ಕಲ್ಯಾಣ ಕರ್ನಾಟಕ ಸೇನೆಯ ಗೌರವಾಧ್ಯಕ್ಷರಾಗಿ ರಮೇಶ ಬೀದರಕರ್ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ಸೇನೆಯ ಕಚೇರಿಯಲ್ಲಿ ಮಂಗಳವಾರ ಸೇನೆಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಭೆ ನಡೆಸಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ದತ್ತು ಹಯ್ಯಾಳಕರ್ ಅಧ್ಯಕ್ಷತೆಯಲ್ಲಿ ಕಲ್ಯಾಣಕರ್ನಾಟಕ ಸೇನೆಯ ನೂತನ ಸಂಘಟನಾ ಗೌರವಾಧ್ಯಕ್ಷರನ್ನಾಗಿ ರಮೇಶ ಬೀದರಕರ್ ಅವರನ್ನು ನೇಮಕ ಮಾಡಲಾಯಿತು.

ಈ ಸಭೆಯಲ್ಲಿ ದತ್ತು ಹಯ್ಯಾಳಕರ್ ಮಾತನಾಡಿ ಕಲ್ಯಾಣ ಕರ್ನಾಟಕ ಸೇನೆಯ ಸಂಘಟನಾ ಸಲಹೆಗಾರರಾ ರಮೇಶ ಬೀದರಕರ್ ಅವರು 8. ವರ್ಷ ಕೆಲಸ ಮಾಡಿದಕ್ಕಾಗಿ ಇವರನ್ನು ಗುರುತಿಸಿ ಸಭೆ ನಡೆಸಿ ಇವರನ್ನು ಗೌರವಾಧ್ಯಕ್ಷರನ್ನಾಗಿ ಮಾಡಲಾಯಿತು.

ಸಮಾಜ ಮುಖಿ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ರಮೇಶ ಬೀದರಕರ್ ಇವರು ಸರಳತೆ, ಸಮಾಜಸೇವೆ ಮತ್ತು ಹೋರಾಟದ ಮನೋಭಾವನೆಯನ್ನು ಪರಿಗಣಿಸಿ ಇವರಿಗೆ ಈ ಸ್ಥಾನವನ್ನು ನೀಡಿದಿವೆ. ಸದರಿ ಸೇನೆಯ ನಿಯಮಾನುಸಾರ ರಾಜ್ಯದಲ್ಲಿ ಶಾಂತಿ ಸುವ್ಯ ವಸ್ಥೆಯನ್ನು ಕಾಪಾಡಿಕೊಂಡು ಹೋಗುವುದು, ಮಹಿಳೆಯರ ಮೇಲೆ ಹಾಗೂ ಶೋಷಿತರ ಮೇಲೆ ನಡೆಯುವ ಅನ್ಯಾಯ, ಅತ್ಯಾಚಾರ, ಶೋಷಣೆ, ದೌರ್ಜನ್ಯ ವಿರೋಧ ಸಂವಿಧಾನ ದಡಿಯಲ್ಲಿ ಹೋರಾಟದ ಮುಖಾಂತರ ನ್ಯಾಯ ದೊರಕಿಸಿಕೊಡುವುದರೊಂದಿಗೆ ಸಂಘಟನೆಯನ್ನು ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಲಿಷ್ಠಗೊಳಿಸಿ ರಾಜ್ಯದ ಎಲ್ಲಾ ಜನರ ಕ್ಷೇಮಾಭಿವೃದ್ಧಿ ಏಳಿಗೆಗಾಗಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗುವದರೊಂದಿಗೆ ಸಂಘಟನೆಯನ್ನು ಇನ್ನು ಹೆಚ್ಚಿನ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುವುದು ಅತಿ ಅವಶ್ಯವಾಗಿದೆ ಎಂದು ಹಯ್ಯಾಳಕರ್ ಹೇಳಿದರು.

ಈ ಸಭೇಯಲ್ಲಿ ಕಾನೂನು ಸಲಹೆಗಾರರಾದ ರವೀಂದ್ರ ಟಿ. ವರ್ಮಾ, ಕಾಶೀನಾಥ ಮೇಲಿನಕೇರಿ, ಮಹಿಳಾ ಜಿಲ್ಲಾಧ್ಯಕ್ಷೆ ಶ್ರೀಮತಿ ಬಿ.ಗೋರಂಪಳ್ಳಿ, ಕಾರ್ಯದರ್ಶಿ ಶ್ರೀದೇವಿ ಮುತ್ತಂಗಿ, ಗಂಗಮ್ಮ ಗೋರೆಗೋಳ ಹಾಗೂ ಸೇನೆಯ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420