಲತೆಗೆ ಹಾಗೂ ಅವರು ನೆಮ್ಮದಿಯ ಜೀವನ ನಡೆಸಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ ಪಕ್ಷದವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು ಅಧಿಕಾರದಲ್ಲಿದ್ದಾಗ ಜನರಿಗೆ ಖರ್ಚು ಮಾಡಬೇಕಿದ್ದ ತೆರಿಗೆ ಹಣವನ್ನು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದರು. ಆದರೆ ನಾವು ಜನರ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಮತ್ತೆ ಅವರಿಗೆ ಸದ್ಭಳಕೆ ಮಾಡಲಾಗುತ್ತಿದ್ದೆವೆ ಎಂದರು‌.

ಗೃಹಲಕ್ಷ್ಮೀ ಯೋಜನೆಯ ಪ್ರತಿತಿಂಗಳ ಹಣವನ್ನು ಮಹಿಳೆಯರು ಸಂಸಾರದ ವೆಚ್ಚಕ್ಕೆ, ಪೌಷ್ಠಿಕಾಂಶ ಆಹಾರ ಬಳಸಲು, ಮಕ್ಕಳ ಶಾಲೆ ಟ್ಯೂಷನ್ ಫೀಸಿಗೆ ಬಳಸುತ್ತಿದ್ದಾರೆ. ಹೀಗಿರುವಾಗ ಮಾಜಿ ಸಿಎಂ ಕುಮಾರಸ್ವಾಮಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ ಅವರಿಗೆ ಅವಮಾನ ಮಾಡಿದ್ದಾರೆ‌. ಅವರಿಗೆ ವಾಸ್ತವದ ಅರಿವಿಲ್ಲ ಎಂದು ಟೀಕಿಸಿದರು.

ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ದಿ ಸಾಧ್ಯ ಎಂದು ಜನರನ್ನು ಯಾಮಾರಿಸಿದ ಬಿಜೆಪಿ ಜನರ ಅಭಿವೃದ್ದಿಗಾಗಿ ಯಾವುದಾದರೊಂದು ಯೋಜನೆಗೆ ಜಾರಿಗೊಳಿದ್ದರೆ ತೋರಿಸಲಿ ಎಂದು ಸವಾಲು ಹಾಕಿದರು. ಮುಂದುವರೆದು ಮಾತನಾಡಿದ ಅವರು ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಅಭ್ಯರ್ಥಿ‌ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಅಜಯ್ ಸಿಂಗ್ ಅವರಿಗೆ ಆಶೀರ್ವಾದ ಮಾಡಿದಂತೆ ನನಗೂ ಆಶೀರ್ವಾದ ಮಾಡಿ ಸಂಸದನಾಗಿ ಆಯ್ಕೆ ಮಾಡಿ ಕಳಿಸಿದರೆ, ಜಿಲ್ಲೆಯ ಎಲ್ಲ ಜನಪ್ರತಿನಿದಿಗಳೊಂದಿಗೆ, ಶಾಸಕರೊಂದಿಗೆ ಚರ್ಚೆನಡೆಸಿ ಅಭಿವೃದ್ದಿ ಕೆಲಸ ಮಾಡಲಿದ್ದೇನೆ. ಕಲಬುರಗಿ ಜಿಲ್ಲೆಯ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಿಸಿದ್ದೇನೆ. ನೀವು ಆಶೀರ್ವಾದ ಮಾಡಿ ಸಂಸದನನ್ನಾಗಿ ಆಯ್ಕೆ ಮಾಡಿ‌ಕಳಿಸಿ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ತುಂಬಬೇಕು ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಕೇದಾರಲಿಂಗಯ್ಯ ಮಠಪತಿ, ಶಿವಶರಣಪ್ಪ ಕೋಬಾಳ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಸಿದ್ದಲಿಂಗರೆಡ್ಡಿ ಇತರರು ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

5 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

6 hours ago