ಚಿಂಚೋಳಿ: ಕರ್ನಾಟಕ ತೆಲಂಗಾಣ ಮಧ್ಯೆ ಬೈಕ್ ಸವಾರನ ಓರ್ವ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ ರೂ. 2,29,150 ಮೊತ್ತವನ್ನು ಚಿಂಚೋಳಿ ತಾಲ್ಲೂಕಿನ ಕುಸ್ರಂಪಳ್ಳಿ ಚೆಕ್ ಪೋಸ್ಟ್ ಸಿಬ್ಬಂದಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ರಾಜ್ಯ ಹೆದ್ದಾರಿ 122ರಲ್ಲಿ ಬರುವ ಬೈಕ ಸವಾರನನ್ನು ತಡೆದು ತಪಾಸಣೆ ನಡೆಸಿದ ಸಹಾಯಕ ಚುನಾವಣಾಧಿಕಾರಿ ಸಂತೋಷ ಇನಾಂದಾರ ಅವರು ಈ ಕುರಿತು ಮಾಹಿತಿ ನೀಡಿದ್ದು, ಎಫ್ ಎಸ್.ಸಿ ತಂಡದ ಅಧಿಕಾರಿ ಪ್ರಭುಲಿಂಗ ವಾಲಿ ಮತ್ತು ಸಹಾಯಕ ಜಗನ್ನಾಥ ರಡ್ಡಿ ತುಮಕುಂಟಾ, ತಹಶೀಲ್ದಾರ ಕಚೇರಿಯ ಚುನಾವಣಾ ಶಾಖೆಯ ಸಹಾಯಕ ಶೋಯೇಬ್ ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿ ಹಣ ಜಪ್ತಿ ಮಾಡಿ ಖಜಾನೆಗೆ ತಂದು ಒಪ್ಪಿಸಿದ್ದಾರೆ.
ಚೆಕ್ ಪೋಸ್ಟ ಸಿಬ್ಬಂದಿ ಜಾವೀದ್ ಪಟೇಲ್, ಸಹಾಯಕ ವೀರೇಂದ್ರ ಜಾಬಶೆಟ್ಟಿ, ಪೊಲೀಸ ಕಾನಸ್ಟೇಬಲ ಹಂಸಪಾಲರೆಡ್ಡಿ ಹಾಗೂ ಗೃಹ ರಕ್ಷಕರು ಮತ್ತು ಹಣ ಪತ್ತೆ ಮಾಡಿದ್ದರು. ಉಡುಮನಳ್ಳಿಯ ವಿಶಾಲ ಎಂಬುವವರು ಬೈಕ್ ಮೇಲೆ ಚಿಂಚೋಳಿ ಕಡೆಗೆ ಹೊರಟಾಗ ಚೆಕ್ ಪೋಸ್ಟ ಸಿಬ್ಬಂದಿ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.
ಹಣ ಎಲ್ಲಿಂದ ತಂದಿದ್ದೀರಿ ದಾಖಲೆಯಿದ್ದರೆ ಸಲ್ಲಿಸಿ ಹಣ ಒಯ್ಯಿರಿ ಎಂದರೆ, ವ್ಯಕ್ತಿಯ ಬಲಕಿಯ ಹಣಕ್ಕೆ ಸಂಬಂಧಿಸಿದಂತೆ ದಾಖಲೆಯಿರಲಿಲ್ಲ ಎಂದು ಎಸ್ಎಸ್ಟಿ ಅಧಿಕಾರಿ ಪ್ರಭುಲಿಂಗ ವಾಲಿ ವಿವರಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…